AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಆಸಕ್ತ ಯಾತ್ರಾರ್ಥಿಗಳಿಗಾಗಿ ಸಹಾಯಧನದಲ್ಲಿ ಕಾಶಿ ಯಾತ್ರೆ ಪ್ರವಾಸ; ರಾಜ್ಯ ಸರ್ಕಾರ ಆದೇಶ

ಪ್ರತಿಯೊಬ್ಬ ಯಾತ್ರಾರ್ಥಿಗೆ 5 ಸಾವಿರ ರೂ. ಸಹಾಯಧನ ನೀಡಲಾಗುತ್ತಿದ್ದು, ಶೀಘ್ರದಲ್ಲಿಯೇ ಮುಜರಾಯಿ ಇಲಾಖೆಯಿಂದ ಕಾಶಿಯಾತ್ರೆಗೆ ತೆರಳಲು ಆಸಕ್ತಿ ಹೊಂದಿರುವ ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನಿಸಲಿದೆ.

ರಾಜ್ಯದ ಆಸಕ್ತ ಯಾತ್ರಾರ್ಥಿಗಳಿಗಾಗಿ ಸಹಾಯಧನದಲ್ಲಿ ಕಾಶಿ ಯಾತ್ರೆ ಪ್ರವಾಸ; ರಾಜ್ಯ ಸರ್ಕಾರ ಆದೇಶ
ರಾಜ್ಯ ಸರ್ಕಾರ ಆದೇಶ
TV9 Web
| Edited By: |

Updated on:Apr 19, 2022 | 7:53 PM

Share

ಬೆಂಗಳೂರು: ರಾಜ್ಯದ ಆಸಕ್ತ ಯಾತ್ರಾರ್ಥಿಗಳಿಗಾಗಿ ಸಹಾಯಧನದಲ್ಲಿ ಕಾಶಿ (Kashi) ಯಾತ್ರೆ ಪ್ರವಾಸ ಯೋಜನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2022-23ನೇ ಸಾಲಿನ ಆಯವ್ಯಯದಲ್ಲಿ ಪ್ರಸ್ತಾಪಿತ ಕಾಶಿಯಾತ್ರೆ ಪ್ರವಾಸ ಯೋಜನೆ, ಪ್ರತಿ ವರ್ಷ ರಾಜ್ಯದ 30 ಸಾವಿರ ಯಾತ್ರಾರ್ಥಿಗಳು ಸರ್ಕಾರದ ಸಹಾಯಧನದ ಮೂಲಕ ಕಾಶಿಗೆ ತೆರಳಲು ಅವಕಾಶವಿದೆ. ಪ್ರತಿಯೊಬ್ಬ ಯಾತ್ರಾರ್ಥಿಗೆ 5 ಸಾವಿರ ರೂ. ಸಹಾಯಧನ ನೀಡಲಾಗುತ್ತಿದ್ದು, ಶೀಘ್ರದಲ್ಲಿಯೇ ಮುಜರಾಯಿ ಇಲಾಖೆಯಿಂದ ಕಾಶಿಯಾತ್ರೆಗೆ ತೆರಳಲು ಆಸಕ್ತಿ ಹೊಂದಿರುವ ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನಿಸಲಿದೆ.

ಮೇ ತಿಂಗಳಲ್ಲಿ ಚಾರ್​ ಧಾಮ್ ಯಾತ್ರೆಗೆ ವಿಶೇಷ ರಿಯಾಯ್ತಿ ಘೋಷಿಸಿದ ರೈಲ್ವೆ

ದೆಹಲಿ: ಉತ್ತರಾಖಂಡದಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳಗಳಿಗೆ ಪ್ರವಾಸ ಹೊರಡುವ ಆಸೆ ಹೊಂದಿರುವವರಿಗೆ ಐಆರ್​ಸಿಟಿಸಿ ವಿಶೇಷ ರಿಯಾಯ್ತಿ ಘೋಷಿಸಿದೆ. ಹಲವು ಅಗತ್ಯ ಸೌಲಭ್ಯಗಳಿರುವ ಪ್ಯಾಕೇಜ್ ಟೂರ್​ಗಳಲ್ಲಿ ಪ್ರಯಾಣಿಕರಿಗೆ ಸಾಕಷ್ಟು ರಿಯಾಯ್ತಿಯೂ ಸಿಗುತ್ತಿದೆ. ಬದರಿನಾಥ್, ಕೇದಾರ್​ನಾಥ್, ಗಂಗೋತ್ರಿ ಮತ್ತು ಯಮುನೋತ್ರಿಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ಈ ಪ್ಯಾಕೇಜ್​ನಲ್ಲಿದೆ. ಈ ನಾಲ್ಕು ತೀರ್ಥ ಕ್ಷೇತ್ರಗಳ ದರ್ಶನದಿಂದ ಪುಣ್ಯಪ್ರಾಪ್ತಿಯಾಗುತ್ತದೆ ಎಂದು ಹಿಂದೂಗಳು ನಂಬುತ್ತಾರೆ.

ಭಾರತ ಸರ್ಕಾರದ ಆಜಾದಿ ಕ ಅಮೃತ್ ಮಹೋತ್ಸವ್ ಮತ್ತು ದೇಖೋ ಆಪ್ನಾ ದೇಶ್​ ಉಪಕ್ರಮಗಳ ಭಾಗವಾಗಿ ಐಆರ್​ಸಿಟಿಸಿ ಈ ಯೋಜನೆಯನ್ನು ಪರಿಚಯಿಸಿದೆ. ಈ ವರ್ಷ ಕೊರೊನಾ ಪ್ರಕರಣಗಳು ಕಡಿಮೆಯಾಗಿರುವುದರಿಂದ ಸಾಕಷ್ಟು ಜನರು ಈ ಸೌಲಭ್ಯ ಪಡೆದುಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ. ಮೇ 14ರಿಂದ ಆರಂಭವಾಗಿ ಮೇ 25ಕ್ಕೆ ಮುಕ್ತಾಯವಾಗಲಿರುವ ಈ ಯಾತ್ರೆಯು 12 ಹಗಲು ಮತ್ತು 11 ರಾತ್ರಿಗಳ ಪ್ರವಾಸ ಪ್ಯಾಕೇಜ್ ಹೊಂದಿರುತ್ತದೆ. ಹರಿದ್ವಾರ, ಬಾರ್​ಕೊಟ್, ಜಾನಕಿಚಟ್ಟಿ, ಯಮುನೋತ್ರಿ, ಉತ್ತರಕಾಶಿ, ಗಂಗೋತ್ರಿ, ಗುಪ್ತಕಾಶಿ, ಸನ್​ಪ್ರಯಾಗ, ಕೇದಾರನಾಥ, ಬದರಿನಾಥ ಕ್ಷೇತ್ರಗಳನ್ನು ಸಂದರ್ಶಿಸಲಾಗುತ್ತದೆ. ನಾಗಪುರ ಮತ್ತು ದೆಹಲಿ ಮಾರ್ಗವಾಗಿ ವಾಯುಯಾನ ಟಿಕೆಟ್​ಗಳನ್ನೂ ಈ ಪ್ಯಾಕೇಜ್ ಒಳಗೊಂಡಿರುತ್ತದೆ.

ಇದನ್ನೂ ಓದಿ:

ಇಂದು ಬೆಂಗಳೂರಿನಲ್ಲಿ ಮಳೆಗೆ ಬಿಡುವು; ಗ್ರಾಮಾಂತರದಲ್ಲಿ ವರುಣನ ಆರ್ಭಟ, ಹಲವು ಕಡೆ ಭಾರಿ ಅನಾಹುತ

ಡಿಗ್ರಿ ಮುಗಿದು 2ವರ್ಷಗಳಾದರೂ ಸಿಗದ ಉದ್ಯೋಗ; ಕಾಲೇಜು ಸಮೀಪವೇ ಚಹಾ ಮಾರುತ್ತಿರುವ ಯುವತಿ

Published On - 7:52 pm, Tue, 19 April 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ