AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಜೂ.28ರ ವರೆಗೂ ರಾಜ್ಯದಲ್ಲಿ ವರುಣಾರ್ಭಟ, ಕರಾವಳಿಯಲ್ಲಿ ಭಾರಿ ಮಳೆ ನಿರೀಕ್ಷೆ

Monsoon 2026: ಜೂನ್ 28ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಕರಾವಳಿಯಲ್ಲಿ ವರುಣಾರ್ಭಟ ಹಾಗೂ ಉತ್ತರ ಒಳನಾಡಿನಲ್ಲಿ ಬಿಸಿಗಾಳಿಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿಯೂ ಮಳೆಯ ಸಾಧ್ಯತೆ ಇದ್ದು, ಗುಡುಗು ಸಹಿತ ಮಳೆಯ ಆಗಮನದ ಬಗ್ಗೆ ಎಚ್ಚರಿಸಲಾಗಿದೆ.

Karnataka Weather Forecast: ಜೂ.28ರ ವರೆಗೂ ರಾಜ್ಯದಲ್ಲಿ ವರುಣಾರ್ಭಟ, ಕರಾವಳಿಯಲ್ಲಿ ಭಾರಿ ಮಳೆ ನಿರೀಕ್ಷೆ
ಸಾಂದರ್ಭಿಕ ಚಿತ್ರImage Credit source: PTI
ಪ್ರಸನ್ನ ಹೆಗಡೆ
|

Updated on:Jun 22, 2026 | 4:43 PM

Share

ಬೆಂಗಳೂರು, ಜೂನ್​​ 22: ಮುಂಗಾರು ಮಳೆಯ ಕೊರತೆ ನಡುವೆಯೂ ರಾಜ್ಯದಲ್ಲಿ ಜೂನ್ 28ರವರೆಗೂ ವರುಣಾರ್ಭಟದ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಕರ್ನಾಟದಲ್ಲಿ ಜೂನ್​​ 23 ರಿಂದ 28ರ ವರೆಗೆ ಕೆಲ ಭಾಗಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದ್ದು, ಒಳನಾಡು ಭಾಗದಲ್ಲಿ ಜೂನ್​​ 23ರಿಂದ 25ರವರೆಗೆ ಮತ್ತು ಜೂನ್​​ 27ರಂದು ಮಳೆ ಅಂದಾಜಿಸಲಾಗಿದೆ. ಅದಾಗಿಯೂ ರಾಜ್ಯದ ಕೆಲವೆಡೆ ಬಿಸಿ ಗಾಳಿ ಮತ್ತು ತೇವಾಂಶ ಎಚ್ಚರಿಕೆಯನ್ನೂ ಇಲಾಖೆ ನೀಡಿದೆ.

ಮುಖ್ಯಾಂಶಗಳು

  • ಜೂನ್ 28ರವರೆಗೂ ರಾಜ್ಯದಲ್ಲಿ ಮಳೆ ಮುನ್ಸೂಚನೆ
  • ಕರಾವಳಿ ಕರ್ನಾಟದಲ್ಲಿ ಭಾರಿ ವರುಣಾರ್ಭಟ ನಿರೀಕ್ಷೆ
  • ರಾಜ್ಯದ ಕೆಲವೆಡೆ ಬಿಸಿ ಗಾಳಿ ಮತ್ತು ತೇವಾಂಶ ಎಚ್ಚರಿಕೆ

ಎಲ್ಲೆಲ್ಲಿ ಮಳೆ?

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಗುಡುಗು ಸಹಿತ ಭಾರಿ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗದಲ್ಲಿಯೂ ಗಡುಗು ಸಹಿತ ಸಾಧಾರಣ ಮಳೆ ಅಂದಾಜಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ದಾವಣಗೆರೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗಾಳಿ ಜೊತೆಗೆ ಸಾಧಾರಣ ಅಥವಾ ಮಧ್ಯಮ ಪ್ರಮಾಣದ ಮಳೆ ನಿರೀಕ್ಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 30-40 ಕಿಲೋ ಮೀಟರ್​​ನಷ್ಟು ಇರಬಹುದೆಂದು ಇಲಾಖೆ ತಿಳಿಸಿದೆ. ಬೆಂಗಳೂರು ನಗರದಲ್ಲಿಯೂ ಮಳೆಯ ಸಾಧ್ಯತೆ ಇದ್ದು, ಗುಡುಗು ಸಹಿತ ಮಳೆಯ ಬಗ್ಗೆ ಎಚ್ಚರಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಶೇ 21 ರಷ್ಟು ಮುಂಗಾರು ಮಳೆ ಕೊರತೆ; ಪ್ರಮುಖ ಡ್ಯಾಂಗಳಲ್ಲಿ ತಳ ಸೇರಿದ ನೀರು

ಬಿಸಿ ಗಾಳಿ ಮತ್ತು ತೇವಾಂಶ ಎಚ್ಚರಿಕೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ನಡುವೆಯೂ ಉತ್ತರ ಒಳನಾಡಿನ ಕೆಲವೆಡೆ ಮುಂದಿನ ಎರಡು ದಿನಗಳ ಅವಧಿಗೆ ಬಿಸಿ ಗಾಳಿ ಮತ್ತು ತೇವಾಂಶ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:41 pm, Mon, 22 June 26

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!