AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣ: 55 ಲಕ್ಷ ರೂ. ಮೌಲ್ಯದ ಚಿನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಕೊಡಗಿನ ಯುವಕ ಅರೆಸ್ಟ್​​

ಜೀನ್ಸ್ ಮತ್ತು ಒಳಉಡುಪುಗಳಲ್ಲಿ ಬಚ್ಚಿಟ್ಟು 55 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಪೇಸ್ಟ್ ಅನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಕೊಡಗಿನ 24 ವರ್ಷದ ಯುವಕನನ್ನು ಬಂಧಿಸಲಾಗಿದೆ. ವಿಮಾನ ನಿಲ್ದಾಣದ ಕಸ್ಟಮ್ಸ್​​ ಅಧಿಕಾರಿಗಳು ಯುವಕನನ್ನು ತಪಾಸಣೆಗೆ ಒಳಪಡಿಸಿದಾಗ ಚಿನ್ನ ಪತ್ತೆಯಾಗಿದೆ.

ಬೆಂಗಳೂರು ವಿಮಾನ ನಿಲ್ದಾಣ: 55 ಲಕ್ಷ ರೂ. ಮೌಲ್ಯದ ಚಿನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಕೊಡಗಿನ ಯುವಕ ಅರೆಸ್ಟ್​​
ಬೆಂಗಳೂರು ವಿಮಾನ ನಿಲ್ದಾಣ
ವಿವೇಕ ಬಿರಾದಾರ
|

Updated on:Dec 13, 2023 | 7:56 AM

Share

ಬೆಂಗಳೂರು, ಡಿಸೆಂಬರ್​​ 13: ಜೀನ್ಸ್ ಮತ್ತು ಒಳಉಡುಪುಗಳಲ್ಲಿ ಬಚ್ಚಿಟ್ಟು 55 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಪೇಸ್ಟ್ (Gold Paste) ಅನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಕೊಡಗಿನ (Kodagu) 24 ವರ್ಷದ ಯುವಕನನ್ನು ಬಂಧಿಸಲಾಗಿದೆ. ಕೊಡಗು ಮೂಲದವನಾದ ಯುವಕ ದುಬೈನಿಂದ (UAE) ಇಂಡಿಗೋ ಏರ್‌ಲೈನ್ಸ್ ಫ್ಲೈಟ್ 6E 1486 ಮೂಲಕ ಭಾನುವಾರ (ಡಿ.10) ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Kempegowda International Airport) ಬಂದಿಳಿದನು. ವಿಮಾನ ನಿಲ್ದಾಣದ ಕಸ್ಟಮ್ಸ್​​ ಅಧಿಕಾರಿಗಳು ಯುವಕನನ್ನು ತಪಾಸಣೆಗೆ ಒಳಪಡಿಸಿದಾಗ ಚಿನ್ನ ಪತ್ತೆಯಾಗಿದೆ.

ಪ್ರಯಾಣಿಕರನ್ನು ತಪಾಸಣೆ ನಡೆಸುತ್ತಿರುವಾಗ, ಈ ಯುವಕನು ಅಸಹಜರೀತಿಯಾಗಿ ವರ್ತಿಸಲು ಆರಂಭಿಸಿದನು. ಇದರಿಂದ ಅನುಮಾನಗೊಂಡ ಕಸ್ಟಮ್ಸ್​ ಅಧಿಕಾರಿಗಳು ಯುವಕನ ಲಗೇಜ್​​ ಅನ್ನು ತಾಪಾಸಣೆ ನಡೆಸಿದರು. ನಂತರ ಯುವಕ ಧರಿಸಿದ್ದ ಕಪ್ಪು ಜೀನ್ಸ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಸೊಂಟ ಭಾಗದಲ್ಲಿ ಬಳಿ ಹೊಲಿಯಲಾದ ಚಿನ್ನದ ಪೇಸ್ಟ್​​​ ಇರುವ ಚೀಲಗಳು ಪತ್ತೆಯಾದವು.

ಇದನ್ನೂ ಓದಿ: ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ: 2 ಸೇರಿದಂತೆ 298ಗ್ರಾಂ ಚಿನ್ನ ವಶಕ್ಕೆ

ಕಸ್ಟಮ್ಸ್​​ ಅಧಿಕಾರಿಗಳು ಯುವಕನಿಂದ 907 ಗ್ರಾಂ ಚಿನ್ನದ ಪೇಸ್ಟ್ ಅನ್ನು ವಶಪಡಿಸಿಕೊಂಡಿದ್ದಾರೆ. ಕಳ್ಳಸಾಗಣೆ ಮತ್ತು ಕಸ್ಟಮ್ಸ್ ಸುಂಕ ವಂಚನೆಗಾಗಿ ಆತನನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:53 am, Wed, 13 December 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ