AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಆರ್​ ಪುರಂ ಪೊಲೀಸರಿಗೆ ದಂಗುಬಡಿಸಿದ ಮಗು ಕಿಡ್ನಾಪ್ ಕೇಸ್: ಪೋಷಕರ ಬೇಜವಾಬ್ದಾರಿಗೆ ಖಾಕಿ ಶಾಕ್

ಮೀನಾ ದಂಪತಿ ನಿನ್ನೆ(ಮೇ 11) ರಾತ್ರಿ ಸುಮಾರು 7.30ರ ವೇಳೆ ಕೆ.ಆರ್.ಪುರಂ ಪೊಲೀಸ್ ಠಾಣೆಗೆ ಬಂದು ತಮ್ಮ 6 ವರ್ಷದ ಮಗಳು ಕಿಡ್ನಾಪ್ ಆಗಿದ್ದಾಳೆ ಎಂದು ದೂರು ದಾಖಲಿಸಿದ್ದರು.

ಕೆಆರ್​ ಪುರಂ ಪೊಲೀಸರಿಗೆ ದಂಗುಬಡಿಸಿದ ಮಗು ಕಿಡ್ನಾಪ್ ಕೇಸ್: ಪೋಷಕರ ಬೇಜವಾಬ್ದಾರಿಗೆ ಖಾಕಿ ಶಾಕ್
ಕೆ.ಆರ್.ಪುರಂ ಪೊಲೀಸ್ ಠಾಣೆ
ಆಯೇಷಾ ಬಾನು
ಆಯೇಷಾ ಬಾನು|

Updated on:May 12, 2023 | 10:50 AM

Share

ಬೆಂಗಳೂರು: ಮಕ್ಕಳ ಮೇಲೆ ಪ್ರಾಣನೇ ಇಟ್ಟುಕೊಳ್ಳುವ ಪೋಷಕರು ಅವರಿಗೆ ಚಿಕ್ಕ ಗಾಯ, ಸಣ್ಣಪುಟ್ಟ ನೋವಾದರೂ ಸಹಿರೋದಿಲ್ಲ. ಅಂತಹದರಲ್ಲಿ ಕಣ್ಣ ಮುಂದೆ ಆಟ ಆಡುತ್ತಿದ್ದ ಪುಟ್ಟ ಮಗಳು ಕಾಣಿಸುತ್ತಿಲ್ಲ ಅಂದ್ರೆ ಎದೆ ಛಲ್ ಎನ್ನುತ್ತೆ. ಯಾರ್ ಕಿಡ್ನಾಪ್(Kidnap) ಮಾಡಿದ್ರೂ, ಎಲ್ಲಿದ್ದಾಳೋ, ಹೇಗಿದ್ದಾಳೋ, ತಿಂದ್ಲಾ ಎಂಬ ನಾನಾ ಪ್ರಶ್ನೆಗಳು ತಲೆಯಲ್ಲಿ ಸುಳಿದಾಡಿ ಬರೀ ಕೆಟ್ಟ ಯೋಚನೆಗಳೇ ಬಂದು ನಿಲ್ಲುತ್ತವೆ. ಮುಂದೇನು ಎಂದೂ ಚಿಂತಿಸಲಾಗದ ಸ್ಥಿತಿಗೆ ತಂದು ನಿಲ್ಲಿಸುತ್ತವೆ. ಇದೇ ರೀತಿ ಬೆಂಗಳೂರಿನಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ಮಗಳು ಕಿಡ್ನಾಪ್ ಆಗಿದ್ದಾಳೆಂದು ಪೋಷಕರು ಕೇಸ್ ದಾಖಲಿಸಿದ್ದು ಪೋಷಕರ ಬೇಜವಾಬ್ದಾರಿಗೆ(Parents Negligence) ಪೊಲೀಸರೇ ಶಾಕ್ ಆಗಿದ್ದಾರೆ.

ಮೀನಾ ದಂಪತಿ ನಿನ್ನೆ(ಮೇ 11) ರಾತ್ರಿ ಸುಮಾರು 7.30ರ ವೇಳೆ ಕೆ.ಆರ್.ಪುರಂ ಪೊಲೀಸ್ ಠಾಣೆಗೆ ಬಂದು ತಮ್ಮ 6 ವರ್ಷದ ಮಗಳು ಕಿಡ್ನಾಪ್ ಆಗಿದ್ದಾಳೆ ಎಂದು ದೂರು ದಾಖಲಿಸಿದ್ದರು. ಮನೆ ಮುಂದೆ ಆಟವಾಡುತ್ತಿದ್ದ 6 ವರ್ಷದ ಮಗಳು ಈಗ ಕಾಣಿಸುತ್ತಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ದೂರಿನ್ವಯ ಕಿಡ್ನಾಪ್ ಕೇಸ್ ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ಮಗುವಿಗಾಗಿ ಹುಡುಕಾಟ ಶುರು ಮಾಡಿದರು. ಇದೇ ವೇಳೆ ಕಿಡ್ನಾಪ್ ಆದ ಸ್ಥಳದ ಅಂದ್ರೆ ಕೆ.ಆರ್.ಪುರಂ ಬಳಿಯ ಜನತಾ ಕಾಲೋನಿ ಬಳಿ ಕ್ಲೂ ಹುಡುಕಲು ಪೊಲೀಸರು ತೆರಳಿದ್ದ ವೇಳೆ ಮನೆಯಲ್ಲೂ ಹುಡುಕಾಟ ನಡೆಸಿದ್ದಾರೆ. ಆಗ ಬಟ್ಟೆ ಕೆಳಗೆ ಮಗಳು ಮಲಗಿರುವುದು ಕಂಡುಬಂದಿದೆ.

ಇದನ್ನೂ ಓದಿ: ಕಾರು-ಬೈಕ್ ನಡುವೆ ಭೀಕರ ಅಪಘಾತ, ಸ್ಥಳದಲ್ಲೆ ಇಬ್ಬರು ಸಾವು: ದ್ವೇಷಕ್ಕೆ ನಡೆಯಿತಾ ಅಪಘಾತ ರೀತಿಯ ಕೊಲೆ?

ಮಗಳು ಮಲಗಿದಾಗ ತಾಯಿ ಒಣಗಿದ್ದ ಬಟ್ಟೆಯನ್ನು ಮಗುವಿನ ಮೇಲೆ ತಂದು ಹಾಕಿದ್ರು. ಮಗು ಮಲಗಿ ಚೆನ್ನಾಗಿ ನಿದ್ರಿಸಿದ್ದ ಕಾರಣ ತಾಯಿ ಬಟ್ಟೆ ಹಾಕಿದ್ರೂ ಎಚ್ಚರಗೊಡಿರಲಿಲ್ಲ. ಹೀಗಾಗಿ ಕಣ್ಣಿಗೆ ಮಗಳು ಕಾಣದ ಕಾರಣ ಗಾಬರಿಯಾದ ಪೋಷಕರು ಕೇಸ್ ದಾಖಲಿಸಿ ಪೊಲೀಸರನ್ನೂ ಹುಡುಕಾಟಕ್ಕಚ್ಚಿದ್ದರು. ಕೆಲ ಕಾಲ ಆತಂಕ ಸೃಷ್ಠಿಯಾಗಿತ್ತು. ಮಗು ಸಿಕ್ಕಿದ್ದಕ್ಕೆ ಪೋಷಕರು ನಿರಾಳರಾಗಿದ್ದು ಪೋಷಕರ ಬೇಜವಾಬ್ದಾರಿತನಕ್ಕೆ ಪೊಲೀಸರು ಶಾಕ್ ಆಗಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:50 am, Fri, 12 May 23

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್