AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರ್​ನಲ್ಲಿ ಎಣ್ಣೆ ಹೊಡೆಯುವಾಗ ಶುರುವಾಯ್ತು ಕಿರಿಕ್; ಮಾತಿಗೆ ಮಾತು ಬೆಳೆದು ಇಬ್ಬರು ಯುವಕರ ಕಿಡ್ನಾಪ್‌

ಬಾರ್​ನಲ್ಲಿ ಎಣ್ಣೆ ಹೊಡೆಯುವಾಗ ಮಾತಿಗೆ ಮಾತು ಬೆಳೆದು ರೌಡಿಶೀಟರ್ ಸಹಚರರು ಹಾಗೂ ಸಿದ್ದಾಪುರ ಯುವಕರ ನಡುವೆ ಗಲಾಟೆಯಾಗಿ ಇಬ್ಬರು ಯುವಕರನ್ನ ಕಿಡ್ನಾಪ್ ಮಾಡಿದ ಘಟನೆ ನಗರದ ಸಿದ್ದಾಪುರದಲ್ಲಿ ನಡೆದಿದೆ.

ಬಾರ್​ನಲ್ಲಿ ಎಣ್ಣೆ ಹೊಡೆಯುವಾಗ ಶುರುವಾಯ್ತು ಕಿರಿಕ್; ಮಾತಿಗೆ ಮಾತು ಬೆಳೆದು ಇಬ್ಬರು ಯುವಕರ ಕಿಡ್ನಾಪ್‌
ಪ್ರಾತಿನಿಧಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 13, 2023 | 12:00 PM

Share

ಬೆಂಗಳೂರು: ಬಾರ್​ನಲ್ಲಿ ಎಣ್ಣೆ ಹೊಡೆಯುವಾಗ ಮಾತಿಗೆ ಮಾತು ಬೆಳೆದು ರೌಡಿಶೀಟರ್ ಸಹಚರರು ಹಾಗೂ ಸಿದ್ದಾಪುರ ಯುವಕರ ನಡುವೆ ಗಲಾಟೆಯಾಗಿ ಇಬ್ಬರು ಯುವಕರನ್ನ ಕಿಡ್ನಾಪ್(Kidnap) ಮಾಡಿದ ಘಟನೆ ನಗರದ ಸಿದ್ದಾಪುರದಲ್ಲಿ ನಡೆದಿದೆ. ಇದೇ ತಿಂಗಳ 9ರಂದು ಮನೋಜ್ ಹಾಗೂ 17 ವರ್ಷದ ಬಾಲಕ ಬಾರ್​ನಲ್ಲಿದ್ದಾಗ ಅಲ್ಲೇ ಕುಡಿಯಲು ಬಂದಿದ್ದ ಸಿದ್ಧಾಪುರ ಯುವಕರ ಜೊತೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿದೆ. ಬಳಿಕ ಮನೋಜ್ ಹಾಗೂ ಬಾಲಕನನ್ನ ಕಿಡ್ನಾಪ್ ಮಾಡಿ ಸಿದ್ಧಾಪುರಕ್ಕೆ ಕರೆದೊಯ್ದಿದ್ದರು.

ವಿಚಾರ ತಿಳಿದ ರೌಡಿಶೀಟರ್ ಹ್ಯಾಂಡ್ರೋ ಹರೀಶ್‌ ಎಂಬಾತ ತನ್ನ 15 ಸಹಚರರ ಜೊತೆ ಬೈಕ್​ನಲ್ಲಿ ಸಿನಿಮಾ ಸ್ಟೈಲ್​ನಲ್ಲಿ ಚೇಸ್ ಮಾಡಿ ಸಿದ್ದಾಪುರ ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಸಿದ್ಧಾಪುರ ಯುವಕರು ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಸಿದ್ದಾಪುರ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದು, ಹಲ್ಲೆ ಸಂಬಂಧ 6 ಜನ ಯುವಕರು, 4 ಮಂದಿ ಕಾನೂನು ಸಂಘರ್ಷಕ್ಕೊಳಗಾದವರನ್ನ ಬಂಧಿಸಲಾಗಿದೆ.

ಇದನ್ನೂ ಓದಿ:ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ: ಓರ್ವ ಸಾವು

ಪ್ರಥಮ್ ವೈನ್ಸ್ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ; 8 ಲಕ್ಷ ಮೌಲ್ಯದ ಮದ್ಯ ವಶ

ಗದಗ: ನಗರದ ತಿಲಕ್ ಪಾರ್ಕ್ ಬಳಿಯ ಪ್ರಥಮ್ ವೈನ್ಸ್ ಮೇಲೆ ಅಬಕಾರಿ ಡಿಸಿ ಭರತೇಶ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದು, 8 ಲಕ್ಷ ಮೌಲ್ಯದ 2 ಸಾವಿರ ಲೀಟರ್ ಮದ್ಯವನ್ನ ವಶಕ್ಕೆ ಪಡೆದಿದ್ದಾರೆ. ಅಕೌಂಟ್ ಸರಿಯಲ್ಲ ಎನ್ನುವ ಕಾರಣಕ್ಕಾಗಿ ಇಂದು(ಏ.13)ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ದಾಖಲೆಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮದ್ಯವನ್ನು ಶೇಖರಣೆ ಮಾಡಿದ್ದು ಬೆಳಕಿಗೆ ಬಂದಿದ್ದು, ಸೀಜ್​ ಮಾಡಲಾಗಿದೆ ಎ.ಂದು ಅಬಕಾರಿ ಡಿಸಿ ಟಿವಿ9 ಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ