AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗುತ್ತಿಗೆದಾರನ ಕಿಡ್ನ್ಯಾಪ್ ಮಾಡಿ 3 ಕೋಟಿಗೆ ಬೇಡಿಕೆ; ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಸಿಸಿಬಿ ವಶಕ್ಕೆ

ಜಿ.ಕೆ.ವೆಂಕಟೇಶ್​ ಯಶವಂತಪುರ ವಾರ್ಡ್​ನ ಮಾಜಿ ಕಾರ್ಪೊರೇಟರ್​ ಆಗಿದ್ದು, ಯಶವಂತಪುರ(Yashwantpur) ವಾರ್ಡ್ ಕಾಮಗಾರಿಯನ್ನು ಗುತ್ತಿಗೆದಾರರ ಚಂದ್ರು ಗುತ್ತಿಗೆ ಪಡೆದಿದ್ದರು. ಚಂದ್ರುಗೆ ಗುತ್ತಿಗೆ ಸಿಕ್ಕಿದ ಹಿನ್ನೆಲೆ ಕೆಂಡಾಮಂಡಲವಾಗಿದ್ದ ಜಿ.ಕೆ.ವೆಂಕಟೇಶ್, ನಿನ್ನಿಂದ ನಷ್ಟ ಆಗಿದ್ದು, ಕಾಮಗಾರಿ ಕೈ ತಪ್ಪಿದೆ. ಅದನ್ನು ಭರಿಸುವಂತೆ ಬೆದರಿಕೆ ಒಡ್ಡಿದ್ದರು. 2 ದಿನಗಳ ಹಿಂದೆ ಗುತ್ತಿಗೆದಾರ ಚಂದ್ರು ಕಿಡ್ನ್ಯಾಪ್​ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದ.

ಬೆಂಗಳೂರಿನಲ್ಲಿ ಗುತ್ತಿಗೆದಾರನ ಕಿಡ್ನ್ಯಾಪ್ ಮಾಡಿ 3 ಕೋಟಿಗೆ ಬೇಡಿಕೆ; ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಸಿಸಿಬಿ ವಶಕ್ಕೆ
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Oct 20, 2023 | 2:04 PM

Share

ಬೆಂಗಳೂರು, ಅ.20: ಗುತ್ತಿಗೆದಾರನ ಕಿಡ್ನ್ಯಾಪ್ ಮಾಡಿ 3 ಕೋಟಿ ರೂ. ಬೇಡಿಕೆಯಿಟ್ಟಿದ್ದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಜಿ.ಕೆ.ವೆಂಕಟೇಶ್​ ಅವರನ್ನು​ ಸಿಸಿಬಿ ವಶಕ್ಕೆ ಪಡೆದಿದೆ. ಹೌದು, ಜಿ.ಕೆ.ವೆಂಕಟೇಶ್​ ಯಶವಂತಪುರ ವಾರ್ಡ್​ನ ಮಾಜಿ ಕಾರ್ಪೊರೇಟರ್​ ಆಗಿದ್ದು, ಯಶವಂತಪುರ(Yashwantpur) ವಾರ್ಡ್ ಕಾಮಗಾರಿಯನ್ನು ಗುತ್ತಿಗೆದಾರರ ಚಂದ್ರು ಗುತ್ತಿಗೆ ಪಡೆದಿದ್ದರು. ಚಂದ್ರುಗೆ ಗುತ್ತಿಗೆ ಸಿಕ್ಕಿದ ಹಿನ್ನೆಲೆ ಕೆಂಡಾಮಂಡಲವಾಗಿದ್ದ ಜಿ.ಕೆ.ವೆಂಕಟೇಶ್, ನಿನ್ನಿಂದ ನಷ್ಟ ಆಗಿದ್ದು, ಕಾಮಗಾರಿ ಕೈ ತಪ್ಪಿದೆ. ಅದನ್ನು ಭರಿಸುವಂತೆ ಬೆದರಿಕೆ ಒಡ್ಡಿದ್ದರು. 2 ದಿನಗಳ ಹಿಂದೆ ಗುತ್ತಿಗೆದಾರ ಚಂದ್ರು ಕಿಡ್ನ್ಯಾಪ್​ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದ  ಜಿ.ಕೆ.ವೆಂಕಟೇಶ್, 3 ಕೋಟಿ ರೂ. ಚೆಕ್ ಪಡೆದು ಹಲ್ಲೆ ಮಾಡಿ ಬಿಡುಗಡೆ ಮಾಡಲಾಗಿತ್ತು. ಈ ಕುರಿತು ಯಶವಂತಪುರ ಪೊಲೀಸ್ ಠಾಣೆಗೆ ಗುತ್ತಿಗೆದಾರ ಚಂದ್ರು ದೂರು ನೀಡಿದ್ದರು. ಈ ಹಿನ್ನಲೆ ಇದೀಗ ಜಿಕೆ ವೆಂಕಟೇಶ್ ಅವರನ್ನು CCB ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.

ಶಾಲಾ ಬಸ್, ಬೈಕ್, ಬುಲೇರೊ ನಡುವೆ ಸರಣಿ ಅಪಘಾತ

ನೆಲಮಂಗಲ: ಶಾಲಾ ಬಸ್, ಬೈಕ್ ಹಾಗೂ ಬುಲೇರೊ ನಡುವೆ ಡಿಕ್ಕಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-4 ರ ಬೂದಿಹಾಳ್ ಬಳಿ ನಡೆದಿದೆ. ಬೈಕ್​ನಲ್ಲಿದ್ದ ರಾಜೇಶ್ ಹಾಗೂ ಗಂಗಧರ್​ಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಬುಲೋರೋ ವಾಹನ ಡಿಕ್ಕಿಯಾಗಿ ರಸ್ತೆಯಲ್ಲೇ ಬಿದ್ದಿದ್ದರಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಆಗಿದ್ದು, ಬಳಿಕ ಕ್ರೇನ್ ಬಳಸಿ ಮೇಲೆತ್ತಲಾಯಿತು. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಮಹಿಳಾ ಕಾನ್ಸ್​ಟೇಬಲ್ ಕಿಡ್ನ್ಯಾಪ್​& ಮರ್ಡರ್ ಕೇಸ್: ಲೇಡಿ ಕಾನ್ಸ್​ಟೇಬಲ್ ಸೇರಿ ಇಬ್ಬರ ಬಂಧನ

ತಡರಾತ್ರಿ ನಾಲ್ವರು ಅಟ್ಯಾಕ್​ ಮಾಡಿ ವ್ಯಕ್ತಿಯೊಬ್ಬನನ್ನ ಹತ್ಯೆಗೈದ ದುಷ್ಕರ್ಮಿಗಳು

ಬೆಂಗಳೂರು:ತಡರಾತ್ರಿ ನಾಲ್ವರು ದುಷ್ಕರ್ಮಿಗಳು ಕಾರಿನಲ್ಲಿ ತೆರಳುತಿದ್ದವನನ್ನ ಅಡ್ಡಗಟ್ಟಿ ಅಟ್ಯಾಕ್​ ಮಾಡಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಪುಲಕೇಶಿಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಸ್ಗರ್ ಮೃತ ವ್ಯಕ್ತಿ. ಇತ ಗುಜರಿ ಅಂಗಡಿ ವ್ಯವಹಾರ ನಡೆಸುತಿದ್ದು, ತಡರಾತ್ರಿ  ಈ ದುರ್ಘಟನೆ ನಡೆದಿದೆ. ಮೇಲ್ನೋಟಕ್ಕೆ ಹಣಕಾಸು ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪುಲಕೇಶಿ ನಗರ ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:50 pm, Fri, 20 October 23

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ