AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಗತಿಕ ಸಾಧನೆ ಮಾಡಿದ ಬೆಂಗಳೂರು ಏರ್​ಪೋರ್ಟ್​; ಕೆಐಎಬಿಯಿಂದ ದಾಖಲೆಯ 5.2 ಲಕ್ಷ ಮೆಟ್ರಿಕ್ ಟನ್ ಸರಕು ಸಾಗಾಟ!

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಸರಕು ಸಾಗಾಟದಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಸರಕು ಸಾಗಾಟದಲ್ಲಿ ಹೊಸ ದಾಖಲೆ ನಿರ್ಮಿಸಿದೆ.ಕೃಷಿ, ಔಷಧ, ಆಟೋ ಬಿಡಿಭಾಗಗಳು ಮತ್ತು ಎಲೆಕ್ಟ್ರಾನಿಕ್ ಉಪಕರಣಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ರಫ್ತಾಗುತ್ತಿದೆ. ಭಾರತದ ಅತಿದೊಡ್ಡ ದೇಶೀಯ ಸರಕು ಟರ್ಮಿನಲ್ ಆಗಿರುವ ಕೆಐಎಬಿ, ಬೆಂಗಳೂರಿನ ಜಾಗತಿಕ ಮಹತ್ವ ಹೆಚ್ಚಿಸಿದೆ. ಹೀಗೆ ಕಳೆದ ವರ್ಷ 5.2 ಲಕ್ಷ ಮೆಟ್ರಿಕ್ ಟನ್‌ಗೂ ಹೆಚ್ಚು ಸರಕು ಸಾಗಾಟ ಮಾಡುವ ಮೂಲಕ ಗಮನ ಸೆಳೆದಿದೆ.

ಜಾಗತಿಕ ಸಾಧನೆ ಮಾಡಿದ ಬೆಂಗಳೂರು ಏರ್​ಪೋರ್ಟ್​; ಕೆಐಎಬಿಯಿಂದ ದಾಖಲೆಯ 5.2 ಲಕ್ಷ ಮೆಟ್ರಿಕ್ ಟನ್ ಸರಕು ಸಾಗಾಟ!
ವಿಶ್ವಮಟ್ಟದ ಸಾಧನೆ ಮಾಡಿದ ಬೆಂಗಳೂರು ಏರ್​ಪೋರ್ಟ್
ನವೀನ್ ಕುಮಾರ್ ಟಿ
| Edited By: |

Updated on: Jan 16, 2026 | 12:32 PM

Share

ದೇವನಹಳ್ಳಿ, ಜನವರಿ 16: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIAB) ಸರಕು ಸಾಗಾಟ ಕ್ಷೇತ್ರದಲ್ಲೂ ಹೊಸ ದಾಖಲೆ ನಿರ್ಮಿಸಿದೆ. ಕಳೆದ ವರ್ಷ ಕೆಐಎಬಿಯಿಂದ ಒಟ್ಟು 5 ಲಕ್ಷ 20 ಸಾವಿರ 985 ಮೆಟ್ರಿಕ್ ಟನ್ ಸರಕು ಸಾಗಾಟವಾಗಿದ್ದು, ಇದು ವಿಮಾನ ನಿಲ್ದಾಣದ ಇತಿಹಾಸದಲ್ಲೇ ಮಹತ್ವದ ಸಾಧನೆಯಾಗಿದೆ. 2024ರ ಅವಧಿಗೆ ಹೋಲಿಸಿದರೆ 2025ರಲ್ಲಿ ಸರಕು ಸಾಗಾಟದಲ್ಲಿ ಶೇ5ರಷ್ಟು ಏರಿಕೆಯಾಗಿದೆ.

ಒಂದೇ ದಿನದಲ್ಲಿ ಸಾವಿರಾರು ಮೆಟ್ರಿಕ್ ಟನ್ ಸರಕು ಸಾಗಾಟ

ಆಗಸ್ಟ್ 7ರಂದು ಒಂದೇ ದಿನದಲ್ಲಿ 2,207 ಮೆಟ್ರಿಕ್ ಟನ್ ಸರಕು ಸಾಗಾಟ ಮಾಡುವ ಮೂಲಕ ಕೆಐಎಬಿ ಗರಿಷ್ಠ ದೈನಂದಿನ ಸರಕು ಸಾಗಾಟದ ದಾಖಲೆಯನ್ನೂ ತನ್ನ ಮುಡಿಗೆ ಏರಿಸಿಕೊಂಡಿದೆ. ಬೆಂಗಳೂರು ವಿಮಾನ ನಿಲ್ದಾಣದಿಂದ ದೇಶೀಯ ಹಾಗೂ ಅಂತಾರಾಷ್ಟ್ರೀಯವಾಗಿ ಒಟ್ಟು 37 ವಿಮಾನ ನಿಲ್ದಾಣಗಳಿಗೆ ಸರಕು ಸಾಗಾಟ ನಡೆಯುತ್ತಿದೆ. ಭಾರತದ ಅತಿದೊಡ್ಡ ದೇಶೀಯ ಸರಕು ಟರ್ಮಿನಲ್ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ಕೆಐಎಬಿ, 8.2 ಎಕರೆ ವಿಸ್ತೀರ್ಣದಲ್ಲಿ 3 ಲಕ್ಷ 70 ಸಾವಿರ ಚದರ ಅಡಿ ವಿಸ್ತಾರದ ಎ-ಗ್ರೇಡ್ ಗೋದಾಮು ಹೊಂದಿದೆ.

ಜಾಗತಿಕ ಮಹತ್ವ ಇನ್ನಷ್ಟು ಹೆಚ್ಚು

ಕೆಐಎಬಿಯಿಂದ ಹೆಚ್ಚಾಗಿ ಕೃಷಿ ಉತ್ಪನ್ನಗಳು, ಔಷಧಿಗಳು, ಆಟೋ ಭಾಗಗಳು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳ ಸಾಗಾಟ ನಡೆಯುತ್ತಿದೆ. ಚಿಕಾಗೋ, ಸಿಂಗಾಪುರ, ಲಂಡನ್, ಹೀಥ್ರೋ, ಫ್ರಾಂಕ್‌ಫರ್ಟ್ ಮತ್ತು ಲೀಪ್ಜಿಗ್ ಸೇರಿದಂತೆ ಪ್ರಮುಖ ಅಂತಾರಾಷ್ಟ್ರೀಯ ನಗರಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ರಫ್ತು ನಡೆಯುತ್ತಿದೆ. ಈ ಸಾಧನೆಯಿಂದ ಬೆಂಗಳೂರು ವಿಮಾನ ನಿಲ್ದಾಣದ ಜಾಗತಿಕ ಮಹತ್ವ ಇನ್ನಷ್ಟು ಹೆಚ್ಚಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More