AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಮೂಲದ ಸ್ವಾಮೀಜಿಗೆ ಮೂಲಭೂತವಾದಿಗಳಿಂದ ಬೆದರಿಕೆ: ಗನ್ ಮ್ಯಾನ್ ಒದಗಿಸಲು ಕರ್ನಾಟಕ ಹೈಕೋರ್ಟ್‌ ಸೂಚನೆ, ಏನಿದು ಪ್ರಕರಣ?

ಬೆಂಗಳೂರಿನಲ್ಲಿ ಅಡಗಿದರೂ ಹತ್ಯೆ ಮಾಡುತ್ತೇವೆ. ನಿನ್ನ ಕೊನೆ ಆಸೆಯನ್ನು ಬೇಗ ಈಡೇರಿಸಿಕೋ ಎಂದು ಸಂದೇಶ ಕಳಿಸಿದ್ದಾರೆ ಎಂದು ಸ್ವಾಮಿ ಭದ್ರಾನಂದಜಿ ಹಾಗೂ ಅವರ ತಾಯಿ ರಿಟ್ ಅರ್ಜಿ ಸಲ್ಲಿಸಿದ್ದರು.

ಕೇರಳ ಮೂಲದ ಸ್ವಾಮೀಜಿಗೆ ಮೂಲಭೂತವಾದಿಗಳಿಂದ ಬೆದರಿಕೆ: ಗನ್ ಮ್ಯಾನ್ ಒದಗಿಸಲು ಕರ್ನಾಟಕ ಹೈಕೋರ್ಟ್‌ ಸೂಚನೆ, ಏನಿದು ಪ್ರಕರಣ?
ಕರ್ನಾಟಕ್​ ಹೈಕೋರ್ಟ್​
TV9 Web
| Edited By: ಆಯೇಷಾ ಬಾನು|

Updated on:Jul 27, 2022 | 8:42 PM

Share

ಬೆಂಗಳೂರು: ಕೇರಳ ಮೂಲದ ಸ್ವಾಮೀಜಿಗೆ ಮೂಲಭೂತವಾದಿಗಳಿಂದ ಬೆದರಿಕೆ ಬಂದಿದ್ದು ಈ ಬಗ್ಗೆ ತನಿಖೆ ನಡೆಸುವಂತೆ ಹಾಗೂ ಭದ್ರತೆ ಕೋರಿ ಸ್ವಾಮಿ ಭದ್ರಾನಂದಜಿ ಅರ್ಜಿ ಸಲ್ಲಿಸಿದ್ದರು. ಕೇರಳ ಮೂಲದ ಸ್ವಾಮಿ ಭದ್ರಾನಂದಜಿ ಅವರಿಗೆ ಮೂಲಭೂತವಾದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಜೀವ ಬೆದರಿಕೆ ಹಾಕಿದ್ದಾರಂತೆ. ಹೀಗಾಗಿ ಅವರು ಅರ್ಜಿ ಸಲ್ಲಿಸಿದ್ದು ಗನ್ ಮ್ಯಾನ್ ಭದ್ರತೆ ಒದಗಿಸಲು ನ್ಯಾ.ಎಸ್.ಕೃಷ್ಣ ದೀಕ್ಷಿತ್‌ರವರಿದ್ದ ಪೀಠ ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಅಡಗಿದರೂ ಹತ್ಯೆ ಮಾಡುತ್ತೇವೆ. ನಿನ್ನ ಕೊನೆ ಆಸೆಯನ್ನು ಬೇಗ ಈಡೇರಿಸಿಕೋ ಎಂದು ಸಂದೇಶ ಕಳಿಸಿದ್ದಾರೆ ಎಂದು ಸ್ವಾಮಿ ಭದ್ರಾನಂದಜಿ ಹಾಗೂ ಅವರ ತಾಯಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್, ಅರ್ಜಿದಾರರಿಗೆ ಪಿಸ್ತೂಲ್ ಲೈಸೆನ್ಸ್ ಕೊಡಲಾಗಿದೆ. ಬೀಟ್ ವ್ಯವಸ್ಥೆ ಮಾಡಲಾಗಿದೆ ಎಂದು ಹೈಕೋರ್ಟ್‌ಗೆ ಸರ್ಕಾರಿ ವಕೀಲ ವಿನೋದ್ ಕುಮಾರ್ ಮಾಹಿತಿ ನೀಡಿದ್ದಾರೆ. ಇದಕ್ಕೆ ತೀರ್ಪು ನೀಡಿದ ಕೋರ್ಟ್ ಇಂತಹ ಬೆದರಿಕೆಗಳ ಕುರಿತು ಕ್ರಮ ಕೈಗೊಳ್ಳಬೇಕು. 2 ವಾರದಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ. ಹಾಗೂ ಅಲ್ಲಿಯವರೆಗೆ ಗನ್ ಮ್ಯಾನ್ ಭದ್ರತೆ ಒದಗಿಸಲು ನ್ಯಾ.ಎಸ್.ಕೃಷ್ಣ ದೀಕ್ಷಿತ್‌ರವರಿದ್ದ ಪೀಠ ಸೂಚನೆ ನೀಡಿದೆ.

ಸಾಹಿತಿ, ಕಾದಂಬರಿಕಾರ ಬಿಎಲ್ ವೇಣುಗೆ ಮತ್ತೆ ಜೀವ ಬೆದರಿಕೆ

ಸಾಹಿತಿ ಹಾಗೂ ಕಾದಂಬರಿಕಾರ ಬಿಎಲ್ ವೇಣು ಅವರಿಗೆ ಜೀವ ಬೆದರಿಕೆ ಪತ್ರ ಬಂದಿದ್ದು, ಆತಂಕಕ್ಕೊಳಗಾಗುವಂತೆ ಮಾಡಿದೆ. ಸಹಿಷ್ಣು ಹಿಂದೂ ಹೆಸರಿನಲ್ಲಿ ವಿಳಾಸವಿಲ್ಲದ ಬೆದರಿಕೆ ಪತ್ರವು ಚಿತ್ರದುರ್ಗದ ಕೆಳಗೋಟೆ ಬಡಾವಣೆಗೆ ಪತ್ರ ಬಂದಿದೆ. ಎರಡು ಪುಟಗಳ ಕೈಬರಹದ ಪತ್ರ ಬರೆದು ಜೀವ ಬೆದರಿಕೆ ಹಾಕಲಾಗಿದ್ದು, 61 ಸಾಹಿತಿಗಳಿಗೆ ತಿಳಿ ಹೇಳಿ ಎಂದು ಸಲಹೆ ನೀಡಲಾಗಿದೆ. ಅಷ್ಟೇ ಅಲ್ಲದೆ ಸಾವರ್ಕರ್ ಬಗ್ಗೆ ಟೀಕಿಸಿದ್ದಕ್ಕೆ ಕ್ಷಮೆ ಕೇಳಬೇಕೆಂದು ಎಚ್ಚರಿಕೆಯನ್ನು ಕೂಡ ನೀಡಲಾಗಿದೆ.

ಬರಗೂರು ರಾಮಚಂದ್ರಪ್ಪ ಸಮಿತಿಯಿಂದ ಪಠ್ಯ ಪರಿಷ್ಕರಣೆಯಲ್ಲಿ ನಾಡದ್ರೋಹವಾಗಿದೆ. ಬರಗೂರು ರಾಮಚಂದ್ರಪ್ಪ ಸಮಿತಿಗೆ 61 ಸಾಹಿತಿಗಳ ಬೆಂಬಲ ನೀಡಿದ್ದಾರೆ, ಆ ಎಲ್ಲಾ 61 ಜನರನ್ನೂ ಗಲ್ಲಿಗೇರಿಸಬೇಕು, ಗುಂಡಿಕ್ಕಬೇಕೆಂದು ಬೆದರಿಕೆ ಪತ್ರದಲ್ಲಿ ಹೇಳಲಾಗಿದೆ.

Published On - 8:38 pm, Wed, 27 July 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​