AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಥಕ್‌ ಗುರು ನಿರುಪಮಾ ರಾಜೇಂದ್ರ ಶಿಷ್ಯೆ ಕು. ಸ್ಫೂರ್ತಿ ಎಸ್‌ ಜೋಷಿ ರಂಗಪ್ರವೇಶ

ಕು. ಸ್ಫೂರ್ತಿ ಎಸ್‌.ಜೋಷಿ ಬಸವನಗುಡಿ ನ್ಯಾಷನಲ್‌ ಕಾಲೇಜ್‌ನಲ್ಲಿ ಮೂಲ ವಿಜ್ಞಾನದಲ್ಲಿ ಪದವಿ ಗಳಿಸಿದ್ದು, ಮಣಿಪಾಲ್‌ ಅಕಾಡೆಮಿ ಆಫ್ ಹೈಯರ್‌ ಎಜುಕೇಷನ್‌ (ಮಾಹೆ) ಸಂಸ್ಥೆಯಿಂದ ಸ್ಟೆಮ್‌ಸೆಲ್‌ ಟೆಕ್ನಾಲಜಿ ಆ್ಯಂಡ್ ರಿಜನರೇಟಿವ್ ಬಯಾಲಜಿಯಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದಾರೆ. ಇವರು ನಿರುಪಮಾ ರಾಜೇಂದ್ರ ಮತ್ತು ಟಿ.ಡಿ.ರಾಜೇಂದ್ರ ಅವರ ಶಿಷ್ಯೆ.

ಕಥಕ್‌ ಗುರು ನಿರುಪಮಾ ರಾಜೇಂದ್ರ ಶಿಷ್ಯೆ ಕು. ಸ್ಫೂರ್ತಿ ಎಸ್‌ ಜೋಷಿ ರಂಗಪ್ರವೇಶ
ಕು.ಸ್ಫೂರ್ತಿ ಎಸ್‌.ಜೋಷಿ ರಂಗಪ್ರವೇಶ
Follow us
TV9 Web
| Updated By: Ganapathi Sharma

Updated on: Dec 03, 2024 | 6:36 PM

ಬೆಂಗಳೂರು. ಡಿಸೆಂಬರ್ 3: ಕಥಕ್‌ ನೃತ್ಯ ಪ್ರಕಾರದ ಖ್ಯಾತ ಗುರುಗಳಾದ ನಿರುಪಮಾ ರಾಜೇಂದ್ರ ಮತ್ತು ಟಿ.ಡಿ.ರಾಜೇಂದ್ರ ಅವರ ಶಿಷ್ಯೆ ಕು.ಸ್ಫೂರ್ತಿ ಎಸ್. ಜೋಷಿ ಅವರ ಕಥಕ್‌ ರಂಗಪ್ರವೇಶ ‘ಆರಾಧನಾ’ ಇತ್ತೀಚೆಗೆ ಬೆಂಗಳೂರಿನ ಹೊಂಬೇಗೌಡ ನಗರದ ಪ್ರಭಾತ್ ಕಲಾ ಸಂಭ್ರಮ ಸಭಾಂಗಣದಲ್ಲಿ ನಡೆಯಿತು. ಸಂಗೀತ ನಾಟಕ ಅಕಾಡೆಮಿ ಪುರಸ್ಕೃತ ನೃತ್ಯ ಗುರುಗಳಾದ ನಿರುಪಮಾ ಮತ್ತು ರಾಜೇಂದ್ರ ಅವರ ಅಭಿನವ ಡ್ಯಾನ್ಸ್‌ ಕಂಪನಿಯಲ್ಲಿ (ಎಡಿಸಿ) 14 ವರ್ಷಗಳಿಂದ ಕಥಕ್‌ ನೃತ್ಯಾಭ್ಯಾಸ ಮಾಡುತ್ತಿರುವ ಕು.ಸ್ಫೂರ್ತಿ ಎಸ್‌.ಜೋಷಿ ಈ ಅಕಾಡೆಮಿಯ ಹಿರಿಯ ನೃತ್ಯ ಗುರು ರೋಹಿಣಿ ಪ್ರಭಾತ್ ಅವರಿಂದಲೂ ಸಾಕಷ್ಟು ನೃತ್ಯ ತರಬೇತಿ ಪಡೆದುಕೊಂಡಿದ್ದಾರೆ. ‘ಬೆಂಗಳೂರು ಗಣೇಶ ಉತ್ಸವ’, ‘ಚಿನ್ನ ಕಲಾ ನಾದಂ’ ನಂತಹ ಪ್ರಮುಖ ವೇದಿಕೆಗಳಲ್ಲಿ ನೃತ್ಯ ಪ್ರದರ್ಶಿಸಿರುವ ಸ್ಫೂರ್ತಿ, ಎಡಿಸಿಯ ಅತ್ಯಂತ ಮಹತ್ವದ ನೃತ್ಯ ಕಾರ್ಯಕ್ರಮಗಳಾದ ‘ರಾಮ ಕಥಾ ವಿಸ್ಮಯ’, ‘ಸಿಲ್ವರ್ ಟು ಸಿಲಿಕಾನ್‌’ ಮೊದಲಾದವುಗಳ ಭಾಗವಾಗಿದ್ದರು.

ಚೆನ್ನೈ, ದೆಹಲಿ ಸಹಿತ ಹಲವು ಕಡೆಗಳಲ್ಲಿ ಅಭಿನವ ತಂಡದೊಂದಿಗೆ ಕಾರ್ಯಕ್ರಮ ನೀಡಿದ್ದಾರೆ. ತಮ್ಮ ಪ್ರತಿಭೆಗಾಗಿ ಅಂತರ ಕಾಲೇಜು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ‘ಕಲಾಸೌರಭ 2020’ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

ಬಸವನಗುಡಿ ನ್ಯಾಷನಲ್‌ ಕಾಲೇಜ್‌ನಲ್ಲಿ ಮೂಲ ವಿಜ್ಞಾನದಲ್ಲಿ ಪದವಿ ಗಳಿಸಿರುವ ಕು.ಸ್ಫೂರ್ತಿ ಎಸ್.ಜೋಷಿ, ಮಣಿಪಾಲ್‌ ಅಕಾಡೆಮಿ ಆಫ್ ಹೈಯರ್‌ ಎಜುಕೇಷನ್‌ (ಮಾಹೆ) ಸಂಸ್ಥೆಯಿಂದ ಸ್ಟೆಮ್‌ಸೆಲ್‌ ಟೆಕ್ನಾಲಜಿ ಆ್ಯಂಡ್ ರಿಜನರೇಟಿವ್ ಬಯಾಲಜಿಯಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದಾರೆ. ಸದ್ಯ ಸ್ಫೂರ್ತಿ ಎಸ್‌.ಜೋಷಿ ಅವರು ಅಭಿನವ ಡ್ಯಾನ್ಸ್‌ ಕಂಪನಿಯಲ್ಲಿ ನೃತ್ಯ ಶಿಕ್ಷಕಿಯಾಗಿದ್ದು, ವಿದ್ಯಾರ್ಥಿಗಳಿಗೆ ಕಥಕ್‌ ನೃತ್ಯಾಭ್ಯಾಸ ಕಲಿಸುತ್ತಿದ್ದಾರೆ.

Kathak artist Nirupama Rajendra's student Spoorthi S Joshi Ranga pravesha at Bangalore

ರಂಗಪ್ರವೇಶ ಕಾರ್ಯಕ್ರಮದಲ್ಲಿ ಪಡಾಂತ್‌ನಲ್ಲಿ ನಿರುಪಮಾ ರಾಜೇಂದ್ರ, ಹಾಡುಗಾರಿಕೆಯಲ್ಲಿ ವಿದ್ವಾನ್ ಕೀರ್ತನ್‌ ಹೊಳ್ಳ, ತಬ್ಲಾದಲ್ಲಿ ವಿದ್ವಾನ್‌ ಪ್ರವೀಣ್‌ ಡಿ.ರಾವ್, ಪಖಾವಾಜ್​ನಲ್ಲಿ ವಿದ್ವಾನ್‌ ಗುರುಮೂರ್ತಿ ವೈದ್ಯ, ಸಿತಾರ್‌ನಲ್ಲಿ ವಿದ್ವಾನ್‌ ಸುಬ್ರಹ್ಮಣ್ಯ ಹೆಗಡೆ, ಬಾನ್ಸುರಿಯಲ್ಲಿ ವಿದ್ವಾನ್‌ ಸಮೀರ್ ರಾವ್, ಸಾರಂಗಿಯಲ್ಲಿ ವಿದ್ವಾನ್‌ ಸರ್ಫ್ರಾಜ್‌ ಖಾನ್‌ ಸಹಕರಿಸಿದರು. ರೋಹಿಣಿ ಪ್ರಭಾತ್ ಮತ್ತು ಮಾನ್ವಿ ರಾಮ್‌ಪ್ರಸಾದ್ ಅವರು ಪೂರ್ವಾಭ್ಯಾಸದಲ್ಲಿ ನೆರವಾಗಿದ್ದಾರೆ.

ಸ್ಫೂರ್ತಿ ಬೆಂಗಳೂರಿನ ಸಂಜಯ್‌ ಜಿ.ಜೋಷಿ ಮತ್ತು ರಜನಿ ಎಸ್‌.ಜೋಷಿ ಅವರ ಪುತ್ರಿ.

ಬೆಂಗಳೂರಿನ ಹೊಂಬೇಗೌಡನಗರದ ಪ್ರಭಾತ್‌ ಕಲಾ ಸಂಭ್ರಮ ಸಭಾಂಗಣದಲ್ಲಿ ನಡೆದ ರಂಗಪ್ರವೇಶ ಕಾರ್ಯಕ್ರಮದಲ್ಲಿ ಕಥಕ್‌ ಗುರುಗಳಾದ ಶ್ರೀಮತಿ ನಿರುಪಮಾ, ಶ್ರೀ ಟಿ.ಡಿ.ರಾಜೇಂದ್ರ, ಶ್ರೀಮತಿ ಮಾಲತಿ ಜೋಷಿ, ಶ್ರೀಮತಿ ಶಶಿಕಲಾ ದಯಾನಂದ್‌, ಸಂಧ್ಯಾ ಚೌಹಾಣ್‌ ಗೋಪಾಲ್ ಪಾಲ್ಗೊಂಡಿದ್ದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ