AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿಯನ್ನು ಕೊಂದು ಬೇರೆ ಬೇರೆ ರಾಜ್ಯಗಳಲ್ಲಿ ಸುತ್ತಾಡಿ ಕೊನೆಗೆ ಬೆಂಗಳೂರಿನಲ್ಲೇ ಹಂತಕ ಲಾಕ್

ಬೆಂಗಳೂರಿನಲ್ಲಿ ನಡೆದ ಪ್ರಿಯಕರನಿಂದ ಪ್ರೇಮಿಯ ಹತ್ಯೆಯ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಆರವ್ ಹನೋವ್ ಎಂಬಾತ ಬಂಧಿತ. ಅಸ್ಸಾಂ ಮೂಲದ ಮಾಯಾ ಗೊಗೊಯ್ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ, ದೇವನಹಳ್ಳಿ ಬಳಿ ಬಂಧಿಸಲಾಗಿದೆ.

ಪ್ರೇಯಸಿಯನ್ನು ಕೊಂದು ಬೇರೆ ಬೇರೆ ರಾಜ್ಯಗಳಲ್ಲಿ ಸುತ್ತಾಡಿ ಕೊನೆಗೆ ಬೆಂಗಳೂರಿನಲ್ಲೇ ಹಂತಕ ಲಾಕ್
ಪ್ರೇಯಸಿಯನ್ನು ಕೊಂದು ಬೇರೆ ಬೇರೆ ರಾಜ್ಯಗಳಲ್ಲಿ ಸುತ್ತಾಡಿ ಕೊನೆಗೆ ಬೆಂಗಳೂರಿನಲ್ಲೇ ಹಂತಕ ಲಾಕ್
TV9 Web
| Edited By: |

Updated on: Nov 29, 2024 | 7:40 PM

Share

ಬೆಂಗಳೂರು, ನವೆಂಬರ್​ 29: ನಗರದಲ್ಲಿ ಪ್ರಿಯಕರನಿಂದ ಪ್ರಿಯತಮೆಯನ್ನು (Girlfriend) ಬರ್ಬರ ಹತ್ಯೆ ಮಾಡಿ ಹೊರ ರಾಜ್ಯವೆಲ್ಲಾ ಸುತ್ತಾಡುತ್ತಿದ್ದ ಆರೋಪಿ ಕೊನೆಗೆ ದೇವನಹಳ್ಳಿ ಬಳಿ ಪೊಲೀಸರ ಕೈಗೆ ಲಾಕ್​ ಆಗಿದ್ದಾನೆ. ಕೇರಳ ಮೂಲದ ಆರವ್ ಹನೋವ್‌(21) ಬಂಧಿತ ಕೊಲೆ ಆರೋಪಿ. ಅಸ್ಸಾಂ ಮೂಲದ ಪ್ರಿಯತಮೆ ಮಾಯಾ ಗೊಗೊಯ್‌ಳನ್ನು ಕೊಲೆಗೈದಿದ್ದ. ಬಳಿಕ ಹೊರ ರಾಜ್ಯಕ್ಕೆ ಎಸ್ಕೇಪ್ ಆಗಿದ್ದ. ಇದೀಗ  2 ತಂಡಗಳನ್ನು ರಚಿಸಿ ಕೊಲೆ ಆರೋಪಿಯನ್ನು ಬಂಧಿಸಲಾಗಿದೆ.

ಇಂದಿರಾನಗರದ ಸರ್ವಿಸ್‌ ಅಪಾರ್ಟ್‌ಮೆಂಟ್‌ಗೆ ನವೆಂಬರ್ 23ರಂದು ಸರ್ವಿಸ್‌ ಅಪಾರ್ಟ್‌ಮೆಂಟ್‌ಗೆ ಒಟ್ಟಿಗೆ ಬಂದಿದ್ದರು. ನಂತರ ಆರವ್ ಹನೋವ್​ ಮಾಯಾ ಗೊಗೊಯ್‌ಳನ್ನು ಕೊಲೆಗೈದಿದ್ದಾರೆ. ಬಳಿಕ ಒಂದು ದಿನ ಮೃತದೇಹದ ಜೊತೆಗೆ ಕಾಲ ಕಳೆದಿದ್ದು, ನ. 26ರ ಬೆಳಗ್ಗೆ ಕ್ಯಾಬ್ ಬುಕ್ ಮಾಡಿಕೊಂಡು ಘಟನಾ ಸ್ಥಳದಿಂದ ಎಸ್ಕೇಪ್‌ ಆಗಿದ್ದ. ಸ್ಥಳಕ್ಕೆ ಭೇಟಿ ನೀಡಿದ ಇಂದಿರಾನಗರ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.

ಪೂರ್ವ ವಿಭಾಗ ಡಿಸಿಪಿ ದೇವರಾಜ್ ಹೇಳಿದ್ದಿಷ್ಟು

ಈ ಬಗ್ಗೆ ಪೂರ್ವ ವಿಭಾಗ ಡಿಸಿಪಿ ದೇವರಾಜ್ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ್ದು, 4 ದಿನಗಳ ಹಿಂದೆ ಸರ್ವೀಸ್ ಅಪಾರ್ಟ್​ಮೆಂಟ್​ನಲ್ಲಿ ಮಹಿಳೆ ಕೊಲೆ‌ ಆಗಿದೆ. ಆರೋಪಿ ಆರವ್ ಹನೋವ್‌ ಕೇರಳ ಮೂಲದವನು. ಸಿಸಿಟಿವಿಯಲ್ಲಿ ಆತ ಅಪಾರ್ಟ್​ಮೆಂಟ್​ನಿಂದ ಹೊರಗಡೆ ಹೋಗುವುದು ಗೊತ್ತಾಗುತ್ತೆ. ಆತನ ಪತ್ತೆಗೆ ಮೂರು ತಂಡ ರಚನೆ ಮಾಡಲಾಗಿತ್ತು. ಕೇರಳ, ಉತ್ತರ ಕರ್ನಾಟಕಕ್ಕೆ ತಂಡಗಳನ್ನು ಕಳುಹಿಸಲಾಗಿತ್ತು. ಕೊನೆಗೆ ದೇವನಹಳ್ಳಿ ಬಳಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೊಂದು ಭಯಾನಕ ಕೃತ್ಯ; ಪ್ರೇಯಸಿಯನ್ನು ಕೊಂದ 1 ದಿನ ಕಳೆದು ಪರಾರಿಯಾದ ಪ್ರಿಯಕರ!

ವೈಯಕ್ತಿಕ ವಿಚಾರಕ್ಕೆ ಕೊಲೆ ಮಾಡಿದ್ದಾನೆ. ಕೊಲೆ ಮಾಡುವ ಉದ್ದೇಶದಿಂದ ರೂಂಗೆ ಕರೆದುಕೊಂಡು ಹೋಗಿದ್ದಾನೆ. ಹಗ್ಗವನ್ನು ಮೊದಲೇ ಖರೀದಿ ಮಾಡಿದ್ದಾನೆ. ಜೆಪ್ಟೋದಲ್ಲಿ ನೈಲಾನ್, ಚಾಕು ತರಿಸಿಕೊಂಡಿದ್ದ. ಕೊಲೆಯಾದ ಮಹಿಳೆ ಹೆಚ್​ಎಸ್​ಆರ್​ ಲೇಔಟ್ ಕೌನ್ಸಲಿಂಗ್ ಸೆಂಟರ್​ನಲ್ಲಿ ಕೆಲಸ ಮಾಡುತ್ತಿದ್ದರು. ಬೊಂಬಲ್ ಅನ್ನೋ ಆ್ಯಪ್​ ಮೂಲಕ ಪರಿಚಯ ಆಗಿದ್ದಾರೆ. ಆರೋಪಿ ಇಲ್ಲಿಂದ ರೈಲ್ವೆ ಸ್ಟೇಷನ್ ಮೂಲಕ ಉತ್ತರ ಪ್ರದೇಶ, ವಾರಣಾಸಿ ಸೇರಿ ಹಲವು ಕಡೆಗಳಲ್ಲಿ ಹೋಗಿದ್ದಾನೆ. ಕೊನೆಗೆ ದೇವನಹಳ್ಳಿ ಬಳಿ ಬಂದಿದ್ದಾನೆ. ಮಾಹಿತಿ ಪಡೆದು ಬಂಧಿಸಲಾಗಿದೆ. ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.

ವರದಿ: ಪ್ರದೀಪ್​ 

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್