AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಗಿಲು ಕ್ರಾಸ್ ಬಳಿ ರಸ್ತೆ ಜಲಾವೃತ; ಬಿಬಿಎಂಪಿ ಚುನಾವಣೆ ಬಹಿಷ್ಕರಿಸಿದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ನಿವಾಸಿಗಳು

ಏರ್‌ಪೋರ್ಟ್, ಕೋಗಿಲು, ಯಲಹಂಕ ರಸ್ತೆ ಜಾಮ್ ಆಗಿದೆ. ಏರ್ಪೋಟ್, ಕೋಗಿಲು, ಯಲಹಂಕ ಮತ್ತು ಸಿಟಿ ಕಡೆ ಹೋಗಲು ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ. ರಸ್ತೆಯಲ್ಲಿ ಹರಿಯುತ್ತಿರುವ ನೀರಿನಲ್ಲಿ ಸಂಚಾರ ಮಾಡಲು ಹೋಗಿ ವಾಹನಗಳು ಕೆಟ್ಟು ಹೋಗುತ್ತಿವೆ.

ಕೋಗಿಲು ಕ್ರಾಸ್ ಬಳಿ ರಸ್ತೆ ಜಲಾವೃತ; ಬಿಬಿಎಂಪಿ ಚುನಾವಣೆ ಬಹಿಷ್ಕರಿಸಿದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ನಿವಾಸಿಗಳು
Karnataka Weather Today Winter Continues in Karnataka till New Year Rain Expected in Punjab, Haryana
TV9 Web
| Edited By: |

Updated on: Nov 22, 2021 | 10:10 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ವರುಣನ ರೌದ್ರ ರೂಪ ಕಂಡಂತಾಗಿದೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಜನ ಜೀವನ ತತ್ತರಿಸಿದೆ. ಭಾರಿ ಮಳೆಯಿಂದಾಗಿ ಬೆಂಗಳೂರಿನ ಕೋಗಿಲು ಕ್ರಾಸ್ ಬಳಿ ರಸ್ತೆ ಜಲಾವೃತಗೊಂಡಿದ್ದು ಕೋಗಿಲು ಕ್ರಾಸ್‌ನ 3 ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಏರ್‌ಪೋರ್ಟ್, ಕೋಗಿಲು, ಯಲಹಂಕ ರಸ್ತೆ ಜಾಮ್ ಆಗಿದೆ. ಏರ್ಪೋಟ್, ಕೋಗಿಲು, ಯಲಹಂಕ ಮತ್ತು ಸಿಟಿ ಕಡೆ ಹೋಗಲು ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ. ರಸ್ತೆಯಲ್ಲಿ ಹರಿಯುತ್ತಿರುವ ನೀರಿನಲ್ಲಿ ಸಂಚಾರ ಮಾಡಲು ಹೋಗಿ ವಾಹನಗಳು ಕೆಟ್ಟು ಹೋಗುತ್ತಿವೆ.

3 ದಿನದಿಂದ ಜಲಾವೃತವಾಗುತ್ತಿರುವ ಅಪಾರ್ಟ್‌ಮೆಂಟ್‌ ಇನ್ನು ಮತ್ತೊಂದೆಡೆ ಬೆಂಗಳೂರಿನ ಯಲಹಂಕದ ಅಪಾರ್ಟ್‌ಮೆಂಟ್‌ 3 ದಿನದಿಂದ ಜಲಾವೃತಗೊಂಡಿದೆ. ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ಜಲಾವೃತಗೊಂಡಿದೆ. ರಾತ್ರಿ ಸುರಿದ ಭಾರಿ ಮಳೆಗೆ ಕೆರೆಯ ನೀರು ನುಗ್ಗಿ ಜನರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಅಲ್ಲದೆ ನೀರಿನ ಜೊತೆಯಲ್ಲಿ ಹಾವು, ಚೇಳುಗಳು ಬಂದ ಹಿನ್ನೆಲೆ ಅಪಾರ್ಟ್‌ಮೆಂಟ್ ನಿವಾಸಿಗಳಲ್ಲಿ ಆತಂಕ ಕೂಡ ಹೆಚ್ಚಾಗಿದೆ.

ವಿದ್ಯಾರಣ್ಯಪುರದಲ್ಲಿ ಜನರ ಪರದಾಟ ಬೆಂಗಳೂರಿನ ವಿದ್ಯಾರಣ್ಯಪುರದ ನಂಜಪ್ಪ ಬಡಾವಣೆಯ 2 ಅಪಾರ್ಟ್‌ಮೆಂಟ್‌ ಜಲಾವೃತಗೊಂಡಿವೆ. ಮನೆಯಿಂದ ಹೊರಬರಲಾಗದೆ ನಿವಾಸಿಗಳು ಪರದಾಡುತ್ತಿವೆ. 40 ಕ್ಕೂ ಹೆಚ್ಚು ಕುಟುಂಬಗಳಿಗೆ ಜಲದಿಗ್ಭಂದನವಾಗಿದೆ.

ಬಿಬಿಎಂಪಿ ವಿರುದ್ಧ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ನಿವಾಸಿಗಳ ಆಕ್ರೋಶ ಬಿಬಿಎಂಪಿ ಅಧಿಕಾರಿಗಳು ನಮ್ಮ ನೆರವಿಗೆ ಬರುತ್ತಿಲ್ಲ. ಹೀಗಾಗಿ ನಾವು ಬಿಬಿಎಂಪಿ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದಾರೆ. ವೋಟ್ ಕೇಳಲು ಮಾತ್ರ ಅಪಾರ್ಟ್‌ಮೆಂಟ್‌ಗೆ ಬರ್ತಾರೆ. ಉಳಿದಂತೆ ನಮ್ಮ ಯಾವುದೇ ಸಮಸ್ಯೆ ಬಗೆಹರಿಸುವುದಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ರಾತ್ರಿ ಅಬ್ಬರಿಸಿ ಬೊಬ್ಬಿರಿದ ಮಳೆ; ಬಿಟ್ಟೂ ಬಿಡದೆ ಕಾಡುತ್ತಿರೋ ವರುಣ, ಜನ ಹೈರಾಣ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!