AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ನಾಳೆಯಿಂದ ಎಂದಿನಂತೆ ಕಾವೇರಿ ನೀರು ಪೂರೈಕೆ: ಬೆಂಗಳೂರು ಜಲ ಮಂಡಳಿ ಹಿರಿಯ ಅಧಿಕಾರಿ

ಬೆಂಗಳೂರಿಗೆ ನಾಳೆಯಿಂದ ಎಂದಿನಂತೆ ಕಾವೇರಿ ನೀರು ಪೂರೈಕೆಯಾಗಲಿದ್ದು, ಬೆಳಗ್ಗೆ ಅಥವಾ ಮಧ್ಯಾಹ್ನದೊಳಗೆ ನೀರು ಪೂರೈಕೆಯಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಲಾಗುತ್ತದೆ ಎಂದು ಬೆಂಗಳೂರು ಜಲ ಮಂಡಳಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಾಹಿತಿ ನೀಡಿದ್ದಾರೆ.

ಬೆಂಗಳೂರಿಗೆ ನಾಳೆಯಿಂದ ಎಂದಿನಂತೆ ಕಾವೇರಿ ನೀರು ಪೂರೈಕೆ: ಬೆಂಗಳೂರು ಜಲ ಮಂಡಳಿ ಹಿರಿಯ ಅಧಿಕಾರಿ
ಬೆಂಗಳೂರು ಜಲ ಮಂಡಳಿ
TV9 Web
| Edited By: |

Updated on:Sep 06, 2022 | 10:02 PM

Share

ಬೆಂಗಳೂರು: ಬೆಂಗಳೂರಿಗೆ (Bengaluru) ನಾಳೆಯಿಂದ ಎಂದಿನಂತೆ ಕಾವೇರಿ ನೀರು (Kaveri water) ಪೂರೈಕೆಯಾಗಲಿದ್ದು, ಬೆಳಗ್ಗೆ ಅಥವಾ ಮಧ್ಯಾಹ್ನದೊಳಗೆ ನೀರು ಪೂರೈಕೆಯಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಲಾಗುತ್ತದೆ ಎಂದು ಬೆಂಗಳೂರು ಜಲ ಮಂಡಳಿಯ (BWSSB) ಸಾರ್ವಜನಿಕ ಸಂಪರ್ಕಾಧಿಕಾರಿ ಮಾಹಿತಿ ನೀಡಿದ್ದಾರೆ. ಸದ್ಯ 4TH ಸ್ಟೇಜ್‌ನ ಫೇಸ್ 2ರ ಪಂಪ್‌ ಸಿದ್ಧಗೊಳಿಸಿ ಕಾರ್ಯಾರಂಭ ಮಾಡಲಾಗಿದೆ. ಫೇಸ್‌ 2ರ ಪಂಪ್ ಸೆಟ್‌ 110 ಎಂಎಲ್‌ಡಿ ನೀರು ಸಾಮರ್ಥ್ಯಹೊಂದಿದೆ. ಉಳಿದ ಕಾರ್ಯ ತ್ವರಿತಗತಿಯಲ್ಲಿ ಆಗುತ್ತೆ. ಇಂದು ತಡರಾತ್ರಿಯವರೆಗೆ ದುರಸ್ತಿ ಕಾರ್ಯ ನಡೆಯಲಿದೆ.

ನಾಳೆಯಿಂದ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಗಳೂರು ಜಲಮಂಡಳಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.  ಟಿಕೆ ಹಳ್ಳಿಯಲ್ಲಿ ಮಳೆ ನೀರು ತೆರುವು ಮಾಡಲಾಗಿದೆ. ಟಿಕೆ ಹಳ್ಳಿಯ ಜಲಸಂಗ್ರಹಗಾರದ ಪೇಸ್ 3 ಹಾಗೂ ಪೇಸ್ 4 ಪಂಪ್ ಮೋಟಾರ್ ದುರಸ್ಥಿ ಕಾರ್ಯ ಯಶಸ್ವಿಯಾಗಿದೆ.

14450 ಎಂಎಲ್ ಡಿ ನೀರನ್ನು ಎಂದಿನಂತೆ ಬೆಂಗಳೂರಿಗೆ ಸರಬರಾಜು ಮಾಡಲಾಗುತ್ತೆ ನಾಳೆಯಿಂದ ಬೆಂಗಳೂರು ಜನತೆಗೆ ನೀರಿನ ವ್ಯತ್ಯಯವಾಗೋದಿಲ್ಲ ಅಂತಾ ಜಲಮಂಡಳಿ ಅಧಿಕಾರಿಗಳು ಸಿಎಂ ಬೊಮ್ಮಾಯಿ ಅವರಿಗೆ ಮಾಹಿತಿ ನೀಡಿದ್ದಾರೆ.

ಟಿಕೆ ಹಳ್ಳಿ ಜಲಮಂಡಳಿಗೆ ನುಗ್ಗಿದ ಮಳೆ ನೀರು ಹೊರಕ್ಕೆ; ಯಂತ್ರಗಳಿಗೆ ಚಾಲನೆ ನೀಡಿದ ಅಧಿಕಾರಿಗಳು

ಮಂಡ್ಯ: ಬಿಡಬ್ಲ್ಯೂಎಸ್ಎಸ್​ಬಿ(BWSSB) ಬೆಂಗಳೂರಿಗರಿಗೆ ಗುಡ್ ನ್ಯೂಸ್ ಕೊಟ್ಟಿದೆ. ರಾಜಧಾನಿ ಬೆಂಗಳೂರಿಗೆ ಕಾವೇರಿ ನೀರು ಸರಬರಾಜು ಮಾಡುವ ಟಿಕೆ ಹಳ್ಳಿ ಜಲ ಮಂಡಳಿಗೆ ನೀರು ನುಗ್ಗಿದ್ದು ಯಂತ್ರಗಳು ನೀರಲ್ಲಿ ಮುಳುಗಿದ್ದವು. ಸದ್ಯ ಸಿಬ್ಬಂದಿ ನೀರನ್ನು ತೆರವುಗೊಳಿಸಿ ಯಂತ್ರಗಳನ್ನು ಪರಿಶೀಲಿಸಿ ಮರು ಚಾಲನೆಗೆ ಸಿದ್ಧರಾಗಿದ್ದಾರೆ. ಈ ಮೂಲಕ ಕಾವೇರಿ ಜಲಾಯನ ಅಧಿಕಾರಿಗಳು ರಾಜಧಾನಿ ಮಂದಿಗೆ ರಿಲೀಫ್ ಕೊಟ್ಟಿದ್ದಾರೆ.

ನಿನ್ನೆ ಸುರಿದ ಭಾರೀ ಮಳೆಯಿಂದ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಟಿಕೆ ಹಳ್ಳಿ ಜಲ ಮಂಡಳಿಗೆ ನೀರು ನುಗ್ಗಿತ್ತು. ನೀರು ನುಗಿದ್ದ ಪರಿಣಾಮ ಸೆಕ್ಟರ್ 4 ರ ನೀರು ಸರಬರಾಜು ಕೇಂದ್ರಗಳು ಮುಳುಗಡೆಯಾಗಿದ್ದವು. ಟಿಕೆ ಹಳ್ಳಿಯ ಕಾವೇರಿ ಜಲಾಯನ ಕೇಂದ್ರ ರಾಜಧಾನಿ ಬೆಂಗಳೂರಿಗೆ ಕಾವೇರಿ ನೀರು ಸರಬರಾಜು ಮಾಡುವ ಕೆಲಸ ಮಾಡುತ್ತದೆ. ಸದ್ಯ ನೀರು ತಗಿಯುವಲ್ಲಿ ಸಿಬ್ಬಂದಿ ಭಾಗಶಃ ಯಶಸ್ವಿಯಾಗಿದ್ದಾರೆ. ಕಾವೇರಿ ಜಲಮಂಡಳಿಯ 4 ನೇ ಹಂತಕ್ಕೆ ಮಳೆ ನೀರು ನುಗ್ಗಿದೆ. BWSSB ಅಧಿಕಾರಿಗಳು ಈಗಾಗ್ಲೆ ಒಂದು ಯಂತ್ರವನ್ನ ಪ್ರಾಯೋಗಿಕವಾಗಿ ಚಾಲನೆ ಕೊಟ್ಟಿದ್ದಾರೆ. ನಾಳೆ ಮಧ್ಯಾಹ್ನದ ವೇಳೆಗೆ ಎಲ್ಲಾ ಯಂತ್ರಗಳನ್ನೂ ಚಾಲನೆ ಮಾಡುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದು ನಾಳೆ ಮಧ್ಯಾಹ್ನದಿಂದಲೇ ಯಂತ್ರಗಳು ಕೆಲಸ ಮಾಡಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:41 pm, Tue, 6 September 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?