AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಮೂಲದ ಸ್ವಾಮೀಜಿಗೆ ಮೂಲಭೂತವಾದಿಗಳಿಂದ ಬೆದರಿಕೆ: ಗನ್ ಮ್ಯಾನ್ ಒದಗಿಸಲು ಕರ್ನಾಟಕ ಹೈಕೋರ್ಟ್‌ ಸೂಚನೆ, ಏನಿದು ಪ್ರಕರಣ?

ಬೆಂಗಳೂರಿನಲ್ಲಿ ಅಡಗಿದರೂ ಹತ್ಯೆ ಮಾಡುತ್ತೇವೆ. ನಿನ್ನ ಕೊನೆ ಆಸೆಯನ್ನು ಬೇಗ ಈಡೇರಿಸಿಕೋ ಎಂದು ಸಂದೇಶ ಕಳಿಸಿದ್ದಾರೆ ಎಂದು ಸ್ವಾಮಿ ಭದ್ರಾನಂದಜಿ ಹಾಗೂ ಅವರ ತಾಯಿ ರಿಟ್ ಅರ್ಜಿ ಸಲ್ಲಿಸಿದ್ದರು.

ಕೇರಳ ಮೂಲದ ಸ್ವಾಮೀಜಿಗೆ ಮೂಲಭೂತವಾದಿಗಳಿಂದ ಬೆದರಿಕೆ: ಗನ್ ಮ್ಯಾನ್ ಒದಗಿಸಲು ಕರ್ನಾಟಕ ಹೈಕೋರ್ಟ್‌ ಸೂಚನೆ, ಏನಿದು ಪ್ರಕರಣ?
ಕರ್ನಾಟಕ್​ ಹೈಕೋರ್ಟ್​
TV9 Web
| Edited By: |

Updated on:Jul 27, 2022 | 8:42 PM

Share

ಬೆಂಗಳೂರು: ಕೇರಳ ಮೂಲದ ಸ್ವಾಮೀಜಿಗೆ ಮೂಲಭೂತವಾದಿಗಳಿಂದ ಬೆದರಿಕೆ ಬಂದಿದ್ದು ಈ ಬಗ್ಗೆ ತನಿಖೆ ನಡೆಸುವಂತೆ ಹಾಗೂ ಭದ್ರತೆ ಕೋರಿ ಸ್ವಾಮಿ ಭದ್ರಾನಂದಜಿ ಅರ್ಜಿ ಸಲ್ಲಿಸಿದ್ದರು. ಕೇರಳ ಮೂಲದ ಸ್ವಾಮಿ ಭದ್ರಾನಂದಜಿ ಅವರಿಗೆ ಮೂಲಭೂತವಾದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಜೀವ ಬೆದರಿಕೆ ಹಾಕಿದ್ದಾರಂತೆ. ಹೀಗಾಗಿ ಅವರು ಅರ್ಜಿ ಸಲ್ಲಿಸಿದ್ದು ಗನ್ ಮ್ಯಾನ್ ಭದ್ರತೆ ಒದಗಿಸಲು ನ್ಯಾ.ಎಸ್.ಕೃಷ್ಣ ದೀಕ್ಷಿತ್‌ರವರಿದ್ದ ಪೀಠ ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಅಡಗಿದರೂ ಹತ್ಯೆ ಮಾಡುತ್ತೇವೆ. ನಿನ್ನ ಕೊನೆ ಆಸೆಯನ್ನು ಬೇಗ ಈಡೇರಿಸಿಕೋ ಎಂದು ಸಂದೇಶ ಕಳಿಸಿದ್ದಾರೆ ಎಂದು ಸ್ವಾಮಿ ಭದ್ರಾನಂದಜಿ ಹಾಗೂ ಅವರ ತಾಯಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್, ಅರ್ಜಿದಾರರಿಗೆ ಪಿಸ್ತೂಲ್ ಲೈಸೆನ್ಸ್ ಕೊಡಲಾಗಿದೆ. ಬೀಟ್ ವ್ಯವಸ್ಥೆ ಮಾಡಲಾಗಿದೆ ಎಂದು ಹೈಕೋರ್ಟ್‌ಗೆ ಸರ್ಕಾರಿ ವಕೀಲ ವಿನೋದ್ ಕುಮಾರ್ ಮಾಹಿತಿ ನೀಡಿದ್ದಾರೆ. ಇದಕ್ಕೆ ತೀರ್ಪು ನೀಡಿದ ಕೋರ್ಟ್ ಇಂತಹ ಬೆದರಿಕೆಗಳ ಕುರಿತು ಕ್ರಮ ಕೈಗೊಳ್ಳಬೇಕು. 2 ವಾರದಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ. ಹಾಗೂ ಅಲ್ಲಿಯವರೆಗೆ ಗನ್ ಮ್ಯಾನ್ ಭದ್ರತೆ ಒದಗಿಸಲು ನ್ಯಾ.ಎಸ್.ಕೃಷ್ಣ ದೀಕ್ಷಿತ್‌ರವರಿದ್ದ ಪೀಠ ಸೂಚನೆ ನೀಡಿದೆ.

ಸಾಹಿತಿ, ಕಾದಂಬರಿಕಾರ ಬಿಎಲ್ ವೇಣುಗೆ ಮತ್ತೆ ಜೀವ ಬೆದರಿಕೆ

ಸಾಹಿತಿ ಹಾಗೂ ಕಾದಂಬರಿಕಾರ ಬಿಎಲ್ ವೇಣು ಅವರಿಗೆ ಜೀವ ಬೆದರಿಕೆ ಪತ್ರ ಬಂದಿದ್ದು, ಆತಂಕಕ್ಕೊಳಗಾಗುವಂತೆ ಮಾಡಿದೆ. ಸಹಿಷ್ಣು ಹಿಂದೂ ಹೆಸರಿನಲ್ಲಿ ವಿಳಾಸವಿಲ್ಲದ ಬೆದರಿಕೆ ಪತ್ರವು ಚಿತ್ರದುರ್ಗದ ಕೆಳಗೋಟೆ ಬಡಾವಣೆಗೆ ಪತ್ರ ಬಂದಿದೆ. ಎರಡು ಪುಟಗಳ ಕೈಬರಹದ ಪತ್ರ ಬರೆದು ಜೀವ ಬೆದರಿಕೆ ಹಾಕಲಾಗಿದ್ದು, 61 ಸಾಹಿತಿಗಳಿಗೆ ತಿಳಿ ಹೇಳಿ ಎಂದು ಸಲಹೆ ನೀಡಲಾಗಿದೆ. ಅಷ್ಟೇ ಅಲ್ಲದೆ ಸಾವರ್ಕರ್ ಬಗ್ಗೆ ಟೀಕಿಸಿದ್ದಕ್ಕೆ ಕ್ಷಮೆ ಕೇಳಬೇಕೆಂದು ಎಚ್ಚರಿಕೆಯನ್ನು ಕೂಡ ನೀಡಲಾಗಿದೆ.

ಬರಗೂರು ರಾಮಚಂದ್ರಪ್ಪ ಸಮಿತಿಯಿಂದ ಪಠ್ಯ ಪರಿಷ್ಕರಣೆಯಲ್ಲಿ ನಾಡದ್ರೋಹವಾಗಿದೆ. ಬರಗೂರು ರಾಮಚಂದ್ರಪ್ಪ ಸಮಿತಿಗೆ 61 ಸಾಹಿತಿಗಳ ಬೆಂಬಲ ನೀಡಿದ್ದಾರೆ, ಆ ಎಲ್ಲಾ 61 ಜನರನ್ನೂ ಗಲ್ಲಿಗೇರಿಸಬೇಕು, ಗುಂಡಿಕ್ಕಬೇಕೆಂದು ಬೆದರಿಕೆ ಪತ್ರದಲ್ಲಿ ಹೇಳಲಾಗಿದೆ.

Published On - 8:38 pm, Wed, 27 July 22

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!