AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯ ಹವಾಮಾನ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ; ಉತ್ತರ ಕರ್ನಾಟಕದಲ್ಲಿ ಬಿಸಿಲಿನ ಧಗೆ

Karnataka Weather Update: ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ಒಣ ಹವೆ ಇರಲಿದೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದರೂ ಉತ್ತರ ಕರ್ನಾಟಕದಲ್ಲಿ ತೀವ್ರ ಬಿಸಿಲಿನ ಧಗೆ ಮುಂದುವರಿಯಲಿದೆ. ಕಲಬುರಗಿಯಲ್ಲಿ 40°C ತಾಪಮಾನ ನಿರೀಕ್ಷಿಸಲಾಗಿದೆ. ರಾಜಧಾನಿ ಬೆಂಗಳೂರಿನ ವಾತಾವರಣ ಒಳಗೊಂಡಂತೆ ಕರ್ನಾಟಕದ ಹವಾಮಾನ ವರದಿ ಇಲ್ಲಿದೆ.

ನಾಳೆಯ ಹವಾಮಾನ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ; ಉತ್ತರ ಕರ್ನಾಟಕದಲ್ಲಿ ಬಿಸಿಲಿನ ಧಗೆ
ಮಳೆ
ಪ್ರಸನ್ನ ಹೆಗಡೆ
|

Updated on: May 10, 2026 | 7:06 PM

Share

ಬೆಂಗಳೂರು, ಮೇ 10: ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ಒಣಹವೆ ಕಂಡುಬರಲಿದೆ. ಅದರ ಹೊರತಾಗಿಯೂ ಕರಾವಳಿ ಭಾಗದ ಎರಡು ಜಿಲ್ಲೆಗಳು ಸೇರಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಸಾಧಾರಣ ಅಥವಾ ಮಧ್ಯಮ ಪ್ರಮಾಣದ ಮಳೆಯನ್ನು ಅಂದಾಜಿಸಲಾಗಿದೆ. ಬೆಂಗಳೂರಿಗರಿಗೂ ನಾಳೆ ಸೆಕೆಯ ಮತ್ತಷ್ಟು ಅನುಭವ ಆಗಲಿದ್ದು, ಉತ್ತರ ಕನರ್ನಟಕಭಾದಲ್ಲಿ ಬಿಸಿಲು ಜನರ ಮೈ ಸುಡಲಿದೆ. ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್​​, ರಾಯಚೂರಿನಲ್ಲಿ 39 ಮತ್ತು ಬೀದರ್​​ನಲ್ಲಿ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ?

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದ್ದು, ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯ ಕೆಲವೆಡೆ ಮಧ್ಯಮ ಪ್ರಮಾಣದ ಮಳೆಯನ್ನು ಅಂದಾಜಿಸಲಾಗಿದೆ. ಹಾಗೆಯೇ ದಕ್ಷಿಣ ಒಳನಾಡು ಭಾಗದ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗದಲ್ಲಿ ಸಣ್ಣ ಅಥವಾ ಮಧ್ಯಮ ಪ್ರಮಾಣದ ಮಳೆಯ ನಿರೀಕ್ಷೆ ಇದೆ.

ಇದನ್ನೂ ಓದಿ: ಮೂಡಿಗೆರೆಯಲ್ಲಿ ಬಿರುಗಾಳಿ ಮಳೆ ಆರ್ಭಟ; ಅಂಗನವಾಡಿ ಶಿಕ್ಷಕಿ ಮನೆಯ ಮೇಲೆ ಬಿದ್ದ ಮರ

ಉಳಿದಂತೆ ಉತ್ತರ ಕನ್ನಡ, ಬಾಗಲಕೋಟೆ, ಬೀದರ್​, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಲ್ಲಿಲ್ಲ ಮಳೆ

ರಾಜಧಾನಿ ಬೆಂಗಳೂರಲ್ಲಿ ನಾಳೆ ಮಳೆಯಾಗುವ ಸಾಧ್ಯತೆ ಇಲ್ಲ. ಬದಲಾಗಿ ನಗರದಲ್ಲಿ ಹಗಲಿನ ವೇಳೆ ಬಿಸಿಲಿನ ವಾತಾವರಣ ಕಂಡುಬರಲಿದೆ. ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್​ ಇರಲಿದ್ದು ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಗಾಳಿಯ ವೇಗ ಗಂಟೆಗೆ 10-15 ಕಿಲೋ ಮೀಟರ್​​ ಇರಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ
'ಉಚಿತ ವಿದ್ಯುತ್' ಯೋಜನೆಗೆ ಸಹಿ ಹಾಕಿದ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್
'ಉಚಿತ ವಿದ್ಯುತ್' ಯೋಜನೆಗೆ ಸಹಿ ಹಾಕಿದ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್
Live: ಆರ್ಟ್ ಆಫ್ ಲಿವಿಂಗ್​ನಲ್ಲಿ ಪ್ರಧಾನಿ ಮೋದಿ ಭಾಷಣ, ನೇರ ಪ್ರಸಾರ
Live: ಆರ್ಟ್ ಆಫ್ ಲಿವಿಂಗ್​ನಲ್ಲಿ ಪ್ರಧಾನಿ ಮೋದಿ ಭಾಷಣ, ನೇರ ಪ್ರಸಾರ
ಮೋದಿಗೆ 13ಕೆಜಿ ತೂಕದ ಬೆಳ್ಳಿ ಪ್ರತಿಮೆ ನೀಡಿ ಸನ್ಮಾನಿಸಿದ ಬಿಜೆಪಿ ನಾಯಕರು
ಮೋದಿಗೆ 13ಕೆಜಿ ತೂಕದ ಬೆಳ್ಳಿ ಪ್ರತಿಮೆ ನೀಡಿ ಸನ್ಮಾನಿಸಿದ ಬಿಜೆಪಿ ನಾಯಕರು