
ಬೆಂಗಳೂರು, ಸೆಪ್ಟೆಂಬರ್ 13: ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಕ್ಷೀಣಿಸಿದ್ದು, ಮಿಶ್ರ ವಾತಾವರಣ ನೆಲೆಸಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೇ ಕೆಲವು ಪ್ರದೇಶಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಹೆಚ್ಚಿನ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣದೊಂದಿಗೆ ಶುಷ್ಕ ಹವಾಮಾನ ಮುಂದುವರಿಯಲಿದೆ. ಕೃಷಿ ಚಟುವಟಿಕೆಗಳು ಹಾಗೂ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹವಾಮಾನ ಇಲಾಖೆಯು ಜಿಲ್ಲಾವಾರು ಮುನ್ಸೂಚನೆಯನ್ನು ನೀಡಿದ್ದು, ಸಾರ್ವಜನಿಕರು ಈ ಮಾಹಿತಿಯ ಆಧಾರದ ಮೇಲೆ ತಮ್ಮ ದಿನನಿತ್ಯದ ಯೋಜನೆಯನ್ನು ರೂಪಿಸಿಕೊಳ್ಳಬಹುದು.
ನಾಳೆ ರಾಜ್ಯದ ಹವಾಮಾನದಲ್ಲಿ ಗಮನಾರ್ಹ ಬದಲಾವಣೆ ಕಂಡುಬರಲಿದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಒಣ ಹವೆ ಮತ್ತು ಶುಷ್ಕ ವಾತಾವರಣ ಇರಲಿದೆ. ಆದರೆ, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಗಳ ಒಂದೆರಡು ಕಡೆ ಬಿರುಗಾಳಿ (ಗಂಟೆಗೆ 30-40 ಕಿ.ಮೀ ವೇಗ) ಹಾಗೂ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ