AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಪ್ರಕಟ: ಟಿವಿ9ನ ರಂಗನಾಥ್​​ ಭಾರದ್ವಾಜ್ ಸೇರಿ ಹಲವರಿಗೆ ಗೌರವ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಟಿವಿ9 ಕನ್ನಡದ ರಂಗನಾಥ್ ಎಸ್. ಭಾರದ್ವಾಜ್ ಸೇರಿದಂತೆ ಅನೇಕ ಹಿರಿಯ ಪತ್ರಕರ್ತರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವೃತ್ತಿಪರತೆ, ಸಾಮಾಜಿಕ ಬದ್ಧತೆ ಮತ್ತು ಸಾಧನೆಗಳಿಗಾಗಿ ಈ ಪ್ರಶಸ್ತಿ ನೀಡಲಾಗುತ್ತದೆ. ಮಾರ್ಚ್ 9 ರಂದು ಕೊಪ್ಪಳದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಪ್ರಕಟ: ಟಿವಿ9ನ ರಂಗನಾಥ್​​ ಭಾರದ್ವಾಜ್ ಸೇರಿ ಹಲವರಿಗೆ ಗೌರವ
ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಪ್ರಕಟ: ಟಿವಿ9ನ ರಂಗನಾಥ್​​ ಭಾರದ್ವಾಜ್ ಸೇರಿ ಹಲವರಿಗೆ ಗೌರವ
TV9 Web
| Edited By: |

Updated on:Feb 28, 2025 | 2:56 PM

Share

ಬೆಂಗಳೂರು, ಫೆಬ್ರವರಿ 28: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು (KUWJ Awards) ಶುಕ್ರವಾರ ಪ್ರಕಟಿಸಲಾಗಿದೆ. ಟಿವಿ9 ಕನ್ನಡ ವಾಹಿನಿಯ ರಂಗನಾಥ್ ಎಸ್ ಭಾರದ್ವಾಜ್​​ ಸೇರಿದಂತೆ ಅನೇಕ ಹಿರಿಯ ಪತ್ರಕರ್ತರು ಕೆಯುಡಬ್ಲ್ಯೂಜೆ ವಿಶೇಷ ಪ್ರಶಸ್ತಿಗೆ ಭಾಜರಾಗಿದ್ದಾರೆ.

ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೊಪ್ಪಳದಲ್ಲಿ ಮಾರ್ಚ್​​ 9ರಂದು ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ
Image
ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿಗಳು ಪ್ರಕಟ: ಯಾರಿಗೆ ಯಾವ ಪ್ರಶಸ್ತಿ?
Image
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಸಿದ್ದರಾಮಯ್ಯಗೆ KUWJ ಅಭಿನಂದನೆ
Image
Tv9 ಕನ್ನಡ ಡಿಜಿಟಲ್​ ಡೆಪ್ಯೂಟಿ ಎಡಿಟರ್ ಜಗದೀಶ್ ​​​ಬೆಳ್ಳಿಯಪ್ಪಗೆಪ್ರಶಸ್ತಿ
Image
ಕೆಯುಡಬ್ಲ್ಯೂಜೆ ಪ್ರಶಸ್ತಿಗೆ ಜಿಲ್ಲಾ ಹಾಗೂ ತಾಲೂಕು ಸಂಘದಿಂದ ಅರ್ಜಿ ಆಹ್ವಾನ

ಪ್ರಶಸ್ತಿಗಳ ವಿವರ ಹೀಗಿದೆ

ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ

  • ಸುಬ್ಬು ಹೊಲೆಯಾರ್

ಡಿ.ವಿ.ಜಿ.ಪ್ರಶಸ್ತಿ

  • ರಾಘವೇಂದ್ರ ಗಣಪತಿ: ವಿಜಯವಾಣಿ
  • ಎಚ್. ಎಸ್. ದೊರೆಸ್ವಾಮಿ ಪ್ರಶಸ್ತಿ: ಯು.ಜಿ.ಭಟ್, ಉದಯವಾಣಿ, ಹೊನ್ನಾವರ
  • ಎಸ್.ವಿ. ಜಯಶೀಲರಾವ್ ಪ್ರಶಸ್ತಿ: ಅನು ಶಾಂತರಾಜು, ಹಿರಿಯ ಫೋಟೋ ಜರ್ನಲಿಸ್ಟ್, ತುಮಕೂರು
  • ಪಾಟೀಲ್ ಪುಟ್ಟಪ್ಪ (ಪಾಪು) ಪ್ರಶಸ್ತಿ: ಸುಭಾಷ್ ಹೂಗಾರ, ಹಿರಿಯ ಪತ್ರಕರ್ತರು
  • ಗೊಮ್ಮಟ ಮಾಧ್ಯಮ ಪ್ರಶಸ್ತಿ: ಎಂ.ಆರ್.ಸತ್ಯನಾರಾಯಣ, ಮೈಸೂರು
  • ಸಿ.ಆರ್.ಕೃಷ್ಣರಾವ್ ಪ್ರಶಸ್ತಿ: ಉಗಮ ಶ್ರೀನಿವಾಸ್, ಕನ್ನಡಪ್ರಭ
  • ಶ್ರೀಮತಿ ಯಶೋದಮ್ಮ ಜಿ. ನಾರಾಯಣ ಪ್ರಶಸ್ತಿ: ಮಂಜುಶ್ರೀ ಎಂ ಕಡಕೊಳ, ಪ್ರಜಾವಾಣಿ
  • ಬದರಿನಾಥ ಹೊಂಬಾಳೆ ಪ್ರಶಸ್ತಿ: ಗಂಗಹನುಮಯ್ಯ, ಅಮೃತವಾಣಿ, ತುಮಕೂರು
  • ಡಾ.ಎಂ.ಎಂ.ಕಲ್ಬುರ್ಗಿ ಪ್ರಶಸ್ತಿ: ಡಾ.ಸಿದ್ಧನಗೌಡ ಪಾಟೀಲ್, ಸಂಪಾದಕರು, ಹೊಸತು
  • ಕಿಡಿಶೇಷಪ್ಪ ಪ್ರಶಸ್ತಿ: ಮು.ವೆಂಕಟೇಶಯ್ಯ, ಸಿಂಹ ಬೆಂಗಳೂರು

ರವಿ ಬೆಳಗೆರೆ ಪ್ರಶಸ್ತಿ

  • ಎಂ.ಕೆ.ಹೆಗಡೆ, ಹಿರಿಯ ಪತ್ರಕರ್ತರು, ಬೆಳಗಾವಿ
  • ಪಿ.ಆರ್. ರಾಮಯ್ಯ ಸ್ಮಾರಕ ಪ್ರಶಸ್ತಿ: ಎಂ.ಯೂಸುಫ್ ಪಟೇಲ್, ಹಿರಿಯ ಪತ್ರಕರ್ತರು
  • ಹೆಚ್.ಕೆ. ವೀರಣ್ಣಗೌಡ ಸ್ಮಾರಕ ಪ್ರಶಸ್ತಿ: ಬಸವರಾಜ ಹೆಗ್ಗಡೆ, ಸಂಜೆ ಮಿತ್ರ, ಮಂಡ್ಯ

ರಾಜಶೇಖರ ಕೋಟಿ ಪ್ರಶಸ್ತಿ

  • ಕೆ.ಕೆ.ಬೋಪಣ್ಣ, ಆಂದೋಲನ, ಕೊಡಗು
  • ಪಿ.ರಾಮಯ್ಯ ಪ್ರಶಸ್ತಿ: ಎಸ್.ಟಿ.ರವಿಕುಮಾರ್, ಸ್ಟಾರ್ ಆಫ್​ ಮೈಸೂರು.
  • ಮಾ. ರಾಮಮೂರ್ತಿ ಸ್ಮಾರಕ ಪ್ರಶಸ್ತಿ: ತಾ.ನಂ. ಕುಮಾರಸ್ವಾಮಿ, ಆನೆಕಲ್​
  • ಮಹದೇವ ಪ್ರಕಾಶ್ ಪ್ರಶಸ್ತಿ: ಪ್ರಭುಲಿಂಗ ನಿಲೂರೆ, ವಿಜಯ ಕರ್ನಾಟಕ, ಕಲಬುರ್ಗಿ
  • ಶಿವಮೊಗ್ಗ ಮಿಂಚು ಶ್ರೀನಿವಾಸ ಪ್ರಶಸ್ತಿ: ಚಂದ್ರಶೇಖರ ಶೃಂಗೇರಿ, ಶಿವಮೊಗ್ಗ
  • ಎಚ್.ಎಸ್. ರಂಗಸ್ವಾಮಿ ಪ್ರಶಸ್ತಿ: ಗಿರೀಶ್ ಉಮ್ರಾಯಿ, ಶಿವಮೊಗ್ಗ
  • ಎಂ.ನಾಗೇಂದ್ರ ರಾವ್ ಪ್ರಶಸ್ತಿ: ಕೆ.ಬಿ.ಜಗದೀಶ್, ಸಂಜೆವಾಣಿ, ಕೋಲಾರ
  • ಶ್ರೀಮತಿ ಗಿರಿಜಮ್ಮ, ರುದ್ರಪ್ಪ ತಾಳಿಕೋಟಿ ಪ್ರಶಸ್ತಿ: ಕವಿತ, ಸಂಯುಕ್ತ ಕರ್ನಾಟಕ
  • ಅಪ್ಪಾಜಿಗೌಡ (ಸಿನಿ)ಪ್ರಶಸ್ತಿ: ಗಣೇಶ್ ಕಾಸರಗೋಡು, ಹಿರಿಯ ಪತ್ರಕರ್ತರು
  • ಮೂಡಣ, ಹಾವೇರಿ ಪ್ರಶಸ್ತಿ: ಎಂ.ಚಿರಂಜೀವಿ, ಹಿರಿಯ ಪತ್ರಕರ್ತರು, ಹಾವೇರಿ

ಕೆಯುಡಬ್ಲ್ಯೂಜೆ ವಿಶೇಷ ಪ್ರಶಸ್ತಿಗಳು:

  • ರಂಗನಾಥ್ ಎಸ್ ಭಾರದ್ವಾಜ್- ಟಿವಿ9
  • ರಮಾಕಾಂತ್-ಟಿವಿ5
  • ಶ್ರೀನಿವಾಸ್-ಬೆಂಗಳೂರು
  • ಬಿ.ಪಿಳ್ಳರಾಜು- ಬೆಂಗಳೂರು ಗ್ರಾಮಾಂತರ
  • ಭಾಸ್ಕರ್ ರೈ ಕಟ್ಟ-ಮಂಗಳೂರು
  • ಗುರುಶಾಂತ.ಎನ್ -ಬಳ್ಳಾರಿ
  • ಎಸ್.ಎಂ.ಮನೋಹರ
  • ಹೊಸಪೇಟೆ, ವಿಜಯನಗರ
  • ಸಿ.ಬಿ.ಸುಬೇದಾರ್- ನರಗುಂದ, ಗದಗ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:49 pm, Fri, 28 February 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ