AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಭಾರತದ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಪ್ರಶಸ್ತಿ ಗರಿ

ಜೂನ್ 16 ರಂದು ಫ್ರಾನ್ಸ್‌ನ ಪ್ಯಾಸೆಂಜರ್ ಟರ್ಮಿನಲ್ ಎಕ್ಸ್‌ಪೋದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿತ್ತು. "ಈ ಕಾರ್ಯಕ್ರಮವು ವಿಮಾನ ನಿಲ್ದಾಣ ವಲಯಕ್ಕೆ ಅತ್ಯಂತ ಪ್ರತಿಷ್ಠಿತ ಗುಣಮಟ್ಟದ ಪ್ರಶಸ್ತಿಗಳಲ್ಲಿ ಒಂದಾಗಿದೆ..

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಭಾರತದ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಪ್ರಶಸ್ತಿ ಗರಿ
ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಶಸ್ತಿ ಗರಿ
TV9 Web
| Edited By: |

Updated on: Jun 17, 2022 | 6:12 PM

Share

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (Kempegowda International Airport) 2022ರ ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಪ್ರಶಸ್ತಿಗಳಲ್ಲಿ (2022 Skytrax World Airport Awards) ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಪ್ರಶಸ್ತಿಯನ್ನು ಪಡೆದುಕೊಂಡಿದೆ. ವಿಮಾನ ಪ್ರಯಾಣಿಕರ ಜಾಗತಿಕ ಸಮೀಕ್ಷೆಯು ಅತ್ಯುತ್ತಮ ಗ್ರಾಹಕ ಸೇವೆಯನ್ನು ಹೊಂದಿದೆ ಎಂದು ಹೇಳಿದ್ದರಿಂದ ಈ ಮನ್ನಣೆ ನೀಡಲಾಗಿದೆ ಎಂದು ಬೆಂಗಳೂರು ಏರ್​​ಪೋರ್ಟ್ ಹೇಳಿದೆ. ಚೆಕ್-ಇನ್‌ನಿಂದ ನಿರ್ಗಮನವರೆಗೆ, ಆಗಮನ ಮತ್ತು ವರ್ಗಾವಣೆ, ಭದ್ರತೆ ಮತ್ತು ವಲಸೆಯಿಂದ ಶಾಪಿಂಗ್‌ವರೆಗೆ, ಸಮೀಕ್ಷೆಯು ವಿಮಾನ ನಿಲ್ದಾಣದ ಸೇವೆ ಮತ್ತು ಪ್ರಮುಖ ಕಾರ್ಯಕ್ಷಮತೆಯ ಅಂಶಗಳಾದ್ಯಂತ ಗ್ರಾಹಕರ ಅನುಭವವನ್ನು ಮೌಲ್ಯಮಾಪನ ಮಾಡುತ್ತದೆ ಎಂದು ಬೆಂಗಳೂರು ವಿಮಾನ ನಿಲ್ದಾಣದ ಹೇಳಿಕೆ ತಿಳಿಸಿದೆ. ತಮಗೆ ಮತ ಹಾಕಿದ್ದಕ್ಕಾಗಿ ವಿಮಾನ ನಿಲ್ದಾಣವ ಧನ್ಯವಾದ ಸಂದೇಶವನ್ನು ಟ್ವೀಟ್ ಮಾಡಿದೆ. ಜೂನ್ 16 ರಂದು ಫ್ರಾನ್ಸ್‌ನ ಪ್ಯಾಸೆಂಜರ್ ಟರ್ಮಿನಲ್ ಎಕ್ಸ್‌ಪೋದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿತ್ತು. “ಈ ಕಾರ್ಯಕ್ರಮವು ವಿಮಾನ ನಿಲ್ದಾಣ ವಲಯಕ್ಕೆ ಅತ್ಯಂತ ಪ್ರತಿಷ್ಠಿತ ಗುಣಮಟ್ಟದ ಪ್ರಶಸ್ತಿಗಳಲ್ಲಿ ಒಂದಾಗಿದೆ, ಪ್ರಪಂಚದಾದ್ಯಂತದ ವಿಮಾನ ನಿಲ್ದಾಣಗಳ ಸಿಇಒಗಳು, ಅಧ್ಯಕ್ಷರು ಮತ್ತು ಹಿರಿಯ ಆಡಳಿತ ಮಂಡಳಿಯವರು ಕಾರ್ಯಕ್ರಮದಲ್ಲಿ ಹಾಜರಿದ್ದರು ಎಂದು ವಿಮಾನ ನಿಲ್ದಾಣವು ತಿಳಿಸಿದೆ.

ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (BIAL) ಇತ್ತೀಚೆಗೆ ಪ್ರಯಾಣಿಕರಿಗೆ ಉತ್ತಮ ವ ವಿಶ್ರಾಂತಿಯ ಅನುಭವವನ್ನು ನೀಡಲು ಅಂತರಾಷ್ಟ್ರೀಯ ಮತ್ತು ದೇಶೀಯ ಲಾಂಜ್‌ಗಳನ್ನು ಅನಾವರಣಗೊಳಿಸಿದೆ. ಈ ಲಾಂಜ್ ಗಳಿಗೆ 080 ಲಾಂಜ್ ಎಂದು ಹೆಸರಿಡಲಾಗಿದೆ. 080 ಎಂಬುದು ಬೆಂಗಳೂರಿನ ಎಸ್​​ಟಿಡಿ ಕೋಡ್ .

ಇದನ್ನೂ ಓದಿ
Image
Bengaluru Airport: ಜುಲೈನಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್​​ನಲ್ಲೂ ಪ್ರಯಾಣಿಸಬಹುದು!
Image
Bengaluru: ಸೂಟ್​ಕೇಸ್​ ಚಕ್ರ ತುಂಡಾಗಿದ್ದಕ್ಕೆ ಬೆಂಗಳೂರಿನ ಪ್ರಯಾಣಿಕನಿಗೆ 8,000 ರೂ. ನೀಡಿದ ಏರ್​ಲೈನ್ಸ್​!
Image
Bengaluru Airport: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತಿಷ್ಠಿತ ವಿಂಗ್ಸ್ ಇಂಡಿಯಾ 2022 ಪ್ರಶಸ್ತಿ

ಉದ್ಯಮಿ ನರೇಶ್ ರಂಕಾ ಸೇಥಿಯಾ ಅವರು ಲಾಂಜ್‌ನ ಫೋಟೊಗಳನ್ನು ಹಂಚಿದ್ದು 080 ಲೌಂಜ್ ಅದ್ಭುತವಾದ ಆಹಾರ ಮತ್ತು ಆಹ್ಲಾದಕರ ವಾತಾವರಣ ಹೊಂದಿದೆ. ಶ್ರೀ ವೀರಭದ್ರಯ್ಯ ಅವರ ವೈಯಕ್ತಿಕ ಸೇವೆಯ ಸ್ಪರ್ಶವು ಅದನ್ನು ಇನ್ನಷ್ಟು ಉತ್ತಮಗೊಳಿಸಿದೆ.

ರಾಜ್ಯದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ