AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಶುಷ್ಕ ಹವಾಮಾನ ಮುಂದುವರಿಕೆ

Karnataka Weather: ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಕೆಲ ದಿನಗಳಿಂದ ಒಣ ಹವೆಯ ವಾತಾವರಣ ಇದ್ದು, ಇಂದೂ ಅದೇ ಹವಾಮಾನವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ನಿನ್ನೆಯಂತೆ ಇಂದೂ ಒಣ ಹವೆ ವಾತಾವರಣವಿರಲಿದ್ದು, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣದ ಮುನ್ಸೂಚನೆ ಇದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಶುಷ್ಕ ಹವಾಮಾನ ಮುಂದುವರಿಕೆ
ರಾಜ್ಯದಲ್ಲಿ ಶುಷ್ಕ ಹವಾಮಾನ ಮುಂದುವರಿಕೆ
ಭಾವನಾ ಹೆಗಡೆ
|

Updated on:Dec 10, 2025 | 7:46 AM

Share

ಬೆಂಗಳೂರು, ಡಿಸೆಂಬರ್ 10: ಬೆಂಗಳೂರು, ಚಿಕ್ಕಬಳ್ಳಾಪುರ, ಸೇರಿದಂತೆ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಲವು ದಿನಗಳಿಂದ ಒಣ ಹವೆಯ ವಾತಾವರಣ (Weather Forecast) ಇದ್ದು, ಇಂದೂ ಅದೇ ಹವಾಮಾನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಇಂದೂ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಒಣ ಹವೆ

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ

ಬೆಂಗಳೂರಲ್ಲಿ ಹಲವು ದಿನಗಳಿಂದ ಮಂಜು ಕವಿದ ವಾತಾವರಣವಿದ್ದು, ಇಂದೂ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಗಾಳಿಯ ವೇಗ ಪ್ರತಿ ಗಂಟೆಗೆ 11 ಕಿ.ಮೀ ಇರಲಿದೆ. ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 16.°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:32 am, Wed, 10 December 25