AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಲಪಾಡ್ ಯೂತ್ ಕಾಂಗ್ರೆಸ್ ಹೆಸರೇಳಿಕೊಂಡು ವಿದ್ಯಾರ್ಥಿ ಕಿಡ್ನಾಪ್ ಮಾಡಿ ಕಿರುಕುಳ; 9 ಜನರ ವಿರುದ್ಧ FIR

Student Kidnap: ಕೆಲ ಕಿಡಿಗೇಡಿಗಳು ನಾವು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಕಡೆಯ ಹುಡುಗರು ಎಂದು ಹೇಳಿಕೊಂಡು ವಿದ್ಯಾರ್ಥಿಯೊಬ್ಬನನ್ನು ಕಿಡ್ನಾಪ್ ಮಾಡಿ ಕಿರುಕುಳ ನೀಡಿ ಹಣ ವಸೂಲಿ ಮಾಡಿದ್ದಾರೆ. ಘಟನೆ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ 9 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ನಲಪಾಡ್ ಯೂತ್ ಕಾಂಗ್ರೆಸ್ ಹೆಸರೇಳಿಕೊಂಡು ವಿದ್ಯಾರ್ಥಿ ಕಿಡ್ನಾಪ್ ಮಾಡಿ ಕಿರುಕುಳ; 9 ಜನರ ವಿರುದ್ಧ FIR
ಕೆಂಗೇರಿ ಪೊಲೀಸ್ ಠಾಣೆ
Jagadisha B
| Edited By: |

Updated on: Aug 19, 2024 | 9:11 AM

Share

ಬೆಂಗಳೂರು, ಆಗಸ್ಟ್​.19: ನಲಪಾಡ್ ಯೂತ್ ಕಾಂಗ್ರೆಸ್ (Youth Congress) ಹೆಸರೇಳಿಕೊಂಡು ವಿದ್ಯಾರ್ಥಿಗೆ ಕಿರಿಕುಳ ನೀಡಿರುವ ಆರೋಪ ಕೇಳಿ ಬಂದಿದ್ದು ಕೆಂಗೇರಿ ಪೊಲೀಸ್ ಠಾಣೆಯಲ್ಲಿ (Kengeri Police Station) 9 ಮಂದಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕೆಲ ಕಿಡಿಗೇಡಿಗಳು ನಾವು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ (Nalapad) ಕಡೆಯ ಹುಡುಗರು ಎಂದು ಹೇಳಿಕೊಂಡು ವಿದ್ಯಾರ್ಥಿಯೊಬ್ಬನನ್ನು ಕಿಡ್ನಾಪ್ (Student Kidnap Case) ಮಾಡಿ ಆತನ ಮೇಲೆ ಹಲ್ಲೆ ನಡೆಸಿ ಕಿರುಕುಳ ನೀಡಿದ್ದಾರೆ. ಸದ್ಯ ಈಗ ಈ ಕುರಿತು ವಿದ್ಯಾರ್ಥಿ ದೂರು ನೀಡಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ.

ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿರುವ ಜೀವನ್‌ ಜೈನ್‌ ಎಂಬ ವಿದ್ಯಾರ್ಥಿ ಕಳೆದ ವರ್ಷ ಆಯುಷ್ ಶ್ರೀನಿವಾಸ್ ಎಂಬಾತನಿಂದ ಮೂರು ಲಕ್ಷ ಸಾಲ ಪಡೆದಿದ್ದ. ಇವೆಂಟ್ ಒಂದರ ವಿಚಾರವಾಗಿ ಹಣ ಪಡೆದಿದ್ದ. ಆದರೆ ಕಾರಣಾಂತರಗಳಿಂದಾಗಿ ಜೀವನ್​ಗೆ ಹೇಳಿದ ಸಮಯಕ್ಕೆ ಹಣ ನೀಡಲು ಆಗಿರಲಿಲ್ಲ. ತಡವಾಗಿ ಸಾಲ ತೀರಿಸಿದ್ದ. ಆದರೆ ಕಿಡಿಗೇಡಿಗಳು ಸಾಲ ತೀರಿಸಿದರೂ ಆತನನ್ನು ಬಿಡದೆ ಮತ್ತಷ್ಟು ಹಣಕ್ಕಾಗಿ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಸಣ್ಣ ವಾಗ್ವಾದ, ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈದು ಆರೋಪಿ ಪರಾರಿ

ಜೀವನ್​ನನ್ನು ಬಲವಂತ ಬೆಟ್ಟಿಂಗ್ ಬಲೆಗೆ ಬೀಳಿಸಿದ್ದಾರೆ ಎಂಬ ಆರೋಪ‌ ಕೇಳಿ ಬಂದಿದೆ. ಜೊತೆಗೆ ಕಿಡ್ನ್ಯಾಪ್​ ಮಾಡಿ ಹಣಕ್ಕೆ ಬೇಡಿಕೆ ಇಟ್ಟು ಬೆತ್ತಲೆಗೊಳಿಸಿದ್ದಾರೆ. ಅಷ್ಟೇ ಅಲ್ಲದೆ ಬೆತ್ತಲೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆಹಾಕಿದ್ದಾರೆ. ಆ ಬಳಿಕ 6 ಲಕ್ಷಕ್ಕೆ ಡಿಮ್ಯಾಂಡ್ ಮಾಡಿ ಹಣ ಪಡೆದಿದ್ದಾರೆ. ಅದಾದ ಬಳಿಕವೂ ಮನೆಗೆ ಬಂದು ಸಾಲ ಪಡೆಯುವಂತೆ ಬೆದರಿಕೆ ಹಾಕಿದ್ದಾರೆ. ಸಾಲ ಕೊಟ್ಟು ಹೆಚ್ಚು ಬಡ್ಡಿ ಹಾಕಿ ಕಿರುಕುಳ ನೀಡಿದ್ದಾರೆ ಎಂದು ಯುವಕ ಜೀವನ್ ಆರೋಪ ಮಾಡಿದ್ದಾರೆ.

ಇನ್ನು ಜೀವನ್​​ನನ್ನು ಪದೆ ಪದೇ ಹೋಟೆಲ್​ಗೆ ಕರೆಸಿಕೊಂಡು ಹಲ್ಲೆ ಮಾಡಿದ್ದಾರೆ. ಆರು ಲಕ್ಷ ಹಾಕಿಸಿಕೊಂಡಿದ್ದಲ್ಲದೆ ಹತ್ತು ಲಕ್ಷದವರೆಗೆ ಕೊಡಬೇಕು ಅಂತ ಕಿರುಕುಳ ನೀಡಿದ್ದಾರೆ. ಸದ್ಯ ದೂರಿನಲ್ಲಿ ಒಂಬತ್ತು ಜನರ ವಿರುದ್ಧ ಕಿಡ್ನಾಪ್ ಹಾಗೂ ಸುಲಿಗೆ ಮಾಡಿರೋ ಆರೋಪ ಮಾಡಿ ಯುವಕ ದೂರು ನೀಡಿದ್ದಾನೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ 9 ಜನರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್