AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತಪ್ಪ ಕೊಪ್ಪದ್ ಹೆಸರಿನಲ್ಲಿ ನಿರ್ಮಾಣ ಮಾಡಿದ್ದ ಬಸ್​ ನಿಲ್ದಾಣ ತೆರವು: ಬಿಬಿಎಂಪಿ ವಿರುದ್ಧ ಆಕ್ರೋಶ

ಬೆಂಗಳೂರಿನ ಕೆಂಗೇರಿ ಉಪನಗರ ರಿಂಗ್ ರಸ್ತೆಯಲ್ಲಿ ಲ್ಯಾನ್ಸ್ ನಾಯ್ಕ್ ಹನುಮಂತಪ್ಪ ಕೊಪ್ಪದ್ ಅವರ ಹೆಸರಿನಲ್ಲಿ ನಿರ್ಮಾಣ ಮಾಡಲಾಗಿರುವ ಬಸ್​​ ನಿಲ್ದಾಣವನ್ನು ತೆರುವುಗೊಳಿಸಲಾಗಿದೆ. ಬಸ್​ ನಿಲ್ದಾಣ ತೆರವುಗೊಳಿಸಿರುವ ಹಿಂದೆ ಷಡ್ಯಂತ್ರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಹನುಮಂತಪ್ಪ ಕೊಪ್ಪದ್ ಹೆಸರಿನಲ್ಲಿ ನಿರ್ಮಾಣ ಮಾಡಿದ್ದ ಬಸ್​ ನಿಲ್ದಾಣ ತೆರವು: ಬಿಬಿಎಂಪಿ ವಿರುದ್ಧ ಆಕ್ರೋಶ
ತೆರವುಗೊಳಿಸಲಾದ ಬಸ್​ ನಿಲ್ದಾಣ
TV9 Web
| Edited By: ವಿವೇಕ ಬಿರಾದಾರ|

Updated on: Dec 15, 2023 | 2:13 PM

Share

ಬೆಂಗಳೂರು, ಡಿಸೆಂಬರ್​​ 15: ನಗರದ ಕೆಂಗೇರಿ (Kengeri) ಉಪನಗರ ರಿಂಗ್ ರಸ್ತೆಯಲ್ಲಿ ಲ್ಯಾನ್ಸ್ ನಾಯ್ಕ್ ಹನುಮಂತಪ್ಪ ಕೊಪ್ಪದ್ (Hanumantappa Koppad) ಅವರ ಹೆಸರಿನಲ್ಲಿ ಬಸ್​​ ನಿಲ್ದಾಣ (Bus Stand) ನಿರ್ಮಾಣ ಮಾಡಲಾಗಿದೆ. ಆದರೆ ಈಗ ಬಸ್​​ ನಿಲ್ದಾಣ ತೆರುವುಗೊಳಿಸಲಾಗಿದೆ. ಬಸ್​ ನಿಲ್ದಾಣ ತೆರವುಗೊಳಿಸಿರುವ ಹಿಂದೆ ಷಡ್ಯಂತ್ರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಹೌದು ಬಸ್ ನಿಲ್ದಾಣದ ಹಿಂಭಾಗದಲ್ಲಿ ಖಾಸಗಿ ವ್ಯಕ್ತಿಗಳಿಗೆ ಸೇರಿದ ಖಾಲಿ ಜಾಗವಿದೆ.

ಈ ಖಾಲಿ ಜಾಗದ ಮುಂದೆ ಬಸ್ ನಿಲ್ದಾಣ ಇದ್ದಿದ್ದರಿಂದ ಜಾಗದ ಮಾಲೀಕರು ತೆರವು ಮಾಡಿಡುವ ಶಂಕೆ ವ್ಯಕ್ತವಾಗಿದೆ. ಬಸ್ ನಿಲ್ದಾಣವನ್ನು ಬೇಕಂತಲೇ ತರೆವುಗೊಳಿಸಿದ್ದಾರೆ ಎಂದು ಎಂಟಿಎಸ್ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಆರೋಪ ಮಾಡಿದೆ.

ಇದನ್ನೂ ಓದಿ: ಚಾಲಕ ಸ್ಟೇರಿಂಗ್ ತಿರುಗಿಸುತ್ತಿದ್ದರೂ ಚಕ್ರಗಳು ತಿರುಗಲೇ ಇಲ್ಲ! ಗದಗ ಸಾರಿಗೆ ಇಲಾಖೆ‌ಯಲ್ಲಿ ಮತ್ತೊಂದು ಅಧ್ವಾನ

ಈ ಬಗ್ಗೆ ಪೊಲೀಸ್ ಕಮಿಷನರ್​, ಸ್ಥಳೀಯ ಶಾಸಕರಿಗೆ ದೂರು ನೀಡಲು ಎಂಟಿಎಸ್ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ತಯಾರಿ ನಡೆಸಿದೆ. ಇನ್ನು ಬಸ್ ನಿಲ್ದಾಣ ತೆರವಿನಲ್ಲಿ ಬಿಬಿಎಂಪಿಯ ಅಧಿಕಾರಿಗಳು ಕೂಡ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಬಸ್ ನಿಲ್ದಾಣ ತೆರವು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳಿಯರು ಆಗ್ರಹಿಸಿದ್ದಾರೆ.

2015-16 ರಲ್ಲಿ ಸಂಸದ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಪ್ರದೇಶಾಭಿವೃದ್ಧಿಯ ಸುಮಾರು 10 ಲಕ್ಷ ರೂ. ಅನುದಾನದಲ್ಲಿ ಬಸ್​ ನಿಲ್ದಾಣ ನಿರ್ಮಾಣ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ