AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ವಿರೋಧಿಗಳಿಂದ ಇಡಿ ದಾಳಿ ನಡೆದಿದೆ, ಜಮೀರ್ ಅಹ್ಮದ್​ಗೆ ಸಾಲ ನೀಡಿದ್ದೆ; ಕೆಜಿಎಫ್ ಬಾಬು ಸುದ್ದಿಗೋಷ್ಟಿ

ಶಾಸಕ ಜಮೀರ್ ಅಹ್ಮದ್ ಅವರಿಗೆ 3 ಕೋಟಿ ರೂ. ಸಾಲ ನೀಡಿದ್ದೆ. ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಇಡಿ ದಾಳಿ ನಡೆದಿತ್ತು. ಈ ವೇಳೆ ನನ್ನ ಇಡಿ ವಿಚಾರಣೆಗೆ ಕರೆದಾಗ ಸಾಲದ ಬಗ್ಗೆ ಹೇಳಿದ್ದೆ

ನನ್ನ ವಿರೋಧಿಗಳಿಂದ ಇಡಿ ದಾಳಿ ನಡೆದಿದೆ, ಜಮೀರ್ ಅಹ್ಮದ್​ಗೆ ಸಾಲ ನೀಡಿದ್ದೆ; ಕೆಜಿಎಫ್ ಬಾಬು ಸುದ್ದಿಗೋಷ್ಟಿ
ಕೆಜಿಎಫ್ ಬಾಬು
Follow us
TV9 Web
| Updated By: sandhya thejappa

Updated on:May 29, 2022 | 11:41 AM

ಬೆಂಗಳೂರು: ಇಡಿ ಅಧಿಕಾರಿಗಳು (ED Officials) ದಾಳಿ ಮುಕ್ತಾಯವಾದ ಬಳಿಕ ಉದ್ಯಮಿ ಕೆಜಿಎಫ್ ಬಾಬು (KGF Babu) ಸುದ್ದಿಗೋಷ್ಟಿ ನಡೆಸಿದ್ದಾರೆ. ನನ್ನ ವಿರೋಧಿಗಳು ಇಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇಡಿ ಅಧಿಕಾರಿಗಳು ಸರ್ಚಿಂಗ್ ವಾರಂಟ್ ಸಮೇತ ಬಂದಿದ್ದರು. ನನ್ನ ಅಕೌಂಟ್ಸ್ ಎಲ್ಲಾ ಕ್ಲಿಯರ್ ಇದೆ. ಇಡಿ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಿದ್ದೇನೆ. ಮನೆಯಲ್ಲಿ 8 ಲಕ್ಷ 60 ಸಾವಿರ ರೂಪಾಯಿ ಹಣ ಇತ್ತು. 1 ಕೋಟಿ 70 ಲಕ್ಷ ರೂ.ಮೌಲ್ಯದ ಚಿನ್ನ ಜಪ್ತಿ ಮಾಡಿದ್ದಾರೆ. ದಾಖಲೆ ಸಮೇತ ದೆಹಲಿಗೆ ಬರುವಂತೆ ಇಡಿಯವರು ಹೇಳಿದ್ದಾರೆ ಎಂದು ತಿಳಿಸಿದರು.

ಮುಂದುವರಿದು ಮಾತನಾಡಿದ ಕೆಜಿಎಫ್ ಬಾಬು, ಶಾಸಕ ಜಮೀರ್ ಅಹ್ಮದ್ ಅವರಿಗೆ 3 ಕೋಟಿ ರೂ. ಸಾಲ ನೀಡಿದ್ದೆ. ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಇಡಿ ದಾಳಿ ನಡೆದಿತ್ತು. ಈ ವೇಳೆ ನನ್ನ ಇಡಿ ವಿಚಾರಣೆಗೆ ಕರೆದಾಗ ಸಾಲದ ಬಗ್ಗೆ ಹೇಳಿದ್ದೆ. 2013ರಲ್ಲಿ ಜಮೀರ್​ಗೆ ಸಾಲ ನೀಡಿದ ಬಗ್ಗೆ ಮಾಹಿತಿ ನೀಡಿದ್ದೆ. ಹಣ ವಾಪಸ್ ನೀಡಲು ಸಮಯ ಕೇಳಿದ್ದಾರೆ ಎಂದು ಹೇಳಿದ್ದೆ. ಈ ಬಗ್ಗೆ ನನಗೆ ಆಗ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಎಂಎಲ್​ಸಿ ಚುನಾವಣೆ ಸ್ಪರ್ಧೆಗೂ ಮುನ್ನ ನೋಟಿಸ್ ನೀಡಿದ್ರು. ಈಗ ಇಡಿ ಅಧಿಕಾರಿಗಳು ನನ್ನ ಮನೆ ಮೇಲೆ ರೇಡ್ ಮಾಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Indian Navy: ನಿವೃತ್ತಿ ಹೊಂದಿದ ಐಎನ್‌ಎಸ್ ಗೋಮತಿ; ಭಾರತೀಯ ನೌಕೆಯಲ್ಲಿ 34 ವರ್ಷಗಳ ಕಾಲ ಸೇವೆ ಸಲ್ಲಿಸಿದ ಗೋಮತಿ

ಇದನ್ನೂ ಓದಿ
Image
Indian Navy: ಭಾರತೀಯ ನೌಕಾಪಡೆಯಲ್ಲಿ 34 ವರ್ಷಗಳ ಸೇವೆ ಸಲ್ಲಿಸಿದ್ದ ಯುದ್ಧನೌಕೆ ಐಎನ್‌ಎಸ್ ಗೋಮತಿ ನಿವೃತ್ತಿ
Image
ಸಮುದ್ರ ಕಿನಾರೆಯಲ್ಲಿ ನಿಂತು ಮಸ್ತ್​ ಫೋಟೋ ಹಂಚಿಕೊಂಡ ನಟಿ ಶ್ವೇತಾ ಪ್ರಸಾದ್
Image
UEFA Champions League: ದಾಖಲೆಯ 14ನೇ ಬಾರಿ ಯುರೋಪಿಯನ್ ಟ್ರೋಫಿ ಎತ್ತಿ ಹಿಡಿದ ರಿಯಲ್ ಮ್ಯಾಡ್ರಿಡ್
Image
ಕರ್ನಾಟಕ ವಿವಿ ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀದೇವಿ ನೇಮಕಾತಿ ರದ್ದು ಆದೇಶಕ್ಕೆ ‘ಸುಪ್ರೀಂ’ ಮಧ್ಯಂತರ ತಡೆ

40 ರಿಂದ 50 ಪ್ರಾಪರ್ಟಿಗಳು ಇವೆ- ಕೆಜಿಎಫ್ ಬಾಬು: ನಾನು ಕಾನೂನು ಬದ್ಧವಾಗಿ ವ್ಯಾಪಾರ ಮಾಡುತ್ತಿದ್ದೇನೆ ಎಂದು ಮಾತನಾಡಿದ ಕೆಜಿಎಫ್ ಬಾಬು, ಕಾನೂನು ಬದ್ಧವಾಗಿಯೇ ಜಮೀನು ಖರೀದಿಸಿದ್ದೇನೆ. ಜಮೀನುಗಳ ಕುರಿತ ದಾಖಲಾತಿಗಳನ್ನು ಇಡಿ ಅವರಿಗೆ ನೀಡಿದ್ದೇನೆ. ತನ್ನ ಪ್ರಾಪರ್ಟಿಗೆ ಸಂಬಂಧಿಸಿದ ಎಲ್ಲಾ ತೆರಿಗೆ ಪಾವತಿಸಿದ್ದೇನೆ. ಇಡಿ ಅಧಿಕಾರಿಗಳ ಮನೆಯ ಎಲ್ಲಾ ಕಡೆ ಶೋಧ ನಡೆಸಿದ್ದಾರೆ. ಮನೆಯಲ್ಲಿ ಪತ್ತೆಯಾದ ನಗದು ಹಣ ವಾಪಸ್ ನೀಡಿದ್ದಾರೆ. ಮನೆಯಲ್ಲಿ ಪತ್ತೆಯಾದ ಚಿನ್ನಕ್ಕೆ ದಾಖಲೆ ನೀಡಲು ಹೇಳಿದ್ದಾರೆ. ನನ್ನ ಬಳಿ 40 ರಿಂದ 50 ಪ್ರಾಪರ್ಟಿಗಳು ಇವೆ. ಕಾನೂನುಬದ್ಧವಾಗಿಯೇ ಎಲ್ಲವನ್ನೂ ಖರೀದಿ ಮಾಡಿದ್ದೇನೆ ಎಂದು ಅಭಿಪ್ರಾಯಪಟ್ಟರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:37 am, Sun, 29 May 22

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್