AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ರಾಜ್ಯದಲ್ಲಿ ಮುಂದಿನ 5 ದಿನಗಳ ತನಕ ಮಳೆ ಮುಂದುವರೆಯುವ ಸಾಧ್ಯತೆ

ಇಂದು ಮುಂಜಾನೆ ಮಲೆನಾಡು ಭಾಗದಲ್ಲಿ ಸೂರ್ಯನ ಕಿರಣಗಳು ಹೊರಗೆ ಹೊರಟಿದ್ದು ಮಳೆಯ ಅಬ್ಬರ ಕೊಂಚ ಇಳಿಮುಖವಾಗಿದೆ. ಆದರೆ, ಮುಂದಿನ ಐದು ದಿನಗಳ ಕಾಲ ರಾಜ್ಯದ ಅಲ್ಲಲ್ಲಿ ಮಳೆ ಸುರಿಯುವ ಸಾಧ್ಯತೆ ಇದ್ದು, ಕೃಷಿಕರು ಚಿಂತಾಕ್ರಾಂತರಾಗಿದ್ದಾರೆ.

Karnataka Rains: ರಾಜ್ಯದಲ್ಲಿ ಮುಂದಿನ 5 ದಿನಗಳ ತನಕ ಮಳೆ ಮುಂದುವರೆಯುವ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
TV9 Web
| Updated By: Skanda|

Updated on: Jul 25, 2021 | 11:14 AM

Share

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ಅಬ್ಬರಿಸಿರುವ ಮಳೆಯಿಂದಾಗಿ (Karnataka Rains) ಜನಜೀವನ ಅಸ್ತವ್ಯಸ್ತವಾಗಿದೆ. ಎಡೆಬಿಡದೆ ಸುರಿದ ಧಾರಾಕಾರ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಭಾರೀ ಮಳೆಗೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿಪಾತ್ರದ ಜನರಿಗೆ ಪ್ರವಾಹ (Flood) ಭೀತಿ ಎದುರಾಗಿದೆ. ಆದರೆ, ನಿನ್ನೆ ಸಂಜೆಯಿಂದ ಮಳೆಯ ಆರ್ಭಟ ಕೊಂಚ ತಗ್ಗಿದ್ದು, ಪರಿಸ್ಥಿತಿ ಸುಧಾರಿಸಲಿ ಎಂದು ಜನರು ಪ್ರಾರ್ಥಿಸುತ್ತಿದ್ದಾರೆ. ಕರ್ನಾಟಕದಲ್ಲಿ ಮುಂಗಾರು (Monsoon 2021) ಆರಂಭವಾದಾಗಿನಿಂದ ಇಲ್ಲಿಯ ತನಕ ಸರಾಸರಿ 501.6 ಮಿ.ಮೀ ಮಳೆಯಾಗಿದೆ. ಪ್ರತೀ ವರ್ಷ ಸಾಧಾರಣವಾಗಿ 403.8 ಮಿ.ಮೀ ಮಳೆಯಾಗುತ್ತಿತ್ತು. ಆದರೆ, ಈ ಬಾರಿ ಶೇ.24ರಷ್ಟು ಹೆಚ್ಚುವರಿ ಮಳೆ ಸುರಿದಿದೆ. ಬೆಂಗಳೂರಿನಲ್ಲಿ (Bengaluru Rain) ಶನಿವಾರ ರಾತ್ರಿ 8.30ರ ತನಕ ದಾಖಲಾದ ವರದಿ ಪ್ರಕಾರ 24.4 ಮಿ.ಮೀ. ಮಳೆಯಾಗಿದೆ. ಹೆಚ್​ಎಎಲ್​ ಏರ್​ಪೋರ್ಟ್​​ ಒಂದರಲ್ಲೇ 16.6 ಮಿ.ಮೀ ಮಳೆಯಾಗಿರುವುದು ತಿಳಿದು ಬಂದಿದೆ.

ಭಾರೀ ಮಳೆಯಿಂದ ಈಗಾಗಲೇ ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನೀರನ್ನು ಹೊರಗೆ ಬಿಡಲಾಗುತ್ತಿದೆ. ಈ ವರ್ಷ ಕರ್ನಾಟಕದಲ್ಲಿ ಮಳೆಯ ರೌದ್ರಾವತಾರಕ್ಕೆ ಸಿಲುಕಿ 9 ಮಂದಿ ದುರ್ಮರಣಕ್ಕೀಡಾಗಿದ್ದು, ಮೂರು ಜನ ನಾಪತ್ತೆಯಾಗಿದ್ದಾರೆ. ಕಳೆದ 3 ದಿನಗಳಿಂದ ರಾಜ್ಯಾದ್ಯಂತ ಮಳೆಯಬ್ಬರ ಹೆಚ್ಚಾಗಿದ್ದು, ಒಟ್ಟು 8 ಕಡೆ ಭೂ ಕುಸಿತ ಸಂಭವಿಸಿರುವುದು ದಾಖಲಾಗಿದೆ. ಅಪಾಯಕಾರಿ ಪ್ರದೇಶಗಳಲ್ಲಿ ಸಿಲುಕಿದ್ದ ಸುಮಾರು 9 ಸಾವಿರ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ.

ಪ್ರವಾಹ ಪಡೀತ ಪ್ರದೇಶಗಳ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಸರಣಿ ಸಭೆ ಹಾಗೂ ವಿಡಿಯೋ ಕಾನ್ಫರೆನ್ಸ್​​ ನಡೆಸುತ್ತಿದ್ದಾರೆ. ಮುಖ್ಯವಾಗಿ ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು ಮತ್ತು ಧಾರಾವಾಡ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ಪರಿಸ್ಥಿತಿ ಬಗ್ಗೆ ಅವಶ್ಯಕ ಮಾಹಿತಿ ಪಡೆದಿದ್ದಾರೆ. ಸದ್ಯ ಬೆಳಗಾವಿಯಲ್ಲಿ ಉಂಟಾಗಿರುವ ನೆರೆ ಹಾನಿಯನ್ನು ಪರಿಶೀಲಿಸಲು ತೆರಳಿರುವ ಬಿ.ಎಸ್.ಯಡಿಯೂರಪ್ಪ, ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ.

ಭಾರೀ ಮಳೆಯಿಂದಾಗಿ ಕೃಷ್ಣಾ, ಕಾವೇರಿ, ತುಂಗಭದ್ರಾ, ಭೀಮಾ, ಕಪಿಲಾ ಸೇರಿದಂತೆ ಮೊದಲಾದ ನದಿಗಳು ಪ್ರವಾಹ ಮಟ್ಟದಲ್ಲಿ ಹರಿಯುತ್ತಿವೆ. ಸುಮಾರು 131 ಗ್ರಾಮಗಳು, 18 ತಾಲ್ಲೂಕುಗಳು ಜಲಾವೃತವಾಗುವ ಸ್ಥಿತಿಯಲ್ಲಿದ್ದು, 16,213 ಜನರು ಪ್ರವಾಹ ಭೀತಿ ಎದುರಿಸುತ್ತಿದ್ದಾರೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಮಾಹಿತಿ ಪ್ರಕಾರ, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕಳೆದ 7 ದಿನಗಳಲ್ಲಿ ಕ್ರಮವಾಗಿ 500 ಮಿಲಿ ಮೀಟರ್ ಮತ್ತು 1,238 ಮಿಲಿ ಮೀಟರ್ ಮಳೆಯಾಗಿದೆ.

ಇಂದು ಮುಂಜಾನೆ ಮಲೆನಾಡು ಭಾಗದಲ್ಲಿ ಸೂರ್ಯನ ಕಿರಣಗಳು ಹೊರಗೆ ಹೊರಟಿದ್ದು ಮಳೆಯ ಅಬ್ಬರ ಕೊಂಚ ಇಳಿಮುಖವಾಗಿದೆ. ಆದರೆ, ಮುಂದಿನ ಐದು ದಿನಗಳ ಕಾಲ ರಾಜ್ಯದ ಅಲ್ಲಲ್ಲಿ ಮಳೆ ಸುರಿಯುವ ಸಾಧ್ಯತೆ ಇದ್ದು, ಕೃಷಿಕರು ಚಿಂತಾಕ್ರಾಂತರಾಗಿದ್ದಾರೆ.

ಇದನ್ನೂ ಓದಿ: Shivamogga: ಮಳೆಗೆ ನಲುಗಿದ ಶಿವಮೊಗ್ಗ; ಸೋಮಿನಕೊಪ್ಪದಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ಸಾವು 

ಬೆಣ್ಣೆಹಳ್ಳದಲ್ಲಿ ನೋಡ ನೋಡುತ್ತಲೇ ಕೊಚ್ಚಿ ಹೋದ ಸಾಕುನಾಯಿಗಳು; ಹೂಳು ಎತ್ತದ ಕಾರಣ ಹೆಚ್ಚುತ್ತಿದೆ ಅನಾಹುತ

(Karnataka Weather Today Rain likely to be continued for another 5 days)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ