AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಸಿದ್ಧವಾಗಿದೆ ನೂತನ ‘ಎಲಿವೇಟೆಡ್ ವಾಕ್‌ವೇ’

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಯಾಣಿಕರು ಮತ್ತು ಸಂದರ್ಶಕರ ಅನುಕೂಲಕ್ಕಾಗಿ ಹೊಸ “ಎಲಿವೇಟೆಡ್ ವಾಕ್‌ವೇ”ನನ್ನು ಉದ್ಘಾಟಿಸಿದೆ. ಟರ್ಮಿನಲ್ 1 ಕಡೆಗೆ ಹಾಗೂ P4 ಪಾರ್ಕಿಂಗ್ ಕಡೆಗೆ ನಡೆದು ಸಾಗುವ ಪಾದಚಾರಿಗಳಿಗೆ ತಡೆರಹಿತ ಅನುಭವವನ್ನು ನೀಡಲು 420 ಮೀಟರ್ ನಡಿಗೆ ಮಾರ್ಗವನ್ನು ವಿನ್ಯಾಸಗೊಳಿಸಲಾಗಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಸಿದ್ಧವಾಗಿದೆ ನೂತನ ‘ಎಲಿವೇಟೆಡ್ ವಾಕ್‌ವೇ’
ಎಲಿವೇಟೆಡ್ ವಾಕ್‌ವೇ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 25, 2023 | 4:38 PM

ಬೆಂಗಳೂರು, ಆಗಸ್ಟ್ 25: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ಬೆಂಗಳೂರು (ಬಿಎಲ್‌ಆರ್ ವಿಮಾನ ನಿಲ್ದಾಣ) ಪ್ರಯಾಣಿಕರು ಮತ್ತು ಸಂದರ್ಶಕರ ಅನುಕೂಲಕ್ಕಾಗಿ ಹೊಸ “ಎಲಿವೇಟೆಡ್ ವಾಕ್‌ವೇ”ನನ್ನು ಉದ್ಘಾಟಿಸಿದೆ. ಈ ನೂತನ ವಾಕ್‌ವೇ ಟರ್ಮಿನಲ್ 1 ರಿಂದ P4 ಪಾರ್ಕಿಂಗ್ ಅನ್ನು ಸಂಪರ್ಕಿಸಲಿದೆ. ಟರ್ಮಿನಲ್ 1 ಕಡೆಗೆ ಹಾಗೂ P4 ಪಾರ್ಕಿಂಗ್ ಕಡೆಗೆ ನಡೆದು ಸಾಗುವ ಪಾದಚಾರಿಗಳಿಗೆ ತಡೆರಹಿತ ಅನುಭವವನ್ನು ನೀಡಲು 420 ಮೀಟರ್ ನಡಿಗೆ ಮಾರ್ಗವನ್ನು ವಿನ್ಯಾಸಗೊಳಿಸಲಾಗಿದೆ.

ಕಾಲ್ನಡಿಗೆಯ ನಯವಾದ ಮತ್ತು ಆಧುನಿಕ ವಿನ್ಯಾಸದೊಂದಿಗೆ, ಎಲಿವೇಟರ್‌ ಮತ್ತು ಎಸ್ಕಲೇಟರ್‌ಗಳಂತಹ ಪ್ರಯಾಣಿಕ ಸ್ನೇಹಿ ಸೌಕರ್ಯಗಳನ್ನು ನೀಡಲಾಗಿದ್ದು, ಇದರಿಂದ ಪ್ರಯಾಣಿಕರು ಸುಲಭ ಮತ್ತು ಆರಾಮದಾಯಕವಾದ ನಡಿಗೆಯ ಅನುಭವ ಪಡೆಯಬಹುದು.

ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬದ ದಿನವಾದ ಇಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಪವರ್​​ ಕಟ್​​

ವಿನ್ಯಾಸವು ಪ್ರವೇಶಿಸುವಿಕೆಗೆ ಆದ್ಯತೆ ನೀಡುತ್ತದೆ. ಇದು ಹಿರಿಯ ನಾಗರಿಕ ಮತ್ತು PRM (ಕಡಿಮೆ ಚಲನಶೀಲತೆ ಹೊಂದಿರುವ ವ್ಯಕ್ತಿಗಳು) ಸ್ನೇಹಿಯಾಗಿಸುತ್ತದೆ. ಕಾಲ್ನಡಿಗೆಯಲ್ಲಿ ಸುರಕ್ಷಿತ ಪಾದಚಾರಿ ಕಾರಿಡಾರ್ ಮತ್ತು ರಾತ್ರಿಯಿಡೀ ಸುರಕ್ಷಿತ ಮತ್ತು ಆರಾಮದಾಯಕ ವಾತಾವರಣವನ್ನು ಖಾತರಿಪಡಿಸುತ್ತದೆ.

ಈ ವ್ಯವಸ್ಥೆಯು ಎಲ್ಲಾ ಹವಾಮಾನ ಪರಿಸ್ಥಿತಿಗೂ ಹೊಂದಿಕೊಳ್ಳುವಂತೆ ವಿಸ್ತರಿಸುತ್ತದೆ, ಈ ಹೊಸ ಎಲಿವೇಟೆಡ್ ವಾಕ್‌ವೇ ಉದ್ಘಾಟನೆಯೊಂದಿಗೆ, BLR ವಿಮಾನ ನಿಲ್ದಾಣವು ಎಲ್ಲರನ್ನೂ ಒಳಗೊಂಡ ಪ್ರಯಾಣದ ಅನುಭವದ ಕಡೆಗೆ ತನ್ನ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಮತ್ತು ನಿರಂತರ ಆವಿಷ್ಕಾರಗಳ ಮೂಲಕ ಪ್ರಯಾಣಿಕರಿಗೆ ಮರೆಯಲಾಗದ ಅನುಭವಗಳನ್ನು ನೀಡುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ