
ಬೆಂಗಳೂರು, ಸೆಪ್ಟೆಂಬರ್ 20: ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆ ಮತ್ತು ಬಲವಾದ ಬಿರುಗಾಳಿಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ವಿಶೇಷವಾಗಿ ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಸಾರ್ವಜನಿಕರು ಮತ್ತು ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಬೆಂಗಳೂರು ಸೇರಿ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆ ಬೀಳುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ.
ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಬೀದರ್ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಬಿರುಗಾಳಿ (30-40 ಕಿ.ಮೀ) ಸಹಿತ ಭಾರಿ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ.
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆಯಿದೆ. ಚಿತ್ರದುರ್ಗ, ಬಳ್ಳಾರಿ, ಹಾಸನ, ರಾಮನಗರ, ಚಾಮರಾಜನಗರ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು ಮತ್ತು ವಿಜಯನಗರ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ.
ನಾಳೆ ರಾಜ್ಯದಾದ್ಯಂತ ಮಳೆಯ ತೀವ್ರತೆ ಮುಂದುವರಿಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯಿದ್ದು, ಬಾಗಲಕೋಟೆ, ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ರಾಮನಗರ ಹಾಗೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣದೊಂದಿಗೆ ಮಳೆ ಮುಂದುವರಿಯಲಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ