AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರ್​ನಲ್ಲಿ ಎಣ್ಣೆ ಹೊಡೆಯುವಾಗ ಶುರುವಾಯ್ತು ಕಿರಿಕ್; ಮಾತಿಗೆ ಮಾತು ಬೆಳೆದು ಇಬ್ಬರು ಯುವಕರ ಕಿಡ್ನಾಪ್‌

ಬಾರ್​ನಲ್ಲಿ ಎಣ್ಣೆ ಹೊಡೆಯುವಾಗ ಮಾತಿಗೆ ಮಾತು ಬೆಳೆದು ರೌಡಿಶೀಟರ್ ಸಹಚರರು ಹಾಗೂ ಸಿದ್ದಾಪುರ ಯುವಕರ ನಡುವೆ ಗಲಾಟೆಯಾಗಿ ಇಬ್ಬರು ಯುವಕರನ್ನ ಕಿಡ್ನಾಪ್ ಮಾಡಿದ ಘಟನೆ ನಗರದ ಸಿದ್ದಾಪುರದಲ್ಲಿ ನಡೆದಿದೆ.

ಬಾರ್​ನಲ್ಲಿ ಎಣ್ಣೆ ಹೊಡೆಯುವಾಗ ಶುರುವಾಯ್ತು ಕಿರಿಕ್; ಮಾತಿಗೆ ಮಾತು ಬೆಳೆದು ಇಬ್ಬರು ಯುವಕರ ಕಿಡ್ನಾಪ್‌
ಪ್ರಾತಿನಿಧಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
|

Updated on: Apr 13, 2023 | 12:00 PM

Share

ಬೆಂಗಳೂರು: ಬಾರ್​ನಲ್ಲಿ ಎಣ್ಣೆ ಹೊಡೆಯುವಾಗ ಮಾತಿಗೆ ಮಾತು ಬೆಳೆದು ರೌಡಿಶೀಟರ್ ಸಹಚರರು ಹಾಗೂ ಸಿದ್ದಾಪುರ ಯುವಕರ ನಡುವೆ ಗಲಾಟೆಯಾಗಿ ಇಬ್ಬರು ಯುವಕರನ್ನ ಕಿಡ್ನಾಪ್(Kidnap) ಮಾಡಿದ ಘಟನೆ ನಗರದ ಸಿದ್ದಾಪುರದಲ್ಲಿ ನಡೆದಿದೆ. ಇದೇ ತಿಂಗಳ 9ರಂದು ಮನೋಜ್ ಹಾಗೂ 17 ವರ್ಷದ ಬಾಲಕ ಬಾರ್​ನಲ್ಲಿದ್ದಾಗ ಅಲ್ಲೇ ಕುಡಿಯಲು ಬಂದಿದ್ದ ಸಿದ್ಧಾಪುರ ಯುವಕರ ಜೊತೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿದೆ. ಬಳಿಕ ಮನೋಜ್ ಹಾಗೂ ಬಾಲಕನನ್ನ ಕಿಡ್ನಾಪ್ ಮಾಡಿ ಸಿದ್ಧಾಪುರಕ್ಕೆ ಕರೆದೊಯ್ದಿದ್ದರು.

ವಿಚಾರ ತಿಳಿದ ರೌಡಿಶೀಟರ್ ಹ್ಯಾಂಡ್ರೋ ಹರೀಶ್‌ ಎಂಬಾತ ತನ್ನ 15 ಸಹಚರರ ಜೊತೆ ಬೈಕ್​ನಲ್ಲಿ ಸಿನಿಮಾ ಸ್ಟೈಲ್​ನಲ್ಲಿ ಚೇಸ್ ಮಾಡಿ ಸಿದ್ದಾಪುರ ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಸಿದ್ಧಾಪುರ ಯುವಕರು ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಸಿದ್ದಾಪುರ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದು, ಹಲ್ಲೆ ಸಂಬಂಧ 6 ಜನ ಯುವಕರು, 4 ಮಂದಿ ಕಾನೂನು ಸಂಘರ್ಷಕ್ಕೊಳಗಾದವರನ್ನ ಬಂಧಿಸಲಾಗಿದೆ.

ಇದನ್ನೂ ಓದಿ:ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ: ಓರ್ವ ಸಾವು

ಪ್ರಥಮ್ ವೈನ್ಸ್ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ; 8 ಲಕ್ಷ ಮೌಲ್ಯದ ಮದ್ಯ ವಶ

ಗದಗ: ನಗರದ ತಿಲಕ್ ಪಾರ್ಕ್ ಬಳಿಯ ಪ್ರಥಮ್ ವೈನ್ಸ್ ಮೇಲೆ ಅಬಕಾರಿ ಡಿಸಿ ಭರತೇಶ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದು, 8 ಲಕ್ಷ ಮೌಲ್ಯದ 2 ಸಾವಿರ ಲೀಟರ್ ಮದ್ಯವನ್ನ ವಶಕ್ಕೆ ಪಡೆದಿದ್ದಾರೆ. ಅಕೌಂಟ್ ಸರಿಯಲ್ಲ ಎನ್ನುವ ಕಾರಣಕ್ಕಾಗಿ ಇಂದು(ಏ.13)ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ದಾಖಲೆಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮದ್ಯವನ್ನು ಶೇಖರಣೆ ಮಾಡಿದ್ದು ಬೆಳಕಿಗೆ ಬಂದಿದ್ದು, ಸೀಜ್​ ಮಾಡಲಾಗಿದೆ ಎ.ಂದು ಅಬಕಾರಿ ಡಿಸಿ ಟಿವಿ9 ಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ