AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸಚಿವರ ಕ್ಷೇತ್ರದಲ್ಲೇ ರೋಗಿಗಳ ಪರದಾಟ : ಆಸ್ಪತ್ರೆ ಸಿಬ್ಬಂದಿಯನ್ನು ಜನಗಣತಿಗೆ ಬಳಸಿದ್ರೆ ಬಡ ರೋಗಿಗಳ ಗತಿಯೇನು?

ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿಯನ್ನು ಜನಗಣತಿ ಕಾರ್ಯಕ್ಕೆ ನಿಯೋಜಿಸಿರುವುದರಿಂದ ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಎಕ್ಸರೆ, ಲ್ಯಾಬ್ ಪರೀಕ್ಷೆಗಳು ಮತ್ತು ಫಿಸಿಯೋಥೆರಪಿ ಸೇವೆಗಳು ಸಿಗದೆ ನೂರಾರು ಮಂದಿ ಪರದಾಡುತ್ತಿದ್ದಾರೆ. ಆರೋಗ್ಯ ಸೇವೆಗಳಿಗೆ ಆದ್ಯತೆ ನೀಡದೆ ಸಿಬ್ಬಂದಿಯನ್ನು ಬೇರೆ ಕೆಲಸಕ್ಕೆ ಬಳಸಿಕೊಂಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಮಸ್ಯೆ ಬಡ ರೋಗಿಗಳ ಮೇಲೆ ತೀವ್ರ ಪರಿಣಾಮ ಬೀರಿದೆ.

ಆರೋಗ್ಯ ಸಚಿವರ ಕ್ಷೇತ್ರದಲ್ಲೇ ರೋಗಿಗಳ ಪರದಾಟ : ಆಸ್ಪತ್ರೆ ಸಿಬ್ಬಂದಿಯನ್ನು ಜನಗಣತಿಗೆ ಬಳಸಿದ್ರೆ ಬಡ ರೋಗಿಗಳ ಗತಿಯೇನು?
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Apr 27, 2026 | 3:43 PM

Share

ಬೆಂಗಳೂರು, ಏ.27: ರಾಜ್ಯದ ರಾಜಧಾನಿಯಲ್ಲೇ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡ ರೋಗಿಗಳ ಪರದಾಟ ಮುಂದುವರಿದಿದೆ. ಅದರಲ್ಲೂ ಸ್ವತಃ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕ್ಷೇತ್ರಕ್ಕೆ ಒಳಪಡುವ ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ಜನ ಹೈರಾಣಾಗಿದ್ದಾರೆ. ಈ ಹಿಂದೆಯೇ ಇಂತಹ ಸಮಸ್ಯೆಗಳು ಬರಬಹುದು ಎಂಬ ಮಾಹಿತಿ ವರದಿಯಾಗಿತ್ತು.

ಬೆಂಗಳೂರಿನಲ್ಲಿ ನಡೆಯುತ್ತಿರುವ ಜನಗಣತಿ ಕಾರ್ಯಕ್ಕೆ ಆಸ್ಪತ್ರೆಯ ವೈದ್ಯಕೀಯ ಮತ್ತು ತಾಂತ್ರಿಕ ಸಿಬ್ಬಂದಿಯನ್ನು ಬಳಸಿಕೊಳ್ಳುತ್ತಿರುವುದು ಈ ಅವ್ಯವಸ್ಥೆಗೆ ಕಾರಣವಾಗಿದೆ. ಕೆ.ಸಿ. ಜನರಲ್ ಆಸ್ಪತ್ರೆಯ ಸುಮಾರು 20ಕ್ಕೂ ಹೆಚ್ಚು ಪ್ರಮುಖ ನೌಕರರನ್ನು ಜನಗಣತಿ ಕಾರ್ಯಕ್ಕೆ ನಿಯೋಜಿಸಲಾಗಿದೆ. ಇದರಿಂದಾಗಿ ಆಸ್ಪತ್ರೆಯ ಪ್ರಮುಖ ವಿಭಾಗಗಳೇ ಸ್ಥಗಿತಗೊಂಡಿವೆ.

ಸಿಬ್ಬಂದಿ ಕೊರತೆಯಿಂದಾಗಿ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ರೋಗಿಗಳು ಆಸ್ಪತ್ರೆ ಸೌಲಭ್ಯಗಳಿಂದ ಹಾಗೂ ಸೇವೆಯಿಂದ ವಂಚಿತರಾಗುತ್ತಿದ್ದಾರೆ. ಪ್ರತಿದಿನ ಇಲ್ಲಿ 100 ರಿಂದ 120 ಎಕ್ಸರೆಗಳನ್ನು ಮಾಡಲಾಗುತ್ತಿತ್ತು. ಆದರೆ ಇಂದು ಕೇವಲ 20 ಎಕ್ಸರೆ ಮಾತ್ರ ಮಾಡಲಾಗಿದ್ದು, ಉಳಿದ ರೋಗಿಗಳು ಪರದಾಡುತ್ತಿದ್ದಾರೆ. ಲ್ಯಾಬ್‌ಗೆ ದಿನಕ್ಕೆ 600ಕ್ಕೂ ಹೆಚ್ಚು ಕೇಸ್‌ಗಳು ಬರುತ್ತವೆಯಾದರೂ ಸಿಬ್ಬಂದಿ ಇಲ್ಲದೆ ಪರೀಕ್ಷೆಗಳು ವಿಳಂಬವಾಗುತ್ತಿವೆ. ಇನ್ನು ಫಿಸಿಯೋಥೆರಫಿಗೆ 40 ಜನ ಬಂದರೆ ಕೇವಲ 10 ಜನರಿಗೆ ಮಾತ್ರ ಚಿಕಿತ್ಸೆ ಸಿಗುತ್ತಿದೆ.

ಇದನ್ನೂ ಓದಿ: ಡಿ ಸುಧಾಕರ್ ಆರೋಗ್ಯ ಸಹಜಸ್ಥಿತಿಯಲ್ಲಿದೆ: ಸಚಿವರ ಹೆಲ್ತ್​​ ಅಪ್ಡೇಟ್ ಕೊಟ್ಟ ಗೃಹಸಚಿವ ಡಾ ಜಿ ಪರಮೇಶ್ವರ್

ಲ್ಯಾಬ್ ಟೆಕ್ನಿಶಿಯನ್, ಎಕ್ಸರೆ ಟೆಕ್ನಾಲಜಿಸ್ಟ್, ಫಿಸಿಯೋಥೆರಫಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ನೇತ್ರಾಧಿಕಾರಿ ಮತ್ತು ಲಸಿಕಾ ಸಿಬ್ಬಂದಿ ಸೇರಿದಂತೆ ಆಡಳಿತ ವಿಭಾಗದ ನೌಕರರನ್ನು ಜನಗಣತಿಗೆ ಕಳುಹಿಸಲಾಗಿದೆ. ದೂರದ ಊರುಗಳಿಂದ ಮತ್ತು ನಗರದ ವಿವಿಧ ಭಾಗಗಳಿಂದ ನಂಬಿ ಬರುವ ರೋಗಿಗಳು, ಟೆಸ್ಟ್ ಮಾಡಿಸಲು ಸಾಧ್ಯವಾಗದೆ ಖಾಸಗಿ ಲ್ಯಾಬ್‌ಗಳತ್ತ ಮುಖ ಮಾಡುವಂತಾಗಿದೆ. “ಆರೋಗ್ಯ ಸೇವೆ ನೀಡುವುದು ಮೊದಲ ಆದ್ಯತೆಯಾಗಬೇಕಿತ್ತು, ಅದನ್ನು ಬಿಟ್ಟು ಸಿಬ್ಬಂದಿಯನ್ನು ಬೇರೆ ಕೆಲಸಕ್ಕೆ ಬಳಸಿಕೊಂಡರೆ ಬಡ ರೋಗಿಗಳ ಗತಿಯೇನು?” ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ
ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ
ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ
ಕೊಪ್ಪಳದಲ್ಲಿ ನಿಲ್ಲದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ
ಕೊಪ್ಪಳದಲ್ಲಿ ನಿಲ್ಲದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ
ಬೆಳ್ಳಂಬೆಳಗ್ಗೆ ಸಫಾರಿ ತೆರಳಿದವರಿಗೆ ದರ್ಶನ ಕೊಟ್ಟ ಅಪರೂಪದ ಕರಿಚಿರತೆ!
ಬೆಳ್ಳಂಬೆಳಗ್ಗೆ ಸಫಾರಿ ತೆರಳಿದವರಿಗೆ ದರ್ಶನ ಕೊಟ್ಟ ಅಪರೂಪದ ಕರಿಚಿರತೆ!
ಡೋಲು ಬಾರಿಸುತ್ತಾ ಭರ್ಜರಿ ಡ್ಯಾನ್ಸ್ ಮಾಡಿದ ಶಾಸಕ ಶಿವಲಿಂಗೇಗೌಡ
ಡೋಲು ಬಾರಿಸುತ್ತಾ ಭರ್ಜರಿ ಡ್ಯಾನ್ಸ್ ಮಾಡಿದ ಶಾಸಕ ಶಿವಲಿಂಗೇಗೌಡ
ರೈಲಿನಿಂದ ಮಗು ಬಿದ್ದೇಬಿಡ್ತು, ಚೈನ್ ಎಳೆದರೂ ನಿಲ್ಲದ ರೈಲು
ರೈಲಿನಿಂದ ಮಗು ಬಿದ್ದೇಬಿಡ್ತು, ಚೈನ್ ಎಳೆದರೂ ನಿಲ್ಲದ ರೈಲು