AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಗೇರಿ ನೈಸ್ ರೋಡ್ ಜಂಕ್ಷನ್​ ರಸ್ತೆ: 3 ದಿನದಲ್ಲಿ ಗುಂಡಿ ಮುಚ್ಚುವ ಭರವಸೆ ಕೊಟ್ಟ ಬಿಬಿಎಂಪಿ

ಬೆಂಗಳೂರು ಮೆಟ್ರೋ ನಿಗಮಕ್ಕೆ (ಬಿಎಂಆರ್​ಸಿಎಲ್) ಕಾಮಗಾರಿ ನಿರ್ವಹಿಸಲು ರಸ್ತೆಯನ್ನು ಬಿಟ್ಟುಕೊಟ್ಟಿದ್ದೇವೆ ಎಂದು ಹೇಳಿದರು.

ಕೆಂಗೇರಿ ನೈಸ್ ರೋಡ್ ಜಂಕ್ಷನ್​ ರಸ್ತೆ: 3 ದಿನದಲ್ಲಿ ಗುಂಡಿ ಮುಚ್ಚುವ ಭರವಸೆ ಕೊಟ್ಟ ಬಿಬಿಎಂಪಿ
ನೈಸ್ ರಸ್ತೆ ಜಂಕ್ಷನ್​ ಬಳಿ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
TV9 Web
| Edited By: |

Updated on:Jun 08, 2022 | 11:00 PM

Share

ಬೆಂಗಳೂರು: ನಗರದ ಕೆಂಗೇರಿ ನೈಸ್​ ರೋಡ್​ ಜಂಕ್ಷನ್​ನಲ್ಲಿ (Nice Road Junction) ಇನ್ನು ಮೂರು ದಿನಗಳಲ್ಲಿ ಗುಂಡಿಗಳನ್ನು ಮುಚ್ಚಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಭರವಸೆ ನೀಡಿದ್ದಾರೆ. ಬೆಂಗಳೂರು ಮೆಟ್ರೋ ನಿಗಮಕ್ಕೆ (ಬಿಎಂಆರ್​ಸಿಎಲ್) ಕಾಮಗಾರಿ ನಿರ್ವಹಿಸಲು ರಸ್ತೆಯನ್ನು ಬಿಟ್ಟುಕೊಟ್ಟಿದ್ದೇವೆ. ಅವರು ನಿರ್ವಹಿಸುತ್ತಿದ್ದ ಪೂರ್ವಭಾವಿ ಕಾಮಗಾರಿಯು ಇದೀಗ ಕೊನೆಯ ಹಂತಕ್ಕೆ ಬಂದಿದೆ. ಅಲ್ಲಿನ ಕಾಮಗಾರಿಗಳಿಂದಾಗಿ ರಸ್ತೆಯಲ್ಲಿ ಗುಂಡಿಗಳಾಗಿವೆ. ಮೂರು ದಿನಗಳಲ್ಲಿ ಗುಂಡಿ ಮುಚ್ಚಲು ಕ್ರಮಕೈಗೊಳ್ಳುತ್ತೇವೆ. ಸವಾರರಿಗೆ ತೊಂದರೆಯಾಗದಂತೆ ಎಚ್ಚರ ವಹಿಸುತ್ತೇವೆ ಎಂದು ಹೇಳಿದರು.

ರಸ್ತೆ ಗುಂಡಿಗಳ ಬಗ್ಗೆ ನಾಯಂಡಹಳ್ಳಿ, ಜ್ಞಾನಭಾರತಿಯವರೆಗೂ ಈ ಹಿಂದೆ ಸಮೀಕ್ಷೆ ಮಾಡಿದ್ದೆವು. ನೈಸ್ ರಸ್ತೆ ಹಾಗೂ ಬಿಎಂಆರ್​ಸಿಎಲ್ ನಡುವೆ ಸಮನ್ವಯ ಸಾಧಿಸಿ ರಸ್ತೆ ಗುಂಡಿ ಮುಚ್ಚಲು ಕ್ರಮ ಕೈಗೊಳ್ಳುತ್ತೇವೆ. ರಸ್ತೆಯ ಮೇಲೆ ಬೀಳುವ ಮಳೆಯ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ರೂಪಿಸುತ್ತೇವೆ ಎಂದು ತಿಳಿಸಿದರು.

ಸಾವಿರದ ಲೆಕ್ಕದಲ್ಲಿ ರಸ್ತೆ ಗುಂಡಿ ಲೆಕ್ಕ ಕೊಟ್ಟ ಬಿಬಿಎಂಪಿ ಹೊಸ ಕಮಿಷ​ನರ್

ಬಿಬಿಎಂಪಿಗೆ ಕಮಿಷನರ್​ ಆಗಿ ಹೊಸದಾಗಿ ಯಾರೇ ಬರಲಿ, ಅವರು ಹೇಳುವ ಮೊದಲ ಮಾತು ಮಳೆ ಮತ್ತು ಗುಂಡಿ. ಹೊಸ ಕಮಿಷ​ನರ್​ ತುಷಾರ್ ಅವರೂ ಲೆಕ್ಕ ಹಾಕಿದವರಂತೆ ಬೆಂಗಳೂರಿನಲ್ಲಿ ಬರೋಬ್ಬರಿ 10,000 ಗುಂಡಿಗಳಿವೆ ಎಂದು ಹೇಳಿದ್ದಾರೆ. ‘ಬನ್ನೀ ಸಾ ಸಾವಿರ ಅಲ್ಲ; ಲಕ್ಷಗಳ ಲೆಕ್ಕದಲ್ಲಿ ಗುಂಡಿಗಳನ್ನು ತೋರಿಸುತ್ತೇವೆ’ ಎಂದು ಸಾರ್ವಜನಿಕರು ಆಕ್ಷೇಪಿಸಿದ್ದರು. ಮಳೆಗಾಲ ಹತ್ತಿರಕ್ಕೆ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗುಂಡಿಗಳ ಗಲಾಟೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಚರ್ಚೆಯೂ ನಡೆದಿತ್ತು.

Published On - 11:00 pm, Wed, 8 June 22

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ