AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗುತ್ತಿಗೆದಾರನ ಕಿಡ್ನ್ಯಾಪ್ ಮಾಡಿ 3 ಕೋಟಿಗೆ ಬೇಡಿಕೆ; ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಸಿಸಿಬಿ ವಶಕ್ಕೆ

ಜಿ.ಕೆ.ವೆಂಕಟೇಶ್​ ಯಶವಂತಪುರ ವಾರ್ಡ್​ನ ಮಾಜಿ ಕಾರ್ಪೊರೇಟರ್​ ಆಗಿದ್ದು, ಯಶವಂತಪುರ(Yashwantpur) ವಾರ್ಡ್ ಕಾಮಗಾರಿಯನ್ನು ಗುತ್ತಿಗೆದಾರರ ಚಂದ್ರು ಗುತ್ತಿಗೆ ಪಡೆದಿದ್ದರು. ಚಂದ್ರುಗೆ ಗುತ್ತಿಗೆ ಸಿಕ್ಕಿದ ಹಿನ್ನೆಲೆ ಕೆಂಡಾಮಂಡಲವಾಗಿದ್ದ ಜಿ.ಕೆ.ವೆಂಕಟೇಶ್, ನಿನ್ನಿಂದ ನಷ್ಟ ಆಗಿದ್ದು, ಕಾಮಗಾರಿ ಕೈ ತಪ್ಪಿದೆ. ಅದನ್ನು ಭರಿಸುವಂತೆ ಬೆದರಿಕೆ ಒಡ್ಡಿದ್ದರು. 2 ದಿನಗಳ ಹಿಂದೆ ಗುತ್ತಿಗೆದಾರ ಚಂದ್ರು ಕಿಡ್ನ್ಯಾಪ್​ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದ.

ಬೆಂಗಳೂರಿನಲ್ಲಿ ಗುತ್ತಿಗೆದಾರನ ಕಿಡ್ನ್ಯಾಪ್ ಮಾಡಿ 3 ಕೋಟಿಗೆ ಬೇಡಿಕೆ; ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಸಿಸಿಬಿ ವಶಕ್ಕೆ
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Oct 20, 2023 | 2:04 PM

Share

ಬೆಂಗಳೂರು, ಅ.20: ಗುತ್ತಿಗೆದಾರನ ಕಿಡ್ನ್ಯಾಪ್ ಮಾಡಿ 3 ಕೋಟಿ ರೂ. ಬೇಡಿಕೆಯಿಟ್ಟಿದ್ದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಜಿ.ಕೆ.ವೆಂಕಟೇಶ್​ ಅವರನ್ನು​ ಸಿಸಿಬಿ ವಶಕ್ಕೆ ಪಡೆದಿದೆ. ಹೌದು, ಜಿ.ಕೆ.ವೆಂಕಟೇಶ್​ ಯಶವಂತಪುರ ವಾರ್ಡ್​ನ ಮಾಜಿ ಕಾರ್ಪೊರೇಟರ್​ ಆಗಿದ್ದು, ಯಶವಂತಪುರ(Yashwantpur) ವಾರ್ಡ್ ಕಾಮಗಾರಿಯನ್ನು ಗುತ್ತಿಗೆದಾರರ ಚಂದ್ರು ಗುತ್ತಿಗೆ ಪಡೆದಿದ್ದರು. ಚಂದ್ರುಗೆ ಗುತ್ತಿಗೆ ಸಿಕ್ಕಿದ ಹಿನ್ನೆಲೆ ಕೆಂಡಾಮಂಡಲವಾಗಿದ್ದ ಜಿ.ಕೆ.ವೆಂಕಟೇಶ್, ನಿನ್ನಿಂದ ನಷ್ಟ ಆಗಿದ್ದು, ಕಾಮಗಾರಿ ಕೈ ತಪ್ಪಿದೆ. ಅದನ್ನು ಭರಿಸುವಂತೆ ಬೆದರಿಕೆ ಒಡ್ಡಿದ್ದರು. 2 ದಿನಗಳ ಹಿಂದೆ ಗುತ್ತಿಗೆದಾರ ಚಂದ್ರು ಕಿಡ್ನ್ಯಾಪ್​ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದ  ಜಿ.ಕೆ.ವೆಂಕಟೇಶ್, 3 ಕೋಟಿ ರೂ. ಚೆಕ್ ಪಡೆದು ಹಲ್ಲೆ ಮಾಡಿ ಬಿಡುಗಡೆ ಮಾಡಲಾಗಿತ್ತು. ಈ ಕುರಿತು ಯಶವಂತಪುರ ಪೊಲೀಸ್ ಠಾಣೆಗೆ ಗುತ್ತಿಗೆದಾರ ಚಂದ್ರು ದೂರು ನೀಡಿದ್ದರು. ಈ ಹಿನ್ನಲೆ ಇದೀಗ ಜಿಕೆ ವೆಂಕಟೇಶ್ ಅವರನ್ನು CCB ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.

ಶಾಲಾ ಬಸ್, ಬೈಕ್, ಬುಲೇರೊ ನಡುವೆ ಸರಣಿ ಅಪಘಾತ

ನೆಲಮಂಗಲ: ಶಾಲಾ ಬಸ್, ಬೈಕ್ ಹಾಗೂ ಬುಲೇರೊ ನಡುವೆ ಡಿಕ್ಕಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-4 ರ ಬೂದಿಹಾಳ್ ಬಳಿ ನಡೆದಿದೆ. ಬೈಕ್​ನಲ್ಲಿದ್ದ ರಾಜೇಶ್ ಹಾಗೂ ಗಂಗಧರ್​ಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಬುಲೋರೋ ವಾಹನ ಡಿಕ್ಕಿಯಾಗಿ ರಸ್ತೆಯಲ್ಲೇ ಬಿದ್ದಿದ್ದರಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಆಗಿದ್ದು, ಬಳಿಕ ಕ್ರೇನ್ ಬಳಸಿ ಮೇಲೆತ್ತಲಾಯಿತು. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಮಹಿಳಾ ಕಾನ್ಸ್​ಟೇಬಲ್ ಕಿಡ್ನ್ಯಾಪ್​& ಮರ್ಡರ್ ಕೇಸ್: ಲೇಡಿ ಕಾನ್ಸ್​ಟೇಬಲ್ ಸೇರಿ ಇಬ್ಬರ ಬಂಧನ

ತಡರಾತ್ರಿ ನಾಲ್ವರು ಅಟ್ಯಾಕ್​ ಮಾಡಿ ವ್ಯಕ್ತಿಯೊಬ್ಬನನ್ನ ಹತ್ಯೆಗೈದ ದುಷ್ಕರ್ಮಿಗಳು

ಬೆಂಗಳೂರು:ತಡರಾತ್ರಿ ನಾಲ್ವರು ದುಷ್ಕರ್ಮಿಗಳು ಕಾರಿನಲ್ಲಿ ತೆರಳುತಿದ್ದವನನ್ನ ಅಡ್ಡಗಟ್ಟಿ ಅಟ್ಯಾಕ್​ ಮಾಡಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಪುಲಕೇಶಿಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಸ್ಗರ್ ಮೃತ ವ್ಯಕ್ತಿ. ಇತ ಗುಜರಿ ಅಂಗಡಿ ವ್ಯವಹಾರ ನಡೆಸುತಿದ್ದು, ತಡರಾತ್ರಿ  ಈ ದುರ್ಘಟನೆ ನಡೆದಿದೆ. ಮೇಲ್ನೋಟಕ್ಕೆ ಹಣಕಾಸು ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪುಲಕೇಶಿ ನಗರ ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:50 pm, Fri, 20 October 23

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು