AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸಿನಿಮೀಯ ರೀತಿಯಲ್ಲಿ ಚೇಸ್​​ ಮಾಡಿ ಕಿಡ್ನ್ಯಾರ್ಪ್​ ಬಂಧನ; ಇಲ್ಲಿದೆ ನೋಡಿ ಫುಲ್​ ಡೀಟೆಲ್ಸ್​

ಮಧ್ಯರಾತ್ರಿ ಆಡುಗೋಡಿ ಪೊಲೀಸರು ಸಿನಿಮಾ ರೀತಿಯಲ್ಲಿ 2ಕಿ.ಮಿ ಚೇಸ್​ ಮಾಡಿ ಅಪಹರಣಕ್ಕೊಳಗಾದ ಯುವಕನನ್ನ ರಕ್ಷಿಸಿ ಆರೋಪಿಗಳನ್ನ ಕಂಬಿಯ ಹಿಂದೆ ಕಳುಹಿಸಿದ್ದಾರೆ.

ಬೆಂಗಳೂರಿನಲ್ಲಿ ಸಿನಿಮೀಯ ರೀತಿಯಲ್ಲಿ ಚೇಸ್​​ ಮಾಡಿ ಕಿಡ್ನ್ಯಾರ್ಪ್​ ಬಂಧನ; ಇಲ್ಲಿದೆ ನೋಡಿ ಫುಲ್​ ಡೀಟೆಲ್ಸ್​
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 12, 2023 | 7:14 AM

Share

ಬೆಂಗಳೂರು: ಹಣಕ್ಕಾಗಿ ತೌಹಿದ್ ಎಂಬ ಯುವಕನನ್ನ ಕಿಡ್ನ್ಯಾಪ್ ಮಾಡಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೋರಮಂಗಲ 100 ಫೀಟ್​​ ರಸ್ತೆ ಬಳಿಯ ಚೆಕ್​ಪೋಸ್ಟ್​​ ಬ್ಯಾರಿಕೇಡ್​ಗೆ ರಾತ್ರಿ 11.40ರ ಸುಮಾರಿನಲ್ಲಿ ಕಾರು ಡಿಕ್ಕಿ ಹೊಡೆದಿದ್ದು, ಯುವಕ ಕಾಪಾಡಿ ಎಂದು ಕೂಗಿದ್ದಾನೆ. ಈ ವೇಳೆ ಆಡುಗೋಡಿ ಇನ್ಸ್​​ಪೆಕ್ಟರ್​ ಮಂಜುನಾಥ್​​ ಅಲರ್ಟ್ ಆಗಿದ್ದಾರೆ. ಕೂಡಲೇ ಸಿನಿಮಾ ರೀತಿಯಲ್ಲಿ 2 ಕಿ.ಮೀ. ಚೇಸ್​ ಮಾಡಿ ವಾಟರ್ ಟ್ಯಾಂಕ್ ಜಂಕ್ಷನ್ ಬಳಿ ಯುವಕನನ್ನ ರಕ್ಷಿಸಿದ್ದಾರೆ. ನಾಲ್ವರಲ್ಲಿ ಓರ್ವ ಆರೋಪಿ ಗೋಪಿ ಎಂಬುವವನನ್ನ ಬಂಧಿಸಲಾಗಿದ್ದು, ಇನ್ನುಳಿದವರಿಗಾಗಿ ಬಲೆ ಪೊಲೀಸರು ಬಲೆ ಬಿಸಿದ್ದಾರೆ.

3 ದಿನದ ಹಿಂದೆ ಬಂಡೆಪಾಳ್ಯ ಬಳಿ ತೌಹಿದ್​ನನ್ನ ಕಿಡ್ನಾಪ್ ಮಾಡಿದ್ದ ಕಿಡ್ನ್ಯಾಪರ್ಸ್​ ಗೌಪ್ಯ ಸ್ಥಳದಲ್ಲಿರಿಸಿಕೊಂಡು ಕುಟುಂಬಸ್ಥರಿಗೆ 60 ಸಾವಿರ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಇಲ್ಲವಾದರೆ ತೌಹಿದ್​ನನ್ನ ಬೀಡುವುದಿಲ್ಲವೆಂದಿದ್ದಾರೆ. ಜೊತೆಗೆ ಪೊಲೀಸ್ ಠಾಣೆಗೆ ವಿಚಾರ ಮುಟ್ಟಿಸಿದರೆ ಕೊಲೆ ಮಾಡೋದಾಗಿ ಹೆದರಿಸಿದ್ದಾರೆ. ಹಾಗಾಗಿ ನಿನ್ನೆ ಸಂಜೆ 4.30 ಕ್ಕೆ ತೌಹಿದ್ ತಾಯಿ 35 ಸಾವಿರ ಹಣ ನೀಡಿದ್ದಾರೆ. ಹಣ ಕೊಟ್ಟ ಮೇಲೂ ಆರೋಪಿಗಳು ತೌಹಿದ್​ನನ್ನ ಬಿಟ್ಟಿಲ್ಲ. ನಂತರ ಈ ಬಗ್ಗೆ ದೂರು ನೀಡಲು ಮಡಿವಾಳ ಠಾಣೆಗೆ ಬಂದಿದ್ದ ಕುಟುಂಬ ಅಷ್ಟರಲ್ಲಾಗಲೇ ಆರೋಪಿಯನ್ನು ಬಂಧಿಸಿದ್ದ ಪೊಲೀಸರು. ಪ್ರಕರಣ ಬಂಡೆಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹೀಗಾಗಿ ಪ್ರಕರಣವನ್ನ ಬಂಡೆಪಾಳ್ಯ ಪೊಲೀಸ್ ಠಾಣೆಗೆ ಹಸ್ತಾಂತರ ಮಾಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ