ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಪ್ರಕಟ: ಟಿವಿ9ನ ರಂಗನಾಥ್​​ ಭಾರದ್ವಾಜ್ ಸೇರಿ ಹಲವರಿಗೆ ಗೌರವ

| Updated By: ಗಂಗಾಧರ​ ಬ. ಸಾಬೋಜಿ

Updated on: Feb 28, 2025 | 2:56 PM

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಟಿವಿ9 ಕನ್ನಡದ ರಂಗನಾಥ್ ಎಸ್. ಭಾರದ್ವಾಜ್ ಸೇರಿದಂತೆ ಅನೇಕ ಹಿರಿಯ ಪತ್ರಕರ್ತರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವೃತ್ತಿಪರತೆ, ಸಾಮಾಜಿಕ ಬದ್ಧತೆ ಮತ್ತು ಸಾಧನೆಗಳಿಗಾಗಿ ಈ ಪ್ರಶಸ್ತಿ ನೀಡಲಾಗುತ್ತದೆ. ಮಾರ್ಚ್ 9 ರಂದು ಕೊಪ್ಪಳದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಪ್ರಕಟ: ಟಿವಿ9ನ ರಂಗನಾಥ್​​ ಭಾರದ್ವಾಜ್ ಸೇರಿ ಹಲವರಿಗೆ ಗೌರವ
ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಪ್ರಕಟ: ಟಿವಿ9ನ ರಂಗನಾಥ್​​ ಭಾರದ್ವಾಜ್ ಸೇರಿ ಹಲವರಿಗೆ ಗೌರವ
Follow us on

ಬೆಂಗಳೂರು, ಫೆಬ್ರವರಿ 28: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು (KUWJ Awards) ಶುಕ್ರವಾರ ಪ್ರಕಟಿಸಲಾಗಿದೆ. ಟಿವಿ9 ಕನ್ನಡ ವಾಹಿನಿಯ ರಂಗನಾಥ್ ಎಸ್ ಭಾರದ್ವಾಜ್​​ ಸೇರಿದಂತೆ ಅನೇಕ ಹಿರಿಯ ಪತ್ರಕರ್ತರು ಕೆಯುಡಬ್ಲ್ಯೂಜೆ ವಿಶೇಷ ಪ್ರಶಸ್ತಿಗೆ ಭಾಜರಾಗಿದ್ದಾರೆ.

ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೊಪ್ಪಳದಲ್ಲಿ ಮಾರ್ಚ್​​ 9ರಂದು ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ
ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿಗಳು ಪ್ರಕಟ: ಯಾರಿಗೆ ಯಾವ ಪ್ರಶಸ್ತಿ?
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಸಿದ್ದರಾಮಯ್ಯಗೆ KUWJ ಅಭಿನಂದನೆ
Tv9 ಕನ್ನಡ ಡಿಜಿಟಲ್​ ಡೆಪ್ಯೂಟಿ ಎಡಿಟರ್ ಜಗದೀಶ್ ​​​ಬೆಳ್ಳಿಯಪ್ಪಗೆಪ್ರಶಸ್ತಿ
ಕೆಯುಡಬ್ಲ್ಯೂಜೆ ಪ್ರಶಸ್ತಿಗೆ ಜಿಲ್ಲಾ ಹಾಗೂ ತಾಲೂಕು ಸಂಘದಿಂದ ಅರ್ಜಿ ಆಹ್ವಾನ

ಪ್ರಶಸ್ತಿಗಳ ವಿವರ ಹೀಗಿದೆ

ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ

  • ಸುಬ್ಬು ಹೊಲೆಯಾರ್

ಡಿ.ವಿ.ಜಿ.ಪ್ರಶಸ್ತಿ

  • ರಾಘವೇಂದ್ರ ಗಣಪತಿ: ವಿಜಯವಾಣಿ
  • ಎಚ್. ಎಸ್. ದೊರೆಸ್ವಾಮಿ ಪ್ರಶಸ್ತಿ: ಯು.ಜಿ.ಭಟ್, ಉದಯವಾಣಿ, ಹೊನ್ನಾವರ
  • ಎಸ್.ವಿ. ಜಯಶೀಲರಾವ್ ಪ್ರಶಸ್ತಿ: ಅನು ಶಾಂತರಾಜು, ಹಿರಿಯ ಫೋಟೋ ಜರ್ನಲಿಸ್ಟ್, ತುಮಕೂರು
  • ಪಾಟೀಲ್ ಪುಟ್ಟಪ್ಪ (ಪಾಪು) ಪ್ರಶಸ್ತಿ: ಸುಭಾಷ್ ಹೂಗಾರ, ಹಿರಿಯ ಪತ್ರಕರ್ತರು
  • ಗೊಮ್ಮಟ ಮಾಧ್ಯಮ ಪ್ರಶಸ್ತಿ: ಎಂ.ಆರ್.ಸತ್ಯನಾರಾಯಣ, ಮೈಸೂರು
  • ಸಿ.ಆರ್.ಕೃಷ್ಣರಾವ್ ಪ್ರಶಸ್ತಿ: ಉಗಮ ಶ್ರೀನಿವಾಸ್, ಕನ್ನಡಪ್ರಭ
  • ಶ್ರೀಮತಿ ಯಶೋದಮ್ಮ ಜಿ. ನಾರಾಯಣ ಪ್ರಶಸ್ತಿ: ಮಂಜುಶ್ರೀ ಎಂ ಕಡಕೊಳ, ಪ್ರಜಾವಾಣಿ
  • ಬದರಿನಾಥ ಹೊಂಬಾಳೆ ಪ್ರಶಸ್ತಿ: ಗಂಗಹನುಮಯ್ಯ, ಅಮೃತವಾಣಿ, ತುಮಕೂರು
  • ಡಾ.ಎಂ.ಎಂ.ಕಲ್ಬುರ್ಗಿ ಪ್ರಶಸ್ತಿ: ಡಾ.ಸಿದ್ಧನಗೌಡ ಪಾಟೀಲ್, ಸಂಪಾದಕರು, ಹೊಸತು
  • ಕಿಡಿಶೇಷಪ್ಪ ಪ್ರಶಸ್ತಿ: ಮು.ವೆಂಕಟೇಶಯ್ಯ, ಸಿಂಹ ಬೆಂಗಳೂರು

ರವಿ ಬೆಳಗೆರೆ ಪ್ರಶಸ್ತಿ

  • ಎಂ.ಕೆ.ಹೆಗಡೆ, ಹಿರಿಯ ಪತ್ರಕರ್ತರು, ಬೆಳಗಾವಿ
  • ಪಿ.ಆರ್. ರಾಮಯ್ಯ ಸ್ಮಾರಕ ಪ್ರಶಸ್ತಿ: ಎಂ.ಯೂಸುಫ್ ಪಟೇಲ್, ಹಿರಿಯ ಪತ್ರಕರ್ತರು
  • ಹೆಚ್.ಕೆ. ವೀರಣ್ಣಗೌಡ ಸ್ಮಾರಕ ಪ್ರಶಸ್ತಿ: ಬಸವರಾಜ ಹೆಗ್ಗಡೆ, ಸಂಜೆ ಮಿತ್ರ, ಮಂಡ್ಯ

ರಾಜಶೇಖರ ಕೋಟಿ ಪ್ರಶಸ್ತಿ

  • ಕೆ.ಕೆ.ಬೋಪಣ್ಣ, ಆಂದೋಲನ, ಕೊಡಗು
  • ಪಿ.ರಾಮಯ್ಯ ಪ್ರಶಸ್ತಿ: ಎಸ್.ಟಿ.ರವಿಕುಮಾರ್, ಸ್ಟಾರ್ ಆಫ್​ ಮೈಸೂರು.
  • ಮಾ. ರಾಮಮೂರ್ತಿ ಸ್ಮಾರಕ ಪ್ರಶಸ್ತಿ: ತಾ.ನಂ. ಕುಮಾರಸ್ವಾಮಿ, ಆನೆಕಲ್​
  • ಮಹದೇವ ಪ್ರಕಾಶ್ ಪ್ರಶಸ್ತಿ: ಪ್ರಭುಲಿಂಗ ನಿಲೂರೆ, ವಿಜಯ ಕರ್ನಾಟಕ, ಕಲಬುರ್ಗಿ
  • ಶಿವಮೊಗ್ಗ ಮಿಂಚು ಶ್ರೀನಿವಾಸ ಪ್ರಶಸ್ತಿ: ಚಂದ್ರಶೇಖರ ಶೃಂಗೇರಿ, ಶಿವಮೊಗ್ಗ
  • ಎಚ್.ಎಸ್. ರಂಗಸ್ವಾಮಿ ಪ್ರಶಸ್ತಿ: ಗಿರೀಶ್ ಉಮ್ರಾಯಿ, ಶಿವಮೊಗ್ಗ
  • ಎಂ.ನಾಗೇಂದ್ರ ರಾವ್ ಪ್ರಶಸ್ತಿ: ಕೆ.ಬಿ.ಜಗದೀಶ್, ಸಂಜೆವಾಣಿ, ಕೋಲಾರ
  • ಶ್ರೀಮತಿ ಗಿರಿಜಮ್ಮ, ರುದ್ರಪ್ಪ ತಾಳಿಕೋಟಿ ಪ್ರಶಸ್ತಿ: ಕವಿತ, ಸಂಯುಕ್ತ ಕರ್ನಾಟಕ
  • ಅಪ್ಪಾಜಿಗೌಡ (ಸಿನಿ)ಪ್ರಶಸ್ತಿ: ಗಣೇಶ್ ಕಾಸರಗೋಡು, ಹಿರಿಯ ಪತ್ರಕರ್ತರು
  • ಮೂಡಣ, ಹಾವೇರಿ ಪ್ರಶಸ್ತಿ: ಎಂ.ಚಿರಂಜೀವಿ, ಹಿರಿಯ ಪತ್ರಕರ್ತರು, ಹಾವೇರಿ

ಕೆಯುಡಬ್ಲ್ಯೂಜೆ ವಿಶೇಷ ಪ್ರಶಸ್ತಿಗಳು:

  • ರಂಗನಾಥ್ ಎಸ್ ಭಾರದ್ವಾಜ್- ಟಿವಿ9
  • ರಮಾಕಾಂತ್-ಟಿವಿ5
  • ಶ್ರೀನಿವಾಸ್-ಬೆಂಗಳೂರು
  • ಬಿ.ಪಿಳ್ಳರಾಜು- ಬೆಂಗಳೂರು ಗ್ರಾಮಾಂತರ
  • ಭಾಸ್ಕರ್ ರೈ ಕಟ್ಟ-ಮಂಗಳೂರು
  • ಗುರುಶಾಂತ.ಎನ್ -ಬಳ್ಳಾರಿ
  • ಎಸ್.ಎಂ.ಮನೋಹರ
  • ಹೊಸಪೇಟೆ, ವಿಜಯನಗರ
  • ಸಿ.ಬಿ.ಸುಬೇದಾರ್- ನರಗುಂದ, ಗದಗ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:49 pm, Fri, 28 February 25