AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸಿನಿಮೀಯ ರೀತಿಯಲ್ಲಿ ಚೇಸ್​​ ಮಾಡಿ ಕಿಡ್ನ್ಯಾರ್ಪ್​ ಬಂಧನ; ಇಲ್ಲಿದೆ ನೋಡಿ ಫುಲ್​ ಡೀಟೆಲ್ಸ್​

ಮಧ್ಯರಾತ್ರಿ ಆಡುಗೋಡಿ ಪೊಲೀಸರು ಸಿನಿಮಾ ರೀತಿಯಲ್ಲಿ 2ಕಿ.ಮಿ ಚೇಸ್​ ಮಾಡಿ ಅಪಹರಣಕ್ಕೊಳಗಾದ ಯುವಕನನ್ನ ರಕ್ಷಿಸಿ ಆರೋಪಿಗಳನ್ನ ಕಂಬಿಯ ಹಿಂದೆ ಕಳುಹಿಸಿದ್ದಾರೆ.

ಬೆಂಗಳೂರಿನಲ್ಲಿ ಸಿನಿಮೀಯ ರೀತಿಯಲ್ಲಿ ಚೇಸ್​​ ಮಾಡಿ ಕಿಡ್ನ್ಯಾರ್ಪ್​ ಬಂಧನ; ಇಲ್ಲಿದೆ ನೋಡಿ ಫುಲ್​ ಡೀಟೆಲ್ಸ್​
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 12, 2023 | 7:14 AM

ಬೆಂಗಳೂರು: ಹಣಕ್ಕಾಗಿ ತೌಹಿದ್ ಎಂಬ ಯುವಕನನ್ನ ಕಿಡ್ನ್ಯಾಪ್ ಮಾಡಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೋರಮಂಗಲ 100 ಫೀಟ್​​ ರಸ್ತೆ ಬಳಿಯ ಚೆಕ್​ಪೋಸ್ಟ್​​ ಬ್ಯಾರಿಕೇಡ್​ಗೆ ರಾತ್ರಿ 11.40ರ ಸುಮಾರಿನಲ್ಲಿ ಕಾರು ಡಿಕ್ಕಿ ಹೊಡೆದಿದ್ದು, ಯುವಕ ಕಾಪಾಡಿ ಎಂದು ಕೂಗಿದ್ದಾನೆ. ಈ ವೇಳೆ ಆಡುಗೋಡಿ ಇನ್ಸ್​​ಪೆಕ್ಟರ್​ ಮಂಜುನಾಥ್​​ ಅಲರ್ಟ್ ಆಗಿದ್ದಾರೆ. ಕೂಡಲೇ ಸಿನಿಮಾ ರೀತಿಯಲ್ಲಿ 2 ಕಿ.ಮೀ. ಚೇಸ್​ ಮಾಡಿ ವಾಟರ್ ಟ್ಯಾಂಕ್ ಜಂಕ್ಷನ್ ಬಳಿ ಯುವಕನನ್ನ ರಕ್ಷಿಸಿದ್ದಾರೆ. ನಾಲ್ವರಲ್ಲಿ ಓರ್ವ ಆರೋಪಿ ಗೋಪಿ ಎಂಬುವವನನ್ನ ಬಂಧಿಸಲಾಗಿದ್ದು, ಇನ್ನುಳಿದವರಿಗಾಗಿ ಬಲೆ ಪೊಲೀಸರು ಬಲೆ ಬಿಸಿದ್ದಾರೆ.

3 ದಿನದ ಹಿಂದೆ ಬಂಡೆಪಾಳ್ಯ ಬಳಿ ತೌಹಿದ್​ನನ್ನ ಕಿಡ್ನಾಪ್ ಮಾಡಿದ್ದ ಕಿಡ್ನ್ಯಾಪರ್ಸ್​ ಗೌಪ್ಯ ಸ್ಥಳದಲ್ಲಿರಿಸಿಕೊಂಡು ಕುಟುಂಬಸ್ಥರಿಗೆ 60 ಸಾವಿರ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಇಲ್ಲವಾದರೆ ತೌಹಿದ್​ನನ್ನ ಬೀಡುವುದಿಲ್ಲವೆಂದಿದ್ದಾರೆ. ಜೊತೆಗೆ ಪೊಲೀಸ್ ಠಾಣೆಗೆ ವಿಚಾರ ಮುಟ್ಟಿಸಿದರೆ ಕೊಲೆ ಮಾಡೋದಾಗಿ ಹೆದರಿಸಿದ್ದಾರೆ. ಹಾಗಾಗಿ ನಿನ್ನೆ ಸಂಜೆ 4.30 ಕ್ಕೆ ತೌಹಿದ್ ತಾಯಿ 35 ಸಾವಿರ ಹಣ ನೀಡಿದ್ದಾರೆ. ಹಣ ಕೊಟ್ಟ ಮೇಲೂ ಆರೋಪಿಗಳು ತೌಹಿದ್​ನನ್ನ ಬಿಟ್ಟಿಲ್ಲ. ನಂತರ ಈ ಬಗ್ಗೆ ದೂರು ನೀಡಲು ಮಡಿವಾಳ ಠಾಣೆಗೆ ಬಂದಿದ್ದ ಕುಟುಂಬ ಅಷ್ಟರಲ್ಲಾಗಲೇ ಆರೋಪಿಯನ್ನು ಬಂಧಿಸಿದ್ದ ಪೊಲೀಸರು. ಪ್ರಕರಣ ಬಂಡೆಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹೀಗಾಗಿ ಪ್ರಕರಣವನ್ನ ಬಂಡೆಪಾಳ್ಯ ಪೊಲೀಸ್ ಠಾಣೆಗೆ ಹಸ್ತಾಂತರ ಮಾಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ