AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ನಾಳೆಯಿಂದ ಎಂದಿನಂತೆ ಕಾವೇರಿ ನೀರು ಪೂರೈಕೆ: ಬೆಂಗಳೂರು ಜಲ ಮಂಡಳಿ ಹಿರಿಯ ಅಧಿಕಾರಿ

ಬೆಂಗಳೂರಿಗೆ ನಾಳೆಯಿಂದ ಎಂದಿನಂತೆ ಕಾವೇರಿ ನೀರು ಪೂರೈಕೆಯಾಗಲಿದ್ದು, ಬೆಳಗ್ಗೆ ಅಥವಾ ಮಧ್ಯಾಹ್ನದೊಳಗೆ ನೀರು ಪೂರೈಕೆಯಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಲಾಗುತ್ತದೆ ಎಂದು ಬೆಂಗಳೂರು ಜಲ ಮಂಡಳಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಾಹಿತಿ ನೀಡಿದ್ದಾರೆ.

ಬೆಂಗಳೂರಿಗೆ ನಾಳೆಯಿಂದ ಎಂದಿನಂತೆ ಕಾವೇರಿ ನೀರು ಪೂರೈಕೆ: ಬೆಂಗಳೂರು ಜಲ ಮಂಡಳಿ ಹಿರಿಯ ಅಧಿಕಾರಿ
ಬೆಂಗಳೂರು ಜಲ ಮಂಡಳಿ
TV9 Web
| Updated By: ವಿವೇಕ ಬಿರಾದಾರ|

Updated on:Sep 06, 2022 | 10:02 PM

Share

ಬೆಂಗಳೂರು: ಬೆಂಗಳೂರಿಗೆ (Bengaluru) ನಾಳೆಯಿಂದ ಎಂದಿನಂತೆ ಕಾವೇರಿ ನೀರು (Kaveri water) ಪೂರೈಕೆಯಾಗಲಿದ್ದು, ಬೆಳಗ್ಗೆ ಅಥವಾ ಮಧ್ಯಾಹ್ನದೊಳಗೆ ನೀರು ಪೂರೈಕೆಯಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಲಾಗುತ್ತದೆ ಎಂದು ಬೆಂಗಳೂರು ಜಲ ಮಂಡಳಿಯ (BWSSB) ಸಾರ್ವಜನಿಕ ಸಂಪರ್ಕಾಧಿಕಾರಿ ಮಾಹಿತಿ ನೀಡಿದ್ದಾರೆ. ಸದ್ಯ 4TH ಸ್ಟೇಜ್‌ನ ಫೇಸ್ 2ರ ಪಂಪ್‌ ಸಿದ್ಧಗೊಳಿಸಿ ಕಾರ್ಯಾರಂಭ ಮಾಡಲಾಗಿದೆ. ಫೇಸ್‌ 2ರ ಪಂಪ್ ಸೆಟ್‌ 110 ಎಂಎಲ್‌ಡಿ ನೀರು ಸಾಮರ್ಥ್ಯಹೊಂದಿದೆ. ಉಳಿದ ಕಾರ್ಯ ತ್ವರಿತಗತಿಯಲ್ಲಿ ಆಗುತ್ತೆ. ಇಂದು ತಡರಾತ್ರಿಯವರೆಗೆ ದುರಸ್ತಿ ಕಾರ್ಯ ನಡೆಯಲಿದೆ.

ನಾಳೆಯಿಂದ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಗಳೂರು ಜಲಮಂಡಳಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.  ಟಿಕೆ ಹಳ್ಳಿಯಲ್ಲಿ ಮಳೆ ನೀರು ತೆರುವು ಮಾಡಲಾಗಿದೆ. ಟಿಕೆ ಹಳ್ಳಿಯ ಜಲಸಂಗ್ರಹಗಾರದ ಪೇಸ್ 3 ಹಾಗೂ ಪೇಸ್ 4 ಪಂಪ್ ಮೋಟಾರ್ ದುರಸ್ಥಿ ಕಾರ್ಯ ಯಶಸ್ವಿಯಾಗಿದೆ.

14450 ಎಂಎಲ್ ಡಿ ನೀರನ್ನು ಎಂದಿನಂತೆ ಬೆಂಗಳೂರಿಗೆ ಸರಬರಾಜು ಮಾಡಲಾಗುತ್ತೆ ನಾಳೆಯಿಂದ ಬೆಂಗಳೂರು ಜನತೆಗೆ ನೀರಿನ ವ್ಯತ್ಯಯವಾಗೋದಿಲ್ಲ ಅಂತಾ ಜಲಮಂಡಳಿ ಅಧಿಕಾರಿಗಳು ಸಿಎಂ ಬೊಮ್ಮಾಯಿ ಅವರಿಗೆ ಮಾಹಿತಿ ನೀಡಿದ್ದಾರೆ.

ಟಿಕೆ ಹಳ್ಳಿ ಜಲಮಂಡಳಿಗೆ ನುಗ್ಗಿದ ಮಳೆ ನೀರು ಹೊರಕ್ಕೆ; ಯಂತ್ರಗಳಿಗೆ ಚಾಲನೆ ನೀಡಿದ ಅಧಿಕಾರಿಗಳು

ಮಂಡ್ಯ: ಬಿಡಬ್ಲ್ಯೂಎಸ್ಎಸ್​ಬಿ(BWSSB) ಬೆಂಗಳೂರಿಗರಿಗೆ ಗುಡ್ ನ್ಯೂಸ್ ಕೊಟ್ಟಿದೆ. ರಾಜಧಾನಿ ಬೆಂಗಳೂರಿಗೆ ಕಾವೇರಿ ನೀರು ಸರಬರಾಜು ಮಾಡುವ ಟಿಕೆ ಹಳ್ಳಿ ಜಲ ಮಂಡಳಿಗೆ ನೀರು ನುಗ್ಗಿದ್ದು ಯಂತ್ರಗಳು ನೀರಲ್ಲಿ ಮುಳುಗಿದ್ದವು. ಸದ್ಯ ಸಿಬ್ಬಂದಿ ನೀರನ್ನು ತೆರವುಗೊಳಿಸಿ ಯಂತ್ರಗಳನ್ನು ಪರಿಶೀಲಿಸಿ ಮರು ಚಾಲನೆಗೆ ಸಿದ್ಧರಾಗಿದ್ದಾರೆ. ಈ ಮೂಲಕ ಕಾವೇರಿ ಜಲಾಯನ ಅಧಿಕಾರಿಗಳು ರಾಜಧಾನಿ ಮಂದಿಗೆ ರಿಲೀಫ್ ಕೊಟ್ಟಿದ್ದಾರೆ.

ನಿನ್ನೆ ಸುರಿದ ಭಾರೀ ಮಳೆಯಿಂದ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಟಿಕೆ ಹಳ್ಳಿ ಜಲ ಮಂಡಳಿಗೆ ನೀರು ನುಗ್ಗಿತ್ತು. ನೀರು ನುಗಿದ್ದ ಪರಿಣಾಮ ಸೆಕ್ಟರ್ 4 ರ ನೀರು ಸರಬರಾಜು ಕೇಂದ್ರಗಳು ಮುಳುಗಡೆಯಾಗಿದ್ದವು. ಟಿಕೆ ಹಳ್ಳಿಯ ಕಾವೇರಿ ಜಲಾಯನ ಕೇಂದ್ರ ರಾಜಧಾನಿ ಬೆಂಗಳೂರಿಗೆ ಕಾವೇರಿ ನೀರು ಸರಬರಾಜು ಮಾಡುವ ಕೆಲಸ ಮಾಡುತ್ತದೆ. ಸದ್ಯ ನೀರು ತಗಿಯುವಲ್ಲಿ ಸಿಬ್ಬಂದಿ ಭಾಗಶಃ ಯಶಸ್ವಿಯಾಗಿದ್ದಾರೆ. ಕಾವೇರಿ ಜಲಮಂಡಳಿಯ 4 ನೇ ಹಂತಕ್ಕೆ ಮಳೆ ನೀರು ನುಗ್ಗಿದೆ. BWSSB ಅಧಿಕಾರಿಗಳು ಈಗಾಗ್ಲೆ ಒಂದು ಯಂತ್ರವನ್ನ ಪ್ರಾಯೋಗಿಕವಾಗಿ ಚಾಲನೆ ಕೊಟ್ಟಿದ್ದಾರೆ. ನಾಳೆ ಮಧ್ಯಾಹ್ನದ ವೇಳೆಗೆ ಎಲ್ಲಾ ಯಂತ್ರಗಳನ್ನೂ ಚಾಲನೆ ಮಾಡುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದು ನಾಳೆ ಮಧ್ಯಾಹ್ನದಿಂದಲೇ ಯಂತ್ರಗಳು ಕೆಲಸ ಮಾಡಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:41 pm, Tue, 6 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ