ಶೋಕಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಕೆಜಿಎಫ್ ಗ್ಯಾಂಗ್ ಬಂಧನ; ಚಿನ್ನಾಭರಣ ಸೇರಿ 1.5 ಲಕ್ಷ ಹಣ ಜಪ್ತಿ

ಶೋಕಿ ಜೀವನಕ್ಕಾಗಿ ಕಳ್ಳತನ ಮಾಡುತ್ತಿದ್ದ ಕೆಜಿಎಫ್ ಗ್ಯಾಂಗ್​ನ್ನು ಜಿಲ್ಲೆಯ ಹೊಸಕೋಟೆ ಉಪವಿಭಾಗದ ಆವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಸುನೀಲ್, ಅರವಿಂದ್, ನಂದಿನಿ, ಮೇರಿ ಬಂಧನಕ್ಕೊಳಗಾದ ಆರೋಪಿಗಳು.

ಶೋಕಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಕೆಜಿಎಫ್ ಗ್ಯಾಂಗ್ ಬಂಧನ; ಚಿನ್ನಾಭರಣ ಸೇರಿ 1.5 ಲಕ್ಷ ಹಣ ಜಪ್ತಿ
ಕೆಜಿಎಫ್​ ಗ್ಯಾಂಗ್​ ಅರೆಸ್ಟ್​
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 15, 2023 | 12:25 PM

ಬೆಂಗಳೂರು ಗ್ರಾಮಾಂತರ: ಶೋಕಿ ಜೀವನಕ್ಕಾಗಿ ಕಳ್ಳತನ ಮಾಡುತ್ತಿದ್ದ ಕೆಜಿಎಫ್ ಗ್ಯಾಂಗ್(KGF Gang)​ನ್ನು ಜಿಲ್ಲೆಯ ಹೊಸಕೋಟೆ(Hosakote) ಉಪವಿಭಾಗದ ಆವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಸುನೀಲ್, ಅರವಿಂದ್, ನಂದಿನಿ, ಮೇರಿ ಬಂಧನಕ್ಕೊಳಗಾದ ಆರೋಪಿಗಳು. ಇನ್ನು ಈ ವೇಳೆ ಅರ್ಧ ಕೆಜಿಗೂ ಅಧಿಕ ಚಿನ್ನಾಭರಣ, 3 ಕೆಜಿ ಬೆಳ್ಳಿ ಸೇರಿ1.5 ಲಕ್ಷ ಹಣ ಜಪ್ತಿ ಮಾಡಲಾಗಿದೆ. ಈ ಖತರ್ನಾಕ್​ ಗ್ಯಾಂಗ್​ ಸಂಜೆ ವೇಳೆ ಲೈಟ್ ಹಾಕದೇ ಬೀಗ ಹಾಕಿರುವ‌ ಮನೆಗಳನ್ನೆ ಟಾರ್ಗೆಟ್​ ಮಾಡಿ, ಮಧ್ಯರಾತ್ರಿ ಮನೆಗೆ ನುಗ್ಗಿ ಚಿನ್ನಾಭರಣ, ಹಣ ದೋಚುತ್ತಿದ್ದರು.

ಆವಲಹಳ್ಳಿ ಸೇರಿ ಬೆಂಗಳೂರಿನ ಹಲವಡೆ ಕಳ್ಳತನ ಮಾಡಿರುವ ಗ್ಯಾಂಗ್

ಇನ್ನು ಈ ಗ್ಯಾಂಗ್​ 15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿತ್ತು. ಆವಲಹಳ್ಳಿ ಸೇರಿ ಬೆಂಗಳೂರಿನ ಹಲವಡೆ ಕಳ್ಳತನ ಮಾಡಿದ್ದು, ಆರೋಪಿಗಳಾದ ಸುನೀಲ್, ಅರವಿಂದ್ ಇಬ್ಬರೂ ಸೇರಿ ಮನೆ ಕಳ್ಳತನ ಮಾಡಿ, ಕದ್ದ ಚಿನ್ನಾಭರಣವನ್ನ ನಂದಿನಿ ಮತ್ತು ಮೇರಿ ಸೇರಿ ಬ್ಯಾಂಕ್, ಅಂಗಡಿಯಲ್ಲಿ ಮಾರಾಟ ಮಾಡಿ ಹಣ ನೀಡುತ್ತಿದ್ದರು.ಇತ್ತ ಕದ್ದ ಹಣದಿಂದ ಈ ಗ್ಯಾಂಗ್ ಪೊಲೀಸರ ಕಣ್ತಪ್ಪಿಸಿಕೊಂಡು‌ ಶೋಕಿ ಮಾಡುತ್ತಿದ್ದರು. ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ:ಕಳ್ಳತನವೇ ಅವರ ಪುಲ್ ಟೈಮ್ ವರ್ಕ್: ಕದ್ದ ವಸ್ತು ಮಹಾರಾಷ್ಟ್ರದಲ್ಲಿ ಮಾರಾಟ, ಖತರ್ನಾಕ ಗ್ಯಾಂಗ್​ ಬಂಧನ

ಬೆಂಗಳೂರಿನಲ್ಲಿ ಕುಖ್ಯಾತ ಕಳ್ಳ ಆಸೀಫ್ ಸೇರಿ ಮೂವರ ಬಂಧನ

ಬೆಂಗಳೂರು: 2017ರಲ್ಲಿ ಕಳ್ಳತನ ಕೇಸ್​ನಲ್ಲಿ ಅರೆಸ್ಟ್ ಆಗಿದ್ದ ಆರೋಪಿ ಆಸೀಫ್ ಎಂಬಾತ ಬಿಡುಗಡೆ ಬಳಿಕ ಬೆಂಗಳೂರು ಬಿಟ್ಟು ಹುಬ್ಬಳ್ಳಿ-ಧಾರವಾಡ ಸೇರಿದ್ದ. 6 ವರ್ಷ ಬೆಂಗಳೂರು ಹೊರಗಡೆಯೇ ಕಳ್ಳತನ ಮಾಡುತ್ತಿದ್ದ ಆಸೀಫ್. ಪ್ರಕರಣವೊಂದರಲ್ಲಿ ಹುಬ್ಬಳ್ಳಿ ಪೊಲೀಸರಿಗೆ ಸಿಕ್ಕು ಜೈಲುಪಾಲಾಗಿದ್ದ. ಇದಾದ ಬಳಿಕ ಜೈಲಿನಿಂದ ಬಿಡುಗಡೆಯಾಗಿ ಮತ್ತೆ ಬೆಂಗಳೂರಿಗೆ ಬಂದಿದ್ದ. ತನ್ನ ಸಹಚರರಾದ ಶಬ್ಬೀರ್, ನೌಸದ್ ಜೊತೆಗೂಡಿ ಪುನಃ ಕಳ್ಳತನ ಶುರುಮಾಡಿ, ಮಾಗಡಿ ರಸ್ತೆಯ ಕಾರ್ಖಾನೆ ಕಚೇರಿಯಲ್ಲಿ ಮೂವರು ಸೇರಿ ಕಚೇರಿ ಮೇಲ್ಛಾವಣಿ ತೆರೆದು ಕೃತ್ಯವೆಸಗಿದ್ದರು. ಇದೀಗ ಸಿಸಿಟಿವಿ ದೃಶ್ಯ ಆಧರಿಸಿ ಮಾಗಡಿ ರಸ್ತೆ ಪೊಲೀಸರಿಂದ ಮೂವರನ್ನ ಸೆರೆ ಹಿಡಿಯಲಾಗಿದೆ. ಆರೋಪಿಗಳಿಂದ 5.45 ಲಕ್ಷ ನಗದನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ