AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2025-2026ನೇ ಸಾಲಿನ ಕರ್ನಾಟಕ ಪತ್ರಕರ್ತೆಯರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ

2025-2026ನೇ ಸಾಲಿನ ಕರ್ನಾಟಕ ಪತ್ರಕರ್ತೆಯರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು, ಮೂವರನ್ನು ಆಯ್ಕೆ ಮಾಡಲಾಗಿದೆ. ಹಿರಿಯ ಪತ್ರಕರ್ತೆ, ಇಂಡಿಯನ್ ಎಕ್ಸ್ ಪ್ರೆಸ್ ಮತ್ತು ಟೈಮ್ಸ್ ಆಫ್ ಇಂಡಿಯಾ ನಿವೃತ್ತ ಸುದ್ದಿ ಸಂಪಾದಕಿ ಬಿ. ಉತ್ತರಾಕುಮಾರಿ ಹಾಗೂ ಸಂಯಕ್ತ ಕರ್ನಾಟಕ, ಹುಬ್ಬಳ್ಳಿ ಬ್ಯುರೋದಲ್ಲಿ ಹಿರಿಯ ಉಪಸಂಪಾದಕಿ ಆಗಿರುವ ತನುಜಾ ನಾಯಕ್ ಅವರನ್ನು ಆಯ್ಕೆ ಮಾಡಿದ್ದು, ಜುಲೈ ಎರಡನೇ ವಾರ ಪ್ರಶಸ್ತಿ ಪ್ರದಾನ ಕಾರ್ಯಕ್ರ ನಡೆಯಲಿದೆ.

2025-2026ನೇ ಸಾಲಿನ ಕರ್ನಾಟಕ ಪತ್ರಕರ್ತೆಯರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ
ಬಿ. ಉತ್ತರಾಕುಮಾರಿ ,ತನುಜಾ ನಾಯಕ್,ಡಾ. ಭುವನೇಶ್ವರಿ ಕಾಂಬಳೆ
ರಮೇಶ್ ಬಿ. ಜವಳಗೇರಾ
|

Updated on: Jun 26, 2026 | 7:49 PM

Share

ಮುಖ್ಯಾಂಶಗಳು

  • ಕರ್ನಾಟಕ ಪತ್ರಕರ್ತೆಯರ ಸಂಘದ 2025-2026ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟ
  • ಮಾಧ್ಯಮ ಕ್ಷೇತ್ರದಿಂದ ಇಬ್ಬರು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಒಬ್ಬರ ಆಯ್ಕೆ
  • ಜುಲೈ 2ನೇ ವಾರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದ ಸಂಘದ ಅಧ್ಯಕ್ಷೆ ಆರ್. ಪೂರ್ಣಿಮಾ

ಬೆಂಗಳೂರು, (ಜೂನ್ 26): ಕರ್ನಾಟಕ ಪತ್ರಕರ್ತೆಯರ ಸಂಘದ (Karnataka women journalists association) 2025-2026ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ (annual awards) ಮೂವರನ್ನು ಆಯ್ಕೆ ಮಾಡಲಾಗಿದೆ.  ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಇಬ್ಬರು ಪತ್ರಕರ್ತೆಯರು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಒಬ್ಬರು ಸೇರಿದಂತೆ ಮೂವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.  ಬಿ. ಉತ್ತರಾಕುಮಾರಿ,  ತನುಜಾ ನಾಯಕ್  ಹಾಗೂ ಡಾ. ಭುವನೇಶ್ವರಿ ಕಾಂಬಳೆ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಹಿರಿಯ ಪತ್ರಕರ್ತೆ, ಇಂಡಿಯನ್ ಎಕ್ಸ್ ಪ್ರೆಸ್ ಮತ್ತು ಟೈಮ್ಸ್ ಆಫ್ ಇಂಡಿಯಾ ನಿವೃತ್ತ ಸುದ್ದಿ ಸಂಪಾದಕಿ ಬಿ. ಉತ್ತರಾಕುಮಾರಿ ಹಾಗೂ ಸಂಯಕ್ತ ಕರ್ನಾಟಕ, ಹುಬ್ಬಳ್ಳಿ ಬ್ಯುರೋದಲ್ಲಿ ಹಿರಿಯ ಉಪಸಂಪಾದಕಿ ಆಗಿರುವ ತನುಜಾ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಂದು ಕರ್ನಾಟಕ ಪತ್ರಕರ್ತೆಯರ ಸಂಘವು ಪ್ರಕಟಣೆ ಮೂಲಕ ತಿಳಿಸಿದೆ.

ಪತ್ರಿಕೋದ್ಯಮ ಕ್ಷೇತ್ರದ ಹೊರತಾಗಿ ವಿಶಿಷ್ಟ ಸಾಧಕಿಯರಿಗೆ ನೀಡುವ ಪ್ರಶಸ್ತಿಗಾಗಿ ಮಹಿಳಾ ವಲಸೆ ಕಾರ್ಮಿಕರ ಹಕ್ಕು ಮತ್ತು ಸಂಘಟನೆಗಾಗಿ ದುಡಿಯುತ್ತಿರುವ ಇಂಡಿ ಮೂಲದ ಡಾ. ಭುವನೇಶ್ವರಿ ಕಾಂಬಳೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ. ಇನ್ನು ಜುಲೈ ಎರಡನೇ ವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷೆ ಆರ್. ಪೂರ್ಣಿಮಾ ಅವರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಕ್ಲಿಕ್  ಮಾಡಿ

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!