AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್, ಅತ್ಯಾಚಾರ ಯತ್ನ: ಕೇರಳದ ಪೆರಿಂಗೋಟ್ಟುಕ್ಕಾರದ ಅರ್ಚಕ ಬೆಂಗಳೂರಿನಲ್ಲಿ ಬಂಧನ

ಮಾಟ-ಮಂತ್ರದ ಹೆಸರಿನಲ್ಲಿ ಮಹಿಳೆ ಜತೆ ನಗ್ನ ವಿಡಿಯೋ ಕಾಲ್ ಮಾಡಿಸಿ, ನಂತರ ಪೂಜೆಯ ನೆಪದಲ್ಲಿ ಆಕೆಯನ್ನು ಕಾಡಿಗೆ ಕರೆದುಕೊಂಡು ಹೋಗಿ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಕೇರಳದ ಪೆರಿಂಗೋಟ್ಟುಕ್ಕಾರ ದೇವಸ್ಥಾನದ ಅರ್ಚಕ ಅರುಣ್ ಎಂಬಾತನನ್ನು ಬೆಂಗಳೂರಿನ ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಮುಖ್ಯ ಅರ್ಚಕ ಉನ್ನಿ ದಾಮೋದರನ್ ಎಂಬಾತ ಪರಾರಿಯಾಗಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ.

ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್, ಅತ್ಯಾಚಾರ ಯತ್ನ: ಕೇರಳದ ಪೆರಿಂಗೋಟ್ಟುಕ್ಕಾರದ ಅರ್ಚಕ ಬೆಂಗಳೂರಿನಲ್ಲಿ ಬಂಧನ
ಅರ್ಚಕ ಹಾಗೂ ಆತ ಸಂತ್ರಸ್ತೆಗೆ ಕಳುಹಿಸಿದ್ದ ವಾಟ್ಸ್​ಆ್ಯಪ್ ಸಂದೇಶಗಳು
ರಾಚಪ್ಪಾಜಿ ನಾಯ್ಕ್
| Edited By: |

Updated on:Jun 16, 2025 | 11:09 AM

Share

ಬೆಂಗಳೂರು, ಜೂನ್ 16: ಬೆಂಗಳೂರಿನ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಲ್ಲದೆ, ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡಿದ ಆರೋಪದಲ್ಲಿ ಕೇರಳದ (Kerala) ಪೆರಿಂಗೋಟ್ಟುಕ್ಕಾರ ದೇವಸ್ಥಾನದ (Peringottukara temple) ಅರ್ಚಕ ಅರುಣ್ ಎಂಬಾತನನ್ನು ಬೆಂಗಳೂರಿನ ಬೆಳ್ಳಂದೂರು ಠಾಣೆ ಪೊಲೀಸರು (Bellandur Police) ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ, ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ. ಪೂಜೆ ಮಾಡಿಸಲೆಂದು ಕೇರಳದ ಪೆರಿಂಗೋಟ್ಟುಕ್ಕಾರ ದೇವಸ್ಥಾನಕ್ಕೆ ತೆರಳಿದ್ದ ಮಹಿಳೆಗೆ ಮಾಟ ಮಾಂತ್ರದ ಬೆದರಿಕೆಯೊಡ್ಡಿ ಮುಖ್ಯ ಅರ್ಚಕ ಹಾಗೂ ಅರ್ಚಕ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಕೇರಳದ ಪೆರಿಂಗೋಟ್ಟುಕ್ಕಾರ ದೇಗುಲದ ಬಗ್ಗೆ ಕೇಳಿತಿಳಿದಿದ್ದರು. ಹೀಗಾಗಿ ಅಲ್ಲಿಗೆ ಪೂಜೆ ಮಾಡಿಸಲೆಂದು ತೆರಳಿದ್ದರು. ಆ ವೇಳೆ ಪರಿಚಯವಾಗಿದ್ದ ಅರ್ಚಕರು, ಪೂಜೆಯ ಹೆಸರಿನಲ್ಲಿ ಮತ್ತು ಮಾಟ-ಮಂತ್ರ ಹೆಸರಿನಲ್ಲಿ ಮಹಿಳೆ ಜತೆ ವಾಟ್ಸ್​​ಆ್ಯಪ್​ ವಿಡಿಯೋ ಕಾಲ್ ಮೂಲಕ ಅಸಭ್ಯವಾಗಿ ವರ್ತಿಸಿದ್ದಾರೆ. ಅಷ್ಟೇ ಅಲ್ಲದೆ, ಮತ್ತೊಂದು ಪೂಜೆ ಮಾಡಿಸುವುದಾಗಿ ಕರೆಸಿಕೊಂಡು ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾರೆ ಎಂದು ಬೆಳ್ಳಂದೂರು ಠಾಣೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಸಂತ್ರಸ್ತೆ ಮಹಿಳೆ ಉಲ್ಲೇಖಿಸಿದ್ದಾರೆ.

ಏನಿದು ಪ್ರಕರಣ?

ಕುಟುಂಬದಲ್ಲಿ ಕೆಲವೊಂದು ಸಮಸ್ಯೆಗಳಿಂದ ಬಳಲುತ್ತಿದ್ದ ಬೆಂಗಳೂರಿನ ಮಹಿಳೆಗೆ ಕೇರಳದ ಪೆರಿಂಗೋಟ್ಟುಕ್ಕಾರ ದೇವಸ್ಥಾನದ ಬಗ್ಗೆ ಸ್ನೇಹಿತರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವಿಡಿಯೋದಿಂದ ಮಾಹಿತಿ ದೊರೆತಿತ್ತು. ಅಲ್ಲಿಗೆ ಹೋಗಿ ಪೂಜೆ ಮಾಡಿಸಿಕೊಂಡರೆ ಪರಿಹಾರ ದೊರೆಯುತ್ತದೆ ಎಂಬ ಭರವಸೆ ಬಂದಿತ್ತು. ಹೀಗಾಗಿ ಅಲ್ಲಿಗೆ ತೆರಳಿದ್ದರು. ಆ ಸಂದರ್ಭದಲ್ಲಿ, ಸಂತ್ರಸ್ತೆಗೆ ಅರ್ಚಕರ ಜತೆ ಮಲಯಾಳಂ ಭಾಷೆಯಲ್ಲಿ ಮಾತನಾಡಲು ಸಾಧ್ಯವಾಗಲಿಲ್ಲ. ತಮಿಳು ಮತ್ತು ಕನ್ನಡವಷ್ಟೇ ಬರುತ್ತಿದ್ದ ಸಂತ್ರಸ್ತೆಗೆ ಅರ್ಚಕ ಅರುಣ್ ಎಂಬಾತ ಪರಿಚಯವಾಗಿದ್ದಾನೆ. ಆತ ತಮಿಳಿನಲ್ಲಿ ಮಾತನಾಡಿ ಅದನ್ನು ಅರ್ಚಕರಿಗೆ ತಿಳಿಸಿದ್ದ. ನಂತರ 24 ಸಾವಿ ರೂ. ಕೊಟ್ಟರೆ ಪೂಜೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದಾನೆ. ಮೊಬೈಲ್ ಸಂಖ್ಯೆ ಪಡೆದುಕೊಂಡಿದ್ದ ಆತ, ಸಂತ್ರಸ್ತೆ ಬೆಂಗಳೂರಿಗೆ ಬಂದ ನಂತರ ಹಲವು ಬಾರಿ ಕರೆ ಮಾಡಿದ್ದ.

ಇದನ್ನೂ ಓದಿ
Image
ನಕಲಿ ಕ್ಲಿನಿಕ್​ಗಳ ಹಾವಳಿ: ನಕಲಿ ವೈದ್ಯನ ಚಿಕಿತ್ಸೆಯಿಂದ 6 ತಿಂಗಳ ಮಗು ಸಾವು
Image
ಲಾಲ್ ಬಾಗ್ ಸುತ್ತೋದು ಇನ್ನಷ್ಟು ಸುಲಭ! ಸಿಗಲಿದೆ ಇ ಸ್ಕೂಟರ್ ಸೌಲಭ್ಯ
Image
ಸೊಲ್ಲಾಪುರ-ಮಂಗಳೂರು ಸಂಪರ್ಕಿಸುವ ರಾ.ಹೆ ಬಂದ್​: ಬದಲಿ ಮಾರ್ಗ ಇಲ್ಲಿದೆ
Image
ಅಪಾರ್ಟಮೆಂಟ್, ಕಂಪನಿಗಳಿಗೆ ತಾನು ಬೆಳೆದ ಮಾವು ರುಚಿ ಹಚ್ಚಿಸಿದ ರೈತ

ಮಾಟ-ಮಂತ್ರದ ನೆಪದಲ್ಲಿ ನಗ್ನ ವಿಡಿಯೋ ಕರೆ!

ಸಂತ್ರಸ್ತೆಗೆ ಕರೆ ಮಾಡಿದ್ದ ಅರುಣ್, ‘ನಿಮ್ಮ ಮೇಲೆ ಮಾಟ-ಮಂತ್ರ ಆಗಿದೆ. ಅದನ್ನು ಹೋಗಲಾಡಿಸಲು ಪೂಜೆ ಮಾಡುತ್ತೇನೆ. ಹೇಳಿದಂತೆ ನೀವು ಮಾಡಬೇಕು’ ಎಂದಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ನಂತರ ವಾಟ್ಸ್​​ಆ್ಯಪ್ ವಿಡಿಯೋ ಕಾಲ್​​ನಲ್ಲಿ ನಗ್ನನಾಗಿದ್ದಲ್ಲದೆ, ಮಹಿಳೆಗೂ ಬಲವಂತ ಮಾಡಿದ್ದಾನೆ. ಆದರೆ ಸಂತ್ರಸ್ತೆ ಅದಕ್ಕೆ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡಿದ್ದ ಆತ, ಮಕ್ಕಳ ಮೇಳೆ ಮಾಟ ಮಂತ್ರ ಮಾಡಿಸುವೆ ಎಂದು ಬೆದರಿಕೆ ಹಾಕಿ, ಮಹಿಳೆ ನಗ್ನಳಾಗುವಂತೆ ಮಾಡಿದ್ದ. ಅದಾದ ನಂತರ ಮತ್ತೆ ವಿಶೇಷ ಪೊಜೆಗೆಂದು ದೇವಸ್ಥಾನಕ್ಕೆ ಬರುವಂತೆ ತಿಳಿಸಿದ್ದ. ಬ್ಲ್ಯಾಕ್​ಮೇಲ್​​ಗೆ ಹೆದರಿ ಮಹಿಳೆ ದೇಗುಲಕ್ಕೆ ತೆರಳಿದ್ದರು. ಆಕೆಯ ಬಳಿ ಪೂಜೆ ಮಾಡಿಸಿದ್ದ ಅರುಣ್ ಹಾಗೂ ಮುಖ್ಯ ಅರ್ಚಕ, ಧಾರ್ಮಿಕ ಕ್ರಿಯೆ ಇದೆ ಎಂದು ಬಲವಂತವಾಗಿ ಕಾರಿನಲ್ಲಿ ಕಾಡಿಗೆ ಕರೆದುಕೊಂಡು ಹೋಗಿ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಮುಂದಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಹಲ್ಲೆ ಮಾಡಲು ಮುಂದಾದ ಕೊಲೆ ಆರೋಪಿಗಳ ಕಾಲಿಗೆ ಪೊಲೀಸ್​ ಗುಂಡೇಟು, ಬಂಧನ

ಘಟನೆಯಿಂದ ತೀವ್ರ ಆಘಾತಕ್ಕೊಳಗಾಗಿದ್ದ ಮಹಿಳೆ ಅಲ್ಲಿಂದ ಬೆಂಗಳೂರಿಗೆ ವಾಪಸಾಗಿದ್ದು, ನಂತರ ಬೆಳ್ಳಂದೂರು ಠಾಣೆಗೆ ದೂರು ನೀಡಿದ್ದಾರೆ. ಬಂಧಿತನ ವಿರುದ್ಧ ಬಿಎನ್​ಎಸ್ ಕಾಯ್ದೆಯ ವಿವಿಧ ಸೆಕ್ಷನ್​ಗಳ ಅಡಿ ಪ್ರಕರಣ ದಾಖಲಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:26 am, Mon, 16 June 25

Follow Us
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್