AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿಯನ್ನು ಕೊಂದು ಬೇರೆ ಬೇರೆ ರಾಜ್ಯಗಳಲ್ಲಿ ಸುತ್ತಾಡಿ ಕೊನೆಗೆ ಬೆಂಗಳೂರಿನಲ್ಲೇ ಹಂತಕ ಲಾಕ್

ಬೆಂಗಳೂರಿನಲ್ಲಿ ನಡೆದ ಪ್ರಿಯಕರನಿಂದ ಪ್ರೇಮಿಯ ಹತ್ಯೆಯ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಆರವ್ ಹನೋವ್ ಎಂಬಾತ ಬಂಧಿತ. ಅಸ್ಸಾಂ ಮೂಲದ ಮಾಯಾ ಗೊಗೊಯ್ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ, ದೇವನಹಳ್ಳಿ ಬಳಿ ಬಂಧಿಸಲಾಗಿದೆ.

ಪ್ರೇಯಸಿಯನ್ನು ಕೊಂದು ಬೇರೆ ಬೇರೆ ರಾಜ್ಯಗಳಲ್ಲಿ ಸುತ್ತಾಡಿ ಕೊನೆಗೆ ಬೆಂಗಳೂರಿನಲ್ಲೇ ಹಂತಕ ಲಾಕ್
ಪ್ರೇಯಸಿಯನ್ನು ಕೊಂದು ಬೇರೆ ಬೇರೆ ರಾಜ್ಯಗಳಲ್ಲಿ ಸುತ್ತಾಡಿ ಕೊನೆಗೆ ಬೆಂಗಳೂರಿನಲ್ಲೇ ಹಂತಕ ಲಾಕ್
TV9 Web
| Edited By: |

Updated on: Nov 29, 2024 | 7:40 PM

Share

ಬೆಂಗಳೂರು, ನವೆಂಬರ್​ 29: ನಗರದಲ್ಲಿ ಪ್ರಿಯಕರನಿಂದ ಪ್ರಿಯತಮೆಯನ್ನು (Girlfriend) ಬರ್ಬರ ಹತ್ಯೆ ಮಾಡಿ ಹೊರ ರಾಜ್ಯವೆಲ್ಲಾ ಸುತ್ತಾಡುತ್ತಿದ್ದ ಆರೋಪಿ ಕೊನೆಗೆ ದೇವನಹಳ್ಳಿ ಬಳಿ ಪೊಲೀಸರ ಕೈಗೆ ಲಾಕ್​ ಆಗಿದ್ದಾನೆ. ಕೇರಳ ಮೂಲದ ಆರವ್ ಹನೋವ್‌(21) ಬಂಧಿತ ಕೊಲೆ ಆರೋಪಿ. ಅಸ್ಸಾಂ ಮೂಲದ ಪ್ರಿಯತಮೆ ಮಾಯಾ ಗೊಗೊಯ್‌ಳನ್ನು ಕೊಲೆಗೈದಿದ್ದ. ಬಳಿಕ ಹೊರ ರಾಜ್ಯಕ್ಕೆ ಎಸ್ಕೇಪ್ ಆಗಿದ್ದ. ಇದೀಗ  2 ತಂಡಗಳನ್ನು ರಚಿಸಿ ಕೊಲೆ ಆರೋಪಿಯನ್ನು ಬಂಧಿಸಲಾಗಿದೆ.

ಇಂದಿರಾನಗರದ ಸರ್ವಿಸ್‌ ಅಪಾರ್ಟ್‌ಮೆಂಟ್‌ಗೆ ನವೆಂಬರ್ 23ರಂದು ಸರ್ವಿಸ್‌ ಅಪಾರ್ಟ್‌ಮೆಂಟ್‌ಗೆ ಒಟ್ಟಿಗೆ ಬಂದಿದ್ದರು. ನಂತರ ಆರವ್ ಹನೋವ್​ ಮಾಯಾ ಗೊಗೊಯ್‌ಳನ್ನು ಕೊಲೆಗೈದಿದ್ದಾರೆ. ಬಳಿಕ ಒಂದು ದಿನ ಮೃತದೇಹದ ಜೊತೆಗೆ ಕಾಲ ಕಳೆದಿದ್ದು, ನ. 26ರ ಬೆಳಗ್ಗೆ ಕ್ಯಾಬ್ ಬುಕ್ ಮಾಡಿಕೊಂಡು ಘಟನಾ ಸ್ಥಳದಿಂದ ಎಸ್ಕೇಪ್‌ ಆಗಿದ್ದ. ಸ್ಥಳಕ್ಕೆ ಭೇಟಿ ನೀಡಿದ ಇಂದಿರಾನಗರ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.

ಪೂರ್ವ ವಿಭಾಗ ಡಿಸಿಪಿ ದೇವರಾಜ್ ಹೇಳಿದ್ದಿಷ್ಟು

ಈ ಬಗ್ಗೆ ಪೂರ್ವ ವಿಭಾಗ ಡಿಸಿಪಿ ದೇವರಾಜ್ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ್ದು, 4 ದಿನಗಳ ಹಿಂದೆ ಸರ್ವೀಸ್ ಅಪಾರ್ಟ್​ಮೆಂಟ್​ನಲ್ಲಿ ಮಹಿಳೆ ಕೊಲೆ‌ ಆಗಿದೆ. ಆರೋಪಿ ಆರವ್ ಹನೋವ್‌ ಕೇರಳ ಮೂಲದವನು. ಸಿಸಿಟಿವಿಯಲ್ಲಿ ಆತ ಅಪಾರ್ಟ್​ಮೆಂಟ್​ನಿಂದ ಹೊರಗಡೆ ಹೋಗುವುದು ಗೊತ್ತಾಗುತ್ತೆ. ಆತನ ಪತ್ತೆಗೆ ಮೂರು ತಂಡ ರಚನೆ ಮಾಡಲಾಗಿತ್ತು. ಕೇರಳ, ಉತ್ತರ ಕರ್ನಾಟಕಕ್ಕೆ ತಂಡಗಳನ್ನು ಕಳುಹಿಸಲಾಗಿತ್ತು. ಕೊನೆಗೆ ದೇವನಹಳ್ಳಿ ಬಳಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೊಂದು ಭಯಾನಕ ಕೃತ್ಯ; ಪ್ರೇಯಸಿಯನ್ನು ಕೊಂದ 1 ದಿನ ಕಳೆದು ಪರಾರಿಯಾದ ಪ್ರಿಯಕರ!

ವೈಯಕ್ತಿಕ ವಿಚಾರಕ್ಕೆ ಕೊಲೆ ಮಾಡಿದ್ದಾನೆ. ಕೊಲೆ ಮಾಡುವ ಉದ್ದೇಶದಿಂದ ರೂಂಗೆ ಕರೆದುಕೊಂಡು ಹೋಗಿದ್ದಾನೆ. ಹಗ್ಗವನ್ನು ಮೊದಲೇ ಖರೀದಿ ಮಾಡಿದ್ದಾನೆ. ಜೆಪ್ಟೋದಲ್ಲಿ ನೈಲಾನ್, ಚಾಕು ತರಿಸಿಕೊಂಡಿದ್ದ. ಕೊಲೆಯಾದ ಮಹಿಳೆ ಹೆಚ್​ಎಸ್​ಆರ್​ ಲೇಔಟ್ ಕೌನ್ಸಲಿಂಗ್ ಸೆಂಟರ್​ನಲ್ಲಿ ಕೆಲಸ ಮಾಡುತ್ತಿದ್ದರು. ಬೊಂಬಲ್ ಅನ್ನೋ ಆ್ಯಪ್​ ಮೂಲಕ ಪರಿಚಯ ಆಗಿದ್ದಾರೆ. ಆರೋಪಿ ಇಲ್ಲಿಂದ ರೈಲ್ವೆ ಸ್ಟೇಷನ್ ಮೂಲಕ ಉತ್ತರ ಪ್ರದೇಶ, ವಾರಣಾಸಿ ಸೇರಿ ಹಲವು ಕಡೆಗಳಲ್ಲಿ ಹೋಗಿದ್ದಾನೆ. ಕೊನೆಗೆ ದೇವನಹಳ್ಳಿ ಬಳಿ ಬಂದಿದ್ದಾನೆ. ಮಾಹಿತಿ ಪಡೆದು ಬಂಧಿಸಲಾಗಿದೆ. ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.

ವರದಿ: ಪ್ರದೀಪ್​ 

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ