AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಗೇರಿ ನೈಸ್ ರೋಡ್ ಜಂಕ್ಷನ್​ ರಸ್ತೆ: 3 ದಿನದಲ್ಲಿ ಗುಂಡಿ ಮುಚ್ಚುವ ಭರವಸೆ ಕೊಟ್ಟ ಬಿಬಿಎಂಪಿ

ಬೆಂಗಳೂರು ಮೆಟ್ರೋ ನಿಗಮಕ್ಕೆ (ಬಿಎಂಆರ್​ಸಿಎಲ್) ಕಾಮಗಾರಿ ನಿರ್ವಹಿಸಲು ರಸ್ತೆಯನ್ನು ಬಿಟ್ಟುಕೊಟ್ಟಿದ್ದೇವೆ ಎಂದು ಹೇಳಿದರು.

ಕೆಂಗೇರಿ ನೈಸ್ ರೋಡ್ ಜಂಕ್ಷನ್​ ರಸ್ತೆ: 3 ದಿನದಲ್ಲಿ ಗುಂಡಿ ಮುಚ್ಚುವ ಭರವಸೆ ಕೊಟ್ಟ ಬಿಬಿಎಂಪಿ
ನೈಸ್ ರಸ್ತೆ ಜಂಕ್ಷನ್​ ಬಳಿ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jun 08, 2022 | 11:00 PM

Share

ಬೆಂಗಳೂರು: ನಗರದ ಕೆಂಗೇರಿ ನೈಸ್​ ರೋಡ್​ ಜಂಕ್ಷನ್​ನಲ್ಲಿ (Nice Road Junction) ಇನ್ನು ಮೂರು ದಿನಗಳಲ್ಲಿ ಗುಂಡಿಗಳನ್ನು ಮುಚ್ಚಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಭರವಸೆ ನೀಡಿದ್ದಾರೆ. ಬೆಂಗಳೂರು ಮೆಟ್ರೋ ನಿಗಮಕ್ಕೆ (ಬಿಎಂಆರ್​ಸಿಎಲ್) ಕಾಮಗಾರಿ ನಿರ್ವಹಿಸಲು ರಸ್ತೆಯನ್ನು ಬಿಟ್ಟುಕೊಟ್ಟಿದ್ದೇವೆ. ಅವರು ನಿರ್ವಹಿಸುತ್ತಿದ್ದ ಪೂರ್ವಭಾವಿ ಕಾಮಗಾರಿಯು ಇದೀಗ ಕೊನೆಯ ಹಂತಕ್ಕೆ ಬಂದಿದೆ. ಅಲ್ಲಿನ ಕಾಮಗಾರಿಗಳಿಂದಾಗಿ ರಸ್ತೆಯಲ್ಲಿ ಗುಂಡಿಗಳಾಗಿವೆ. ಮೂರು ದಿನಗಳಲ್ಲಿ ಗುಂಡಿ ಮುಚ್ಚಲು ಕ್ರಮಕೈಗೊಳ್ಳುತ್ತೇವೆ. ಸವಾರರಿಗೆ ತೊಂದರೆಯಾಗದಂತೆ ಎಚ್ಚರ ವಹಿಸುತ್ತೇವೆ ಎಂದು ಹೇಳಿದರು.

ರಸ್ತೆ ಗುಂಡಿಗಳ ಬಗ್ಗೆ ನಾಯಂಡಹಳ್ಳಿ, ಜ್ಞಾನಭಾರತಿಯವರೆಗೂ ಈ ಹಿಂದೆ ಸಮೀಕ್ಷೆ ಮಾಡಿದ್ದೆವು. ನೈಸ್ ರಸ್ತೆ ಹಾಗೂ ಬಿಎಂಆರ್​ಸಿಎಲ್ ನಡುವೆ ಸಮನ್ವಯ ಸಾಧಿಸಿ ರಸ್ತೆ ಗುಂಡಿ ಮುಚ್ಚಲು ಕ್ರಮ ಕೈಗೊಳ್ಳುತ್ತೇವೆ. ರಸ್ತೆಯ ಮೇಲೆ ಬೀಳುವ ಮಳೆಯ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ರೂಪಿಸುತ್ತೇವೆ ಎಂದು ತಿಳಿಸಿದರು.

ಸಾವಿರದ ಲೆಕ್ಕದಲ್ಲಿ ರಸ್ತೆ ಗುಂಡಿ ಲೆಕ್ಕ ಕೊಟ್ಟ ಬಿಬಿಎಂಪಿ ಹೊಸ ಕಮಿಷ​ನರ್

ಬಿಬಿಎಂಪಿಗೆ ಕಮಿಷನರ್​ ಆಗಿ ಹೊಸದಾಗಿ ಯಾರೇ ಬರಲಿ, ಅವರು ಹೇಳುವ ಮೊದಲ ಮಾತು ಮಳೆ ಮತ್ತು ಗುಂಡಿ. ಹೊಸ ಕಮಿಷ​ನರ್​ ತುಷಾರ್ ಅವರೂ ಲೆಕ್ಕ ಹಾಕಿದವರಂತೆ ಬೆಂಗಳೂರಿನಲ್ಲಿ ಬರೋಬ್ಬರಿ 10,000 ಗುಂಡಿಗಳಿವೆ ಎಂದು ಹೇಳಿದ್ದಾರೆ. ‘ಬನ್ನೀ ಸಾ ಸಾವಿರ ಅಲ್ಲ; ಲಕ್ಷಗಳ ಲೆಕ್ಕದಲ್ಲಿ ಗುಂಡಿಗಳನ್ನು ತೋರಿಸುತ್ತೇವೆ’ ಎಂದು ಸಾರ್ವಜನಿಕರು ಆಕ್ಷೇಪಿಸಿದ್ದರು. ಮಳೆಗಾಲ ಹತ್ತಿರಕ್ಕೆ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗುಂಡಿಗಳ ಗಲಾಟೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಚರ್ಚೆಯೂ ನಡೆದಿತ್ತು.

Published On - 11:00 pm, Wed, 8 June 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!