AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ದೂರಿಯಾಗಿ ಆರಂಭವಾದ 6 ತಿಂಗಳಿಗೆ ನಿಂತ ಕೆಂಪೇಗೌಡ ಏರ್ಪೋರ್ಟ್ ರೈಲು; ಲಾಕ್​ಡೌನ್​ ಮುಗಿದರೂ ಸಂಚಾರ ಸ್ಥಗಿತ

ಬಸ್ಸಿನಲ್ಲಿ 250 ಮತ್ತು ಟ್ಯಾಕ್ಸಿಯಲ್ಲಿ 800 ರೂಪಾಯಿ ಕೊಟ್ಟು ಏರ್ಪೋರ್ಟ್​ಗೆ ಬರಬೇಕು. ಏರ್ಪೋರ್ಟ್​ ಮತ್ತು ಚಿಕ್ಕಬಳ್ಳಾಪುರ ಮೂಲಕ ಕೋಲಾರಕ್ಕೆ ತೆರಳುತ್ತಿದ್ದ ರೈಲು ಈಗ ಸ್ಥಗಿತವಾಗಿದೆ. ಮತ್ತೆ ಏರ್ಪೋರ್ಟ್​ಗೆ ರೈಲು ಸೇವೆ ಆರಂಭಿಸುವಂತೆ ಉದ್ಯೋಗಿಗಳು ಮನವಿ ಮಾಡಿದ್ದಾರೆ.

ಅದ್ದೂರಿಯಾಗಿ ಆರಂಭವಾದ 6 ತಿಂಗಳಿಗೆ ನಿಂತ ಕೆಂಪೇಗೌಡ ಏರ್ಪೋರ್ಟ್ ರೈಲು; ಲಾಕ್​ಡೌನ್​ ಮುಗಿದರೂ ಸಂಚಾರ ಸ್ಥಗಿತ
ಸಂಗ್ರಹ ಚಿತ್ರ
TV9 Web
| Edited By: |

Updated on:Sep 29, 2021 | 12:02 PM

Share

ಬೆಂಗಳೂರು: ಲಕ್ಷ ಲಕ್ಷ ಖರ್ಚು ಮಾಡಿ ನಿರ್ಮಾಣ ಮಾಡಿದ್ದ ಹೈಟೆಕ್ ಕೆಂಪೇಗೌಡ ಏರ್ಪೋರ್ಟ್​ ರೈಲು ವ್ಯರ್ಥವೆಂಬಂತೆ ಭಾಸವಾಗುತ್ತಿದೆ. ಇದಕ್ಕೆ ಕಾರಣ ಅದ್ದೂರಿಯಾಗಿ ಆರಂಭವಾದ ಆರು ತಿಂಗಳಿಗೆ ಕೆಂಪೇಗೌಡ ಏರ್ಪೋಟ್ ರೈಲು ನಿಂತಿದೆ. ಲಾಕ್​ಡೌನ್​ ಕಾರಣದಿಂದ ರೈಲು ವ್ಯವಸ್ಥೆ ನಿಲ್ಲಿಸಲಾಗಿತ್ತು. ಆದರೆ ಈಗ ಲಾಕ್​ಡೌನ್​ ಮುಗಿದಿದ್ದು, ಜನ ಜೀವನ ಎಂದಿನಂತೆ ಸಾಗುತ್ತಿದೆ. ಆದರೂ ಕೂಡ ರೈಲು ಸಂಚಾರ ಮಾತ್ರ ಆರಂಭವಾಗಿಲ್ಲ.

ಟ್ಯಾಕ್ಸಿ, ಬಸ್​ಗಿಂತ ಕಡಿಮೆ ದರದಲ್ಲಿ ಏರ್ಪೋರ್ಟ್​ಗೆ​ ಬರಲು ಆರಂಭವಾಗಿದ್ದ ರೈಲು ಈಗ ನಿಂತಿದೆ. ಕೇವಲ 10 ರೂಪಾಯಿಗೆ ಮೆಜೆಸ್ಟಿಕ್ ನಿಂದ ಏರ್ಪೋರ್ಟ್​ಗೆ​ ಪ್ರಯಾಣಿಕರನ್ನು ಕರೆ ತರಲಾಗುತ್ತಿತ್ತು. ಏರ್ಪೋರ್ಟ್​ಗೆ ಕೆಲಸಕ್ಕೆ ಬರುವ ಉದ್ಯೋಗಿಗಳಿಗೆ ಈ ರೈಲು ಪ್ರಯಾಣ ಅನುಕೂಲಕರವಾಗಿತ್ತು. ಆದರೆ ಇದೀಗ ರೈಲು ಸ್ಥಗಿತಗೊಂಡ ಕಾರಣ ನೂರಾರು ರೂಪಾಯಿ ಹಣ ಖರ್ಚು ಮಾಡಿ ಬರಬೇಕಾದ ಪರಿಸ್ಥಿತಿ ಸಾರ್ವಜನಿಕರಲ್ಲಿ ನಿರ್ಮಾಣವಾಗಿದೆ.

ಬಸ್ಸಿನಲ್ಲಿ 250 ಮತ್ತು ಟ್ಯಾಕ್ಸಿಯಲ್ಲಿ 800 ರೂಪಾಯಿ ಕೊಟ್ಟು ಏರ್ಪೋರ್ಟ್​ಗೆ ಬರಬೇಕು. ಏರ್ಪೋರ್ಟ್​ ಮತ್ತು ಚಿಕ್ಕಬಳ್ಳಾಪುರ ಮೂಲಕ ಕೋಲಾರಕ್ಕೆ ತೆರಳುತ್ತಿದ್ದ ರೈಲು ಈಗ ಸ್ಥಗಿತವಾಗಿದೆ. ಮತ್ತೆ ಏರ್ಪೋರ್ಟ್​ಗೆ ರೈಲು ಸೇವೆ ಆರಂಭಿಸುವಂತೆ ಉದ್ಯೋಗಿಗಳು ಮನವಿ ಮಾಡಿದ್ದಾರೆ.

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೈಲು ಪ್ರಯಾಣಕ್ಕೆ ಪ್ರಯಾಣಿಕರು ಒಲವು ತೋರದ ಹಿನ್ನೆಲೆಯಲ್ಲಿಯೂ ರೈಲು ಆರಂಭವಾಗಿಲ್ಲ ಎನ್ನುವುದನ್ನು ತಳ್ಳಿ ಹಾಕಿವಂತಿಲ್ಲ. ರೈಲು ಸಂಚರಿಸಲು ಪ್ರಯಾಣಿಕರ ಸಂಖ್ಯೆ ಕೂಡ ಮುಕ್ಯವಾಗಿರುತ್ತದೆ.

ಇದನ್ನೂ ಓದಿ:

Bharat Bandh ರೈತರಿಂದ ಹೆದ್ದಾರಿ, ರೈಲು ಮಾರ್ಗ ಬಂದ್; ದೆಹಲಿ,ಹರ್ಯಾಣ ಗಡಿಭಾಗದಲ್ಲಿ ಸಂಚಾರಕ್ಕೆ ಅಡ್ಡಿ

ರಾಮನಗರ, ಮಾಗಡಿ ಕಡೆಗೆ ನಮ್ಮ ಮೆಟ್ರೋ; 4ನೇ ಹಂತದಲ್ಲಿ ಬಿಡದಿಗೂ ಸಿಗಲಿದೆ ಮೆಟ್ರೋ ರೈಲು ಸಂಚಾರ ಭಾಗ್ಯ

Published On - 11:14 am, Wed, 29 September 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ