AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಮೂಲದ ಸ್ವಾಮೀಜಿಗೆ ಮೂಲಭೂತವಾದಿಗಳಿಂದ ಬೆದರಿಕೆ: ಗನ್ ಮ್ಯಾನ್ ಒದಗಿಸಲು ಕರ್ನಾಟಕ ಹೈಕೋರ್ಟ್‌ ಸೂಚನೆ, ಏನಿದು ಪ್ರಕರಣ?

ಬೆಂಗಳೂರಿನಲ್ಲಿ ಅಡಗಿದರೂ ಹತ್ಯೆ ಮಾಡುತ್ತೇವೆ. ನಿನ್ನ ಕೊನೆ ಆಸೆಯನ್ನು ಬೇಗ ಈಡೇರಿಸಿಕೋ ಎಂದು ಸಂದೇಶ ಕಳಿಸಿದ್ದಾರೆ ಎಂದು ಸ್ವಾಮಿ ಭದ್ರಾನಂದಜಿ ಹಾಗೂ ಅವರ ತಾಯಿ ರಿಟ್ ಅರ್ಜಿ ಸಲ್ಲಿಸಿದ್ದರು.

ಕೇರಳ ಮೂಲದ ಸ್ವಾಮೀಜಿಗೆ ಮೂಲಭೂತವಾದಿಗಳಿಂದ ಬೆದರಿಕೆ: ಗನ್ ಮ್ಯಾನ್ ಒದಗಿಸಲು ಕರ್ನಾಟಕ ಹೈಕೋರ್ಟ್‌ ಸೂಚನೆ, ಏನಿದು ಪ್ರಕರಣ?
ಕರ್ನಾಟಕ್​ ಹೈಕೋರ್ಟ್​
Follow us
TV9 Web
| Updated By: ಆಯೇಷಾ ಬಾನು

Updated on:Jul 27, 2022 | 8:42 PM

ಬೆಂಗಳೂರು: ಕೇರಳ ಮೂಲದ ಸ್ವಾಮೀಜಿಗೆ ಮೂಲಭೂತವಾದಿಗಳಿಂದ ಬೆದರಿಕೆ ಬಂದಿದ್ದು ಈ ಬಗ್ಗೆ ತನಿಖೆ ನಡೆಸುವಂತೆ ಹಾಗೂ ಭದ್ರತೆ ಕೋರಿ ಸ್ವಾಮಿ ಭದ್ರಾನಂದಜಿ ಅರ್ಜಿ ಸಲ್ಲಿಸಿದ್ದರು. ಕೇರಳ ಮೂಲದ ಸ್ವಾಮಿ ಭದ್ರಾನಂದಜಿ ಅವರಿಗೆ ಮೂಲಭೂತವಾದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಜೀವ ಬೆದರಿಕೆ ಹಾಕಿದ್ದಾರಂತೆ. ಹೀಗಾಗಿ ಅವರು ಅರ್ಜಿ ಸಲ್ಲಿಸಿದ್ದು ಗನ್ ಮ್ಯಾನ್ ಭದ್ರತೆ ಒದಗಿಸಲು ನ್ಯಾ.ಎಸ್.ಕೃಷ್ಣ ದೀಕ್ಷಿತ್‌ರವರಿದ್ದ ಪೀಠ ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಅಡಗಿದರೂ ಹತ್ಯೆ ಮಾಡುತ್ತೇವೆ. ನಿನ್ನ ಕೊನೆ ಆಸೆಯನ್ನು ಬೇಗ ಈಡೇರಿಸಿಕೋ ಎಂದು ಸಂದೇಶ ಕಳಿಸಿದ್ದಾರೆ ಎಂದು ಸ್ವಾಮಿ ಭದ್ರಾನಂದಜಿ ಹಾಗೂ ಅವರ ತಾಯಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್, ಅರ್ಜಿದಾರರಿಗೆ ಪಿಸ್ತೂಲ್ ಲೈಸೆನ್ಸ್ ಕೊಡಲಾಗಿದೆ. ಬೀಟ್ ವ್ಯವಸ್ಥೆ ಮಾಡಲಾಗಿದೆ ಎಂದು ಹೈಕೋರ್ಟ್‌ಗೆ ಸರ್ಕಾರಿ ವಕೀಲ ವಿನೋದ್ ಕುಮಾರ್ ಮಾಹಿತಿ ನೀಡಿದ್ದಾರೆ. ಇದಕ್ಕೆ ತೀರ್ಪು ನೀಡಿದ ಕೋರ್ಟ್ ಇಂತಹ ಬೆದರಿಕೆಗಳ ಕುರಿತು ಕ್ರಮ ಕೈಗೊಳ್ಳಬೇಕು. 2 ವಾರದಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ. ಹಾಗೂ ಅಲ್ಲಿಯವರೆಗೆ ಗನ್ ಮ್ಯಾನ್ ಭದ್ರತೆ ಒದಗಿಸಲು ನ್ಯಾ.ಎಸ್.ಕೃಷ್ಣ ದೀಕ್ಷಿತ್‌ರವರಿದ್ದ ಪೀಠ ಸೂಚನೆ ನೀಡಿದೆ.

ಸಾಹಿತಿ, ಕಾದಂಬರಿಕಾರ ಬಿಎಲ್ ವೇಣುಗೆ ಮತ್ತೆ ಜೀವ ಬೆದರಿಕೆ

ಸಾಹಿತಿ ಹಾಗೂ ಕಾದಂಬರಿಕಾರ ಬಿಎಲ್ ವೇಣು ಅವರಿಗೆ ಜೀವ ಬೆದರಿಕೆ ಪತ್ರ ಬಂದಿದ್ದು, ಆತಂಕಕ್ಕೊಳಗಾಗುವಂತೆ ಮಾಡಿದೆ. ಸಹಿಷ್ಣು ಹಿಂದೂ ಹೆಸರಿನಲ್ಲಿ ವಿಳಾಸವಿಲ್ಲದ ಬೆದರಿಕೆ ಪತ್ರವು ಚಿತ್ರದುರ್ಗದ ಕೆಳಗೋಟೆ ಬಡಾವಣೆಗೆ ಪತ್ರ ಬಂದಿದೆ. ಎರಡು ಪುಟಗಳ ಕೈಬರಹದ ಪತ್ರ ಬರೆದು ಜೀವ ಬೆದರಿಕೆ ಹಾಕಲಾಗಿದ್ದು, 61 ಸಾಹಿತಿಗಳಿಗೆ ತಿಳಿ ಹೇಳಿ ಎಂದು ಸಲಹೆ ನೀಡಲಾಗಿದೆ. ಅಷ್ಟೇ ಅಲ್ಲದೆ ಸಾವರ್ಕರ್ ಬಗ್ಗೆ ಟೀಕಿಸಿದ್ದಕ್ಕೆ ಕ್ಷಮೆ ಕೇಳಬೇಕೆಂದು ಎಚ್ಚರಿಕೆಯನ್ನು ಕೂಡ ನೀಡಲಾಗಿದೆ.

ಬರಗೂರು ರಾಮಚಂದ್ರಪ್ಪ ಸಮಿತಿಯಿಂದ ಪಠ್ಯ ಪರಿಷ್ಕರಣೆಯಲ್ಲಿ ನಾಡದ್ರೋಹವಾಗಿದೆ. ಬರಗೂರು ರಾಮಚಂದ್ರಪ್ಪ ಸಮಿತಿಗೆ 61 ಸಾಹಿತಿಗಳ ಬೆಂಬಲ ನೀಡಿದ್ದಾರೆ, ಆ ಎಲ್ಲಾ 61 ಜನರನ್ನೂ ಗಲ್ಲಿಗೇರಿಸಬೇಕು, ಗುಂಡಿಕ್ಕಬೇಕೆಂದು ಬೆದರಿಕೆ ಪತ್ರದಲ್ಲಿ ಹೇಳಲಾಗಿದೆ.

Published On - 8:38 pm, Wed, 27 July 22

ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ