AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತಪ್ಪ ಕೊಪ್ಪದ್ ಹೆಸರಿನಲ್ಲಿ ನಿರ್ಮಾಣ ಮಾಡಿದ್ದ ಬಸ್​ ನಿಲ್ದಾಣ ತೆರವು: ಬಿಬಿಎಂಪಿ ವಿರುದ್ಧ ಆಕ್ರೋಶ

ಬೆಂಗಳೂರಿನ ಕೆಂಗೇರಿ ಉಪನಗರ ರಿಂಗ್ ರಸ್ತೆಯಲ್ಲಿ ಲ್ಯಾನ್ಸ್ ನಾಯ್ಕ್ ಹನುಮಂತಪ್ಪ ಕೊಪ್ಪದ್ ಅವರ ಹೆಸರಿನಲ್ಲಿ ನಿರ್ಮಾಣ ಮಾಡಲಾಗಿರುವ ಬಸ್​​ ನಿಲ್ದಾಣವನ್ನು ತೆರುವುಗೊಳಿಸಲಾಗಿದೆ. ಬಸ್​ ನಿಲ್ದಾಣ ತೆರವುಗೊಳಿಸಿರುವ ಹಿಂದೆ ಷಡ್ಯಂತ್ರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಹನುಮಂತಪ್ಪ ಕೊಪ್ಪದ್ ಹೆಸರಿನಲ್ಲಿ ನಿರ್ಮಾಣ ಮಾಡಿದ್ದ ಬಸ್​ ನಿಲ್ದಾಣ ತೆರವು: ಬಿಬಿಎಂಪಿ ವಿರುದ್ಧ ಆಕ್ರೋಶ
ತೆರವುಗೊಳಿಸಲಾದ ಬಸ್​ ನಿಲ್ದಾಣ
TV9 Web
| Edited By: |

Updated on: Dec 15, 2023 | 2:13 PM

Share

ಬೆಂಗಳೂರು, ಡಿಸೆಂಬರ್​​ 15: ನಗರದ ಕೆಂಗೇರಿ (Kengeri) ಉಪನಗರ ರಿಂಗ್ ರಸ್ತೆಯಲ್ಲಿ ಲ್ಯಾನ್ಸ್ ನಾಯ್ಕ್ ಹನುಮಂತಪ್ಪ ಕೊಪ್ಪದ್ (Hanumantappa Koppad) ಅವರ ಹೆಸರಿನಲ್ಲಿ ಬಸ್​​ ನಿಲ್ದಾಣ (Bus Stand) ನಿರ್ಮಾಣ ಮಾಡಲಾಗಿದೆ. ಆದರೆ ಈಗ ಬಸ್​​ ನಿಲ್ದಾಣ ತೆರುವುಗೊಳಿಸಲಾಗಿದೆ. ಬಸ್​ ನಿಲ್ದಾಣ ತೆರವುಗೊಳಿಸಿರುವ ಹಿಂದೆ ಷಡ್ಯಂತ್ರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಹೌದು ಬಸ್ ನಿಲ್ದಾಣದ ಹಿಂಭಾಗದಲ್ಲಿ ಖಾಸಗಿ ವ್ಯಕ್ತಿಗಳಿಗೆ ಸೇರಿದ ಖಾಲಿ ಜಾಗವಿದೆ.

ಈ ಖಾಲಿ ಜಾಗದ ಮುಂದೆ ಬಸ್ ನಿಲ್ದಾಣ ಇದ್ದಿದ್ದರಿಂದ ಜಾಗದ ಮಾಲೀಕರು ತೆರವು ಮಾಡಿಡುವ ಶಂಕೆ ವ್ಯಕ್ತವಾಗಿದೆ. ಬಸ್ ನಿಲ್ದಾಣವನ್ನು ಬೇಕಂತಲೇ ತರೆವುಗೊಳಿಸಿದ್ದಾರೆ ಎಂದು ಎಂಟಿಎಸ್ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಆರೋಪ ಮಾಡಿದೆ.

ಇದನ್ನೂ ಓದಿ: ಚಾಲಕ ಸ್ಟೇರಿಂಗ್ ತಿರುಗಿಸುತ್ತಿದ್ದರೂ ಚಕ್ರಗಳು ತಿರುಗಲೇ ಇಲ್ಲ! ಗದಗ ಸಾರಿಗೆ ಇಲಾಖೆ‌ಯಲ್ಲಿ ಮತ್ತೊಂದು ಅಧ್ವಾನ

ಈ ಬಗ್ಗೆ ಪೊಲೀಸ್ ಕಮಿಷನರ್​, ಸ್ಥಳೀಯ ಶಾಸಕರಿಗೆ ದೂರು ನೀಡಲು ಎಂಟಿಎಸ್ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ತಯಾರಿ ನಡೆಸಿದೆ. ಇನ್ನು ಬಸ್ ನಿಲ್ದಾಣ ತೆರವಿನಲ್ಲಿ ಬಿಬಿಎಂಪಿಯ ಅಧಿಕಾರಿಗಳು ಕೂಡ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಬಸ್ ನಿಲ್ದಾಣ ತೆರವು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳಿಯರು ಆಗ್ರಹಿಸಿದ್ದಾರೆ.

2015-16 ರಲ್ಲಿ ಸಂಸದ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಪ್ರದೇಶಾಭಿವೃದ್ಧಿಯ ಸುಮಾರು 10 ಲಕ್ಷ ರೂ. ಅನುದಾನದಲ್ಲಿ ಬಸ್​ ನಿಲ್ದಾಣ ನಿರ್ಮಾಣ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?