AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಎಸ್​ ಅಧಿಕಾರಿ ಪತ್ನಿ ಚೈತ್ರಾರದ್ದು ಕೊಲೆಯಲ್ಲ ಆತ್ಮಹತ್ಯೆ, ಪೊಲೀಸ್​ ತನಿಖೆಯಲ್ಲಿ ಬಯಲು

ಬೆಂಗಳೂರಿನ ​ಸಂಜಯ್​ನಗರದ ಮನೆಯಲ್ಲಿ ಕೆಎ​ಎಸ್ ಅಧಿಕಾರಿ ಪತ್ನಿ, ವಕೀಲೆ ಚೈತ್ರಗೌಡ ಮೃತದೇಹ ನೇಣು ಬಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಚೈತ್ರಗೌಡ ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ದೂರು ನೀಡಿದ್ದರು. ಪ್ರಕರಣ ತನಿಖೆ ನಡೆಸಿದಾಗ, ವಕೀಲೆ ಚೈತ್ರಗೌಡ ಆತ್ಮಹತ್ಯೆ ಮಾಡಿಕೊಂಡಿರುವುದು ಬಯಲಾಗಿದೆ.

ಕೆಎಎಸ್​ ಅಧಿಕಾರಿ ಪತ್ನಿ ಚೈತ್ರಾರದ್ದು ಕೊಲೆಯಲ್ಲ ಆತ್ಮಹತ್ಯೆ, ಪೊಲೀಸ್​ ತನಿಖೆಯಲ್ಲಿ ಬಯಲು
ವಕೀಲೆ ಚೈತ್ರಾಗೌಡ
Follow us
Jagadisha B
| Updated By: ವಿವೇಕ ಬಿರಾದಾರ

Updated on: May 24, 2024 | 2:40 PM

ಬೆಂಗಳೂರು, ಮೇ 24: ಕೆಎಎಸ್​ (KAS) ಆಫೀಸರ್​ ಪತ್ನಿ, ವಕೀಲೆ ಚೈತ್ರಾಗೌಡ (Lawyer Chaitragowda) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವಿಚಾರ ಪೊಲೀಸರ (Police) ತನಿಖೆಯಲ್ಲಿ ಬಯಲಾಗಿದೆ. ವಕೀಲೆ ಚೈತ್ರಾಗೌಡ ಮನೆಯಲ್ಲಿ ಪೊಲೀಸರಿಗೆ ಡೆತ್​ನೋಟ್​ ಸಿಕ್ಕಿತ್ತು. ಈ ಡೆತ್​ನೋಟ್ ಅನ್ನು ಚೈತ್ರಾಗೌಡ ಅವರೇ ಬರೆದಿದ್ದಾರೆ ಎಂದು ತನಿಖೆಯಲ್ಲಿ ದೃಢವಾಗಿದೆ.​​​ ಅಲ್ಲದೆ ಮರಣೋತ್ತರ ಪರೀಕ್ಷೆ ವರದಿಯಲ್ಲೂ ಚೈತ್ರಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಮೂದಿಸಲಾಗಿದೆ. ಈ ಬಗ್ಗೆ ಸಂಜಯನಗರ ಠಾಣೆ ಪೊಲೀಸರು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ವಕೀಲೆ ಚೈತ್ರಾಗೌಡ ಅವರ ಶವ ಮೇ11ರಂದು ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆಗ ಚೈತ್ರಾಗೌಡ ಕುಟುಂಬಸ್ಥರು “ಇದು ಆತ್ಮಹತ್ಯೆ ಅಲ್ಲ ಕೊಲೆ” ಅಂತ ಆರೋಪಿಸಿ ದೂರು ನೀಡಿದ್ದರು. ಚೈತ್ರಾಗೌಡ ಕುಟುಂಬಸ್ಥರ ದೂರಿನನ್ವಯ ಪೊಲೀಸರು ಪತಿ‌ ಕೆಎಎಸ್ ಅಧಿಕಾರಿ ಶಿವಕುಮಾರ್ ಕರೆದು ವಿಚಾರಣೆ ನಡೆಸಿದರು.

ಇದನ್ನೂ ಓದಿ: ಪರಮೇಶ್ವರ್ ತವರು ಕ್ಷೇತ್ರದಲ್ಲಿ ಯೋಧನ ಮೇಲೆ ಮದ್ಯದ ಬಾಟಲಿಯಿಂದ ಮಾರಣಾಂತಿಕ ಹಲ್ಲೆ

ವಿಚಾರಣೆಯಲ್ಲಿ ಕೆಎಎಸ್ ಅಧಿಕಾರಿ ಶಿವಕುಮಾರ್ “ಪತ್ನಿ ಜೊತೆ ಯಾವುದೇ ವೈಷಮ್ಯ ಇರಲಿಲ್ಲ. ಯಾವುದೇ ಹಣಕಾಸಿನ ಸಮಸ್ಯೆ ಸಹ ಇರಲಿಲ್ಲ. ಖಿನ್ನತೆಗೊಳಗಾಗಿದ್ದಳು” ಅಂತ ಪೊಲೀಸರಿಗೆ ಹೇಳಿದ್ದರು.

ಇನ್ನು ವಕೀಲೆ ಚೈತ್ರಾಗೌಡ ಮೂರು ತಿಂಗಳ ಹಿಂದೆಯೇ ಕುಟುಂಬಸ್ಥರ ಎದುರು ಸಾಯುವ ಮಾತಾಡಿದ್ದರು. ಬಳಿಕ ಡೆತ್ ನೋಟ್ ಬರೆದಿಟ್ಟಿದ್ದರು ಎಂದು ಪೊಲೀಸರು ಹಿರಿಯ ಅಧಿಕಾರಿಗಳಿಗೆ ನೀಡಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

ಸಂಜಯ್​ನಗರದ ನಿವಾಸದಲ್ಲಿ ಶವ ಪತ್ತೆ

ವಕೀಲೆ ಚೈತ್ರಾಗೌಡ ಮೂರು ಅಂತಸ್ತಿನ ಅಪಾರ್ಟ್ಮೆಂಟ್​ನಲ್ಲಿ ವಾಸವಾಗಿದ್ದರು. ಎರಡನೇ ಫ್ಲಾಟ್​​ನಲ್ಲಿ ಚೈತ್ರಾಗೌಡ ಅವರ ಕುಟುಂಬಸ್ಥರು ವಾಸವಾಗಿದ್ದು, ಇನ್ನೊಂದು ಫ್ಲಾಟ್​​ನಲ್ಲಿ ಚೈತ್ರಾಗೌಡ ಅವರ ತಮ್ಮ ವಾಸವಾಗಿದ್ದಾರೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಪತಿ ಶಿವಕುಮಾರ್ ಜೊತೆಗೆ ಮಾತನಾಡಿದ್ದಾರೆ. ನಂತರ ತಮ್ಮನ ಜೊತಗೆ ಮಾತನಾಡಿದ್ದಾರೆ. 11 ಗಂಟೆ ಸುಮಾರಿಗೆ ತಮ್ಮ ಅವರ ಮನೆ ಬಳಿ ಹೋಗಿ ಅವರನ್ನು ಕರೆದಿದ್ದಾರೆ. ಆದರೆ ಚೈತ್ರಾಗೌಡ ಸ್ಪಂದಿಸಿಲ್ಲ.

ಈ ವೇಳೆ ಕಿಟಕಿಯಿಂದ ನೋಡಿದಾಗ ಫ್ಯಾನ್​ಗೆ ನೇಣು ಹಾಕಿಕೊಂಡು ಸಾವನಪ್ಪಿರುವುದು ಕಂಡು ಬಂದಿತ್ತು. ತಕ್ಷಣ ಮೃತಳ ತಮ್ಮ ಪೊಲೀಸರಿಗೆ ಮಾಹಿತಿ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​