AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಎಸ್​ ಅಧಿಕಾರಿ ಪತ್ನಿ ಚೈತ್ರಾರದ್ದು ಕೊಲೆಯಲ್ಲ ಆತ್ಮಹತ್ಯೆ, ಪೊಲೀಸ್​ ತನಿಖೆಯಲ್ಲಿ ಬಯಲು

ಬೆಂಗಳೂರಿನ ​ಸಂಜಯ್​ನಗರದ ಮನೆಯಲ್ಲಿ ಕೆಎ​ಎಸ್ ಅಧಿಕಾರಿ ಪತ್ನಿ, ವಕೀಲೆ ಚೈತ್ರಗೌಡ ಮೃತದೇಹ ನೇಣು ಬಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಚೈತ್ರಗೌಡ ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ದೂರು ನೀಡಿದ್ದರು. ಪ್ರಕರಣ ತನಿಖೆ ನಡೆಸಿದಾಗ, ವಕೀಲೆ ಚೈತ್ರಗೌಡ ಆತ್ಮಹತ್ಯೆ ಮಾಡಿಕೊಂಡಿರುವುದು ಬಯಲಾಗಿದೆ.

ಕೆಎಎಸ್​ ಅಧಿಕಾರಿ ಪತ್ನಿ ಚೈತ್ರಾರದ್ದು ಕೊಲೆಯಲ್ಲ ಆತ್ಮಹತ್ಯೆ, ಪೊಲೀಸ್​ ತನಿಖೆಯಲ್ಲಿ ಬಯಲು
ವಕೀಲೆ ಚೈತ್ರಾಗೌಡ
Jagadisha B
| Updated By: ವಿವೇಕ ಬಿರಾದಾರ|

Updated on: May 24, 2024 | 2:40 PM

Share

ಬೆಂಗಳೂರು, ಮೇ 24: ಕೆಎಎಸ್​ (KAS) ಆಫೀಸರ್​ ಪತ್ನಿ, ವಕೀಲೆ ಚೈತ್ರಾಗೌಡ (Lawyer Chaitragowda) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವಿಚಾರ ಪೊಲೀಸರ (Police) ತನಿಖೆಯಲ್ಲಿ ಬಯಲಾಗಿದೆ. ವಕೀಲೆ ಚೈತ್ರಾಗೌಡ ಮನೆಯಲ್ಲಿ ಪೊಲೀಸರಿಗೆ ಡೆತ್​ನೋಟ್​ ಸಿಕ್ಕಿತ್ತು. ಈ ಡೆತ್​ನೋಟ್ ಅನ್ನು ಚೈತ್ರಾಗೌಡ ಅವರೇ ಬರೆದಿದ್ದಾರೆ ಎಂದು ತನಿಖೆಯಲ್ಲಿ ದೃಢವಾಗಿದೆ.​​​ ಅಲ್ಲದೆ ಮರಣೋತ್ತರ ಪರೀಕ್ಷೆ ವರದಿಯಲ್ಲೂ ಚೈತ್ರಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಮೂದಿಸಲಾಗಿದೆ. ಈ ಬಗ್ಗೆ ಸಂಜಯನಗರ ಠಾಣೆ ಪೊಲೀಸರು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ವಕೀಲೆ ಚೈತ್ರಾಗೌಡ ಅವರ ಶವ ಮೇ11ರಂದು ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆಗ ಚೈತ್ರಾಗೌಡ ಕುಟುಂಬಸ್ಥರು “ಇದು ಆತ್ಮಹತ್ಯೆ ಅಲ್ಲ ಕೊಲೆ” ಅಂತ ಆರೋಪಿಸಿ ದೂರು ನೀಡಿದ್ದರು. ಚೈತ್ರಾಗೌಡ ಕುಟುಂಬಸ್ಥರ ದೂರಿನನ್ವಯ ಪೊಲೀಸರು ಪತಿ‌ ಕೆಎಎಸ್ ಅಧಿಕಾರಿ ಶಿವಕುಮಾರ್ ಕರೆದು ವಿಚಾರಣೆ ನಡೆಸಿದರು.

ಇದನ್ನೂ ಓದಿ: ಪರಮೇಶ್ವರ್ ತವರು ಕ್ಷೇತ್ರದಲ್ಲಿ ಯೋಧನ ಮೇಲೆ ಮದ್ಯದ ಬಾಟಲಿಯಿಂದ ಮಾರಣಾಂತಿಕ ಹಲ್ಲೆ

ವಿಚಾರಣೆಯಲ್ಲಿ ಕೆಎಎಸ್ ಅಧಿಕಾರಿ ಶಿವಕುಮಾರ್ “ಪತ್ನಿ ಜೊತೆ ಯಾವುದೇ ವೈಷಮ್ಯ ಇರಲಿಲ್ಲ. ಯಾವುದೇ ಹಣಕಾಸಿನ ಸಮಸ್ಯೆ ಸಹ ಇರಲಿಲ್ಲ. ಖಿನ್ನತೆಗೊಳಗಾಗಿದ್ದಳು” ಅಂತ ಪೊಲೀಸರಿಗೆ ಹೇಳಿದ್ದರು.

ಇನ್ನು ವಕೀಲೆ ಚೈತ್ರಾಗೌಡ ಮೂರು ತಿಂಗಳ ಹಿಂದೆಯೇ ಕುಟುಂಬಸ್ಥರ ಎದುರು ಸಾಯುವ ಮಾತಾಡಿದ್ದರು. ಬಳಿಕ ಡೆತ್ ನೋಟ್ ಬರೆದಿಟ್ಟಿದ್ದರು ಎಂದು ಪೊಲೀಸರು ಹಿರಿಯ ಅಧಿಕಾರಿಗಳಿಗೆ ನೀಡಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

ಸಂಜಯ್​ನಗರದ ನಿವಾಸದಲ್ಲಿ ಶವ ಪತ್ತೆ

ವಕೀಲೆ ಚೈತ್ರಾಗೌಡ ಮೂರು ಅಂತಸ್ತಿನ ಅಪಾರ್ಟ್ಮೆಂಟ್​ನಲ್ಲಿ ವಾಸವಾಗಿದ್ದರು. ಎರಡನೇ ಫ್ಲಾಟ್​​ನಲ್ಲಿ ಚೈತ್ರಾಗೌಡ ಅವರ ಕುಟುಂಬಸ್ಥರು ವಾಸವಾಗಿದ್ದು, ಇನ್ನೊಂದು ಫ್ಲಾಟ್​​ನಲ್ಲಿ ಚೈತ್ರಾಗೌಡ ಅವರ ತಮ್ಮ ವಾಸವಾಗಿದ್ದಾರೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಪತಿ ಶಿವಕುಮಾರ್ ಜೊತೆಗೆ ಮಾತನಾಡಿದ್ದಾರೆ. ನಂತರ ತಮ್ಮನ ಜೊತಗೆ ಮಾತನಾಡಿದ್ದಾರೆ. 11 ಗಂಟೆ ಸುಮಾರಿಗೆ ತಮ್ಮ ಅವರ ಮನೆ ಬಳಿ ಹೋಗಿ ಅವರನ್ನು ಕರೆದಿದ್ದಾರೆ. ಆದರೆ ಚೈತ್ರಾಗೌಡ ಸ್ಪಂದಿಸಿಲ್ಲ.

ಈ ವೇಳೆ ಕಿಟಕಿಯಿಂದ ನೋಡಿದಾಗ ಫ್ಯಾನ್​ಗೆ ನೇಣು ಹಾಕಿಕೊಂಡು ಸಾವನಪ್ಪಿರುವುದು ಕಂಡು ಬಂದಿತ್ತು. ತಕ್ಷಣ ಮೃತಳ ತಮ್ಮ ಪೊಲೀಸರಿಗೆ ಮಾಹಿತಿ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ