ಬೆಂಗಳೂರು ವಿಮಾನ ನಿಲ್ದಾಣ: 55 ಲಕ್ಷ ರೂ. ಮೌಲ್ಯದ ಚಿನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಕೊಡಗಿನ ಯುವಕ ಅರೆಸ್ಟ್​​

ಜೀನ್ಸ್ ಮತ್ತು ಒಳಉಡುಪುಗಳಲ್ಲಿ ಬಚ್ಚಿಟ್ಟು 55 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಪೇಸ್ಟ್ ಅನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಕೊಡಗಿನ 24 ವರ್ಷದ ಯುವಕನನ್ನು ಬಂಧಿಸಲಾಗಿದೆ. ವಿಮಾನ ನಿಲ್ದಾಣದ ಕಸ್ಟಮ್ಸ್​​ ಅಧಿಕಾರಿಗಳು ಯುವಕನನ್ನು ತಪಾಸಣೆಗೆ ಒಳಪಡಿಸಿದಾಗ ಚಿನ್ನ ಪತ್ತೆಯಾಗಿದೆ.

ಬೆಂಗಳೂರು ವಿಮಾನ ನಿಲ್ದಾಣ: 55 ಲಕ್ಷ ರೂ. ಮೌಲ್ಯದ ಚಿನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಕೊಡಗಿನ ಯುವಕ ಅರೆಸ್ಟ್​​
ಬೆಂಗಳೂರು ವಿಮಾನ ನಿಲ್ದಾಣ
Follow us
|

Updated on:Dec 13, 2023 | 7:56 AM

ಬೆಂಗಳೂರು, ಡಿಸೆಂಬರ್​​ 13: ಜೀನ್ಸ್ ಮತ್ತು ಒಳಉಡುಪುಗಳಲ್ಲಿ ಬಚ್ಚಿಟ್ಟು 55 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಪೇಸ್ಟ್ (Gold Paste) ಅನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಕೊಡಗಿನ (Kodagu) 24 ವರ್ಷದ ಯುವಕನನ್ನು ಬಂಧಿಸಲಾಗಿದೆ. ಕೊಡಗು ಮೂಲದವನಾದ ಯುವಕ ದುಬೈನಿಂದ (UAE) ಇಂಡಿಗೋ ಏರ್‌ಲೈನ್ಸ್ ಫ್ಲೈಟ್ 6E 1486 ಮೂಲಕ ಭಾನುವಾರ (ಡಿ.10) ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Kempegowda International Airport) ಬಂದಿಳಿದನು. ವಿಮಾನ ನಿಲ್ದಾಣದ ಕಸ್ಟಮ್ಸ್​​ ಅಧಿಕಾರಿಗಳು ಯುವಕನನ್ನು ತಪಾಸಣೆಗೆ ಒಳಪಡಿಸಿದಾಗ ಚಿನ್ನ ಪತ್ತೆಯಾಗಿದೆ.

ಪ್ರಯಾಣಿಕರನ್ನು ತಪಾಸಣೆ ನಡೆಸುತ್ತಿರುವಾಗ, ಈ ಯುವಕನು ಅಸಹಜರೀತಿಯಾಗಿ ವರ್ತಿಸಲು ಆರಂಭಿಸಿದನು. ಇದರಿಂದ ಅನುಮಾನಗೊಂಡ ಕಸ್ಟಮ್ಸ್​ ಅಧಿಕಾರಿಗಳು ಯುವಕನ ಲಗೇಜ್​​ ಅನ್ನು ತಾಪಾಸಣೆ ನಡೆಸಿದರು. ನಂತರ ಯುವಕ ಧರಿಸಿದ್ದ ಕಪ್ಪು ಜೀನ್ಸ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಸೊಂಟ ಭಾಗದಲ್ಲಿ ಬಳಿ ಹೊಲಿಯಲಾದ ಚಿನ್ನದ ಪೇಸ್ಟ್​​​ ಇರುವ ಚೀಲಗಳು ಪತ್ತೆಯಾದವು.

ಇದನ್ನೂ ಓದಿ: ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ: 2 ಸೇರಿದಂತೆ 298ಗ್ರಾಂ ಚಿನ್ನ ವಶಕ್ಕೆ

ಕಸ್ಟಮ್ಸ್​​ ಅಧಿಕಾರಿಗಳು ಯುವಕನಿಂದ 907 ಗ್ರಾಂ ಚಿನ್ನದ ಪೇಸ್ಟ್ ಅನ್ನು ವಶಪಡಿಸಿಕೊಂಡಿದ್ದಾರೆ. ಕಳ್ಳಸಾಗಣೆ ಮತ್ತು ಕಸ್ಟಮ್ಸ್ ಸುಂಕ ವಂಚನೆಗಾಗಿ ಆತನನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:53 am, Wed, 13 December 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ