AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ರಾಜ್ಯಾದ್ಯಂತ ವರುಣಾರ್ಭಟ! ಉಡುಪಿ, ಉತ್ತರ ಕನ್ನಡಕ್ಕೆ ರೆಡ್ ಅಲರ್ಟ್​, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ಕರ್ನಾಟಕದಲ್ಲಿ ಮುಂಗಾರು ತೀವ್ರಗೊಂಡಿದ್ದು, ಹವಾಮಾನ ಇಲಾಖೆಯು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಬೆಳಗಾವಿ, ಶಿವಮೊಗ್ಗ ಸೇರಿದಂತೆ ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಒಳನಾಡಿನ ಹಲವು ಪ್ರದೇಶಗಳಲ್ಲಿ ಬಲವಾದ ಗಾಳಿಯೊಂದಿಗೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

Karnataka Weather Forecast: ರಾಜ್ಯಾದ್ಯಂತ ವರುಣಾರ್ಭಟ! ಉಡುಪಿ, ಉತ್ತರ ಕನ್ನಡಕ್ಕೆ ರೆಡ್ ಅಲರ್ಟ್​, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​
ಕರವಳಿಗೆ ರೆಡ್ ಅಲರ್ಟ್​
ಭಾವನಾ ಹೆಗಡೆ
|

Updated on:Jul 07, 2026 | 7:57 AM

Share

ಮುಖ್ಯಾಂಶಗಳು

  • ಕರ್ನಾಟಕದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
  • ದಕ್ಷಿಣ ಕನ್ನಡ ಸೇರಿದಂತೆ ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
  • ಬೆಂಗಳೂರು ಸೇರಿದಂತೆ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಬೆಂಗಳೂರು, ಜುಲೈ 07: ಕರಾವಳಿ ಕರ್ನಾಟಕ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ (Monsoon Rain) ಮತ್ತಷ್ಟು ಚುರುಕುಗೊಂಡಿದ್ದು, ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಿದೆ. ಕರಾವಳಿ ತೀರದಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲೂ ಸಾಧಾರಣದಿಂದ ಭಾರಿ ಮಳೆಯಾಗಲಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ?

ಮಳೆಯ ತೀವ್ರತೆಯನ್ನು ಆಧರಿಸಿ ಹವಾಮಾನ ಇಲಾಖೆಯು ಜಿಲ್ಲಾವಾರು ಅಲರ್ಟ್‌ಗಳನ್ನು ಪ್ರಕಟಿಸಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ಇದರೊಂದಿಗೆ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.

ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ವರದಿ

ಕರಾವಳಿಯ ಜಿಲ್ಲೆಗಳಾದ ಉಡುಪಿ ಮತ್ತು ಉತ್ತರ ಕನ್ನಡದ ಕೆಲವು ಕಡೆಗಳಲ್ಲಿ ಗಾಳಿಯ ವೇಗದೊಂದಿಗೆ ಅತ್ಯಂತ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರದೇಶಗಳಲ್ಲಿ 50-60 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಳಗಾವಿ ಜಿಲ್ಲೆಯಲ್ಲಿ ಅತಿ ಭಾರಿ ಮಳೆಯಾಗಲಿದ್ದರೆ, ಧಾರವಾಡ ಮತ್ತು ಗದಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ. ಹಾವೇರಿ, ವಿಜಯಪುರ, ಕಲಬುರಗಿ, ರಾಯಚೂರು, ಬಾಗಲಕೋಟೆ, ಬೀದರ್, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಇದನ್ನೂ ಓದಿ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ: ಇಂದು ಎಲ್ಲೆಲ್ಲಿ ಶಾಲೆಗಳಿಗೆ ರಜೆ? ಇಲ್ಲಿದೆ ಪೂರ್ತಿ ವಿವರ

ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ದಾವಣಗೆರೆ, ಬಳ್ಳಾರಿ, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ 40 ರಿಂದ 60 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:40 am, Tue, 7 July 26

Follow Us
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಅಧಿಕ ಲಾಭ
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಅಧಿಕ ಲಾಭ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸುರಂಗದೊಳಗೆ ನುಗ್ಗಿದ ನೀರು; ರಸ್ತೆ ಬಂದ್
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸುರಂಗದೊಳಗೆ ನುಗ್ಗಿದ ನೀರು; ರಸ್ತೆ ಬಂದ್
ಇಂಡೋನೇಷ್ಯಾದಲ್ಲಿ ರಾಮಾಯಣದ ತೊಗಲು ಬೊಂಬೆಯಾಟ ನೋಡಿ ಅಚ್ಚರಿಗೊಂಡ ಮೋದಿ
ಇಂಡೋನೇಷ್ಯಾದಲ್ಲಿ ರಾಮಾಯಣದ ತೊಗಲು ಬೊಂಬೆಯಾಟ ನೋಡಿ ಅಚ್ಚರಿಗೊಂಡ ಮೋದಿ
ಗೋಲ್ಡನ್ ಮೆಗಾ ಸ್ಟಾರ್ ಆದ ಗಣೇಶ್; ‘ಪಿನಾಕ’ ವೇದಿಕೆಯಲ್ಲಿ ಸಾಧು ಕೋಕಿಲ ಮಾತು
ಗೋಲ್ಡನ್ ಮೆಗಾ ಸ್ಟಾರ್ ಆದ ಗಣೇಶ್; ‘ಪಿನಾಕ’ ವೇದಿಕೆಯಲ್ಲಿ ಸಾಧು ಕೋಕಿಲ ಮಾತು
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!