AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಇಲಾಖೆ ಹೆಸರು ಬಳಸಿಕೊಂಡು ಕಿಡ್ನಾಪ್​; ಐವರು ಆರೋಪಿಗಳು ಅಂದರ್​

ನಗರದ ಎಸ್ಪಿ ರೋಡ್​ನಲ್ಲಿ ಮೊಬೈಲ್ ಶಾಪ್ ಮಾಲೀಕನಾಗಿದ್ದ ಕಾಲು ಸಿಂಗ್​ನನ್ನು ಗಾಂಜಾ ಮಾರಾಟ ಮಾಡ್ತೀಯಾ ಎಂದು ಬೆದರಿಸಿ ‘ನಾವು ಪೊಲೀಸ್​ನವರು ಅಂತೇಳಿ ಎರಡು ದಿನದ ಹಿಂದೆ  ಆತನನ್ನು ಕಿಡ್ನಾಪ್ ಮಾಡಿದ್ದ ಮಹಮ್ಮದ್ ಖಾಸಿಂ ಅಲಿಯಾಸ್​ ಸೇಟ್ ಟೀಂ, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದರು.

ಪೊಲೀಸ್ ಇಲಾಖೆ ಹೆಸರು ಬಳಸಿಕೊಂಡು ಕಿಡ್ನಾಪ್​; ಐವರು ಆರೋಪಿಗಳು ಅಂದರ್​
ಬಂಧಿತ ಆರೋಪಿಗಳು
Jagadisha B
| Updated By: ಕಿರಣ್ ಹನುಮಂತ್​ ಮಾದಾರ್|

Updated on:Oct 22, 2023 | 8:13 AM

Share

ಬೆಂಗಳೂರು, ಅ.22: ಮಹಾನಗರದಲ್ಲಿ ಕಳ್ಳರಿಗೆ ನಿಜಕ್ಕೂ ಪೊಲೀಸರೆಂದರೆ ಭಯವೇ ಇಲ್ಲವಾ ಎಂಬ ಪ್ರಶ್ನೆ ಮೂಡಿದೆ. ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ತಡೆಯಲು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ತಡೆಯಲಾಗುತ್ತಿಲ್ಲ. ಅದರಂತೆ ಇದೀಗ ಹಣಕ್ಕಾಗಿ ವ್ಯಕ್ತಿಯೋರ್ವನನ್ನು ಕಿಡ್ನಾಪ್(Kidnap) ಮಾಡಲು ಪೊಲೀಸ್ ಇಲಾಖೆಯ ಹೆಸರನ್ನೇ ಬಳಸಿಕೊಂಡ ಅಪಹರಣ ಮಾಡಿ 5 ಲಕ್ಷಕ್ಕೆ ಬೇಡಿಕೆಯಿಟ್ಟ ಘಟನೆ ನಡೆದಿದೆ. ಹೌದು, ಪೊಲೀಸ್ ಡಿಪಾರ್ಟ್ಮೆಂಟ್ ಎಂದು ಹೇಳಿ ಮೊಬೈಲ್ ಶಾಪ್(Mobile Shop) ಮಾಲೀಕನನ್ನು ಹೆದರಿಸಿ ಕಿಡ್ನಾಪ್ ಮಾಡಿ, ಹಣಕ್ಕೆ ಬೇಡಿಕೆ ಇಟ್ಟು, ಇದೀಗ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರ

ನಗರದ ಎಸ್ಪಿ ರೋಡ್​ನಲ್ಲಿ ಮೊಬೈಲ್ ಶಾಪ್ ಮಾಲೀಕನಾಗಿದ್ದ ಕಾಲು ಸಿಂಗ್​ನನ್ನು ಗಾಂಜಾ ಮಾರಾಟ ಮಾಡ್ತೀಯಾ ಎಂದು ಬೆದರಿಸಿ ‘ನಾವು ಪೊಲೀಸ್​ನವರು ಅಂತೇಳಿ ಎರಡು ದಿನದ ಹಿಂದೆ  ಆತನನ್ನು ಕಿಡ್ನಾಪ್ ಮಾಡಿದ್ದ ಮಹಮ್ಮದ್ ಖಾಸಿಂ ಅಲಿಯಾಸ್​ ಸೇಟ್ ಟೀಂ, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದರು. ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿಯಾ, ಪೊಲೀಸರಿಗೆ ಹೇಳುತ್ತೇನೆ ಎಂದು ಮನಸೋ ಇಚ್ಚೆ ಹಲ್ಲೆ ನಡೆಸಿ 5 ಲಕ್ಷಕ್ಕೆ ಡಿಮ್ಯಾಂಡ್ ಇಟ್ಟಿದ್ದರು.

ಇದನ್ನೂ ಓದಿ:ಮೈಸೂರು: ಜಮೀನಿನಲ್ಲಿದ್ದ ಕೇರಳ ಮೂಲದ ರೈತನ ಕೈಕಾಲು ಕಟ್ಟಿ ಹಣ ಕಳ್ಳತನಕ್ಕೆ ಯತ್ನ

ಸದ್ಯ ಐವರು ಆರೋಪಿಗಳನ್ನ ಬಂಧಿಸಿದ ಸಿಸಿಬಿ ಪೊಲೀಸರು

ಇನ್ನು ಕಾಲು ಸಿಂಗ್, ಹಣ ಕೊಡಲು ಒಪ್ಪದೇ ಇದ್ದಾಗ ವಾಸಿಂ, ಇನ್ಫಾರ್ಮೇಶನ್ ಇದೆ ಎಂದು ಪೊಲೀಸರಿಗೆ ಫೇಕ್ ಕಾಲ್ ಮಾಡಿದ್ದ. ಪೊಲೀಸರು ಬೈದು ಕಳುಹಿಸಿದಾಗ ಕಾಲುಸಿಂಗ್​ನನ್ನು ಬಿಟ್ಟು ಕಳುಹಿಸಿದ ತರ ಡ್ರಾಮಾ ಮಾಡಿದ್ದರು. ನಂತರ ಈ ಕುರಿತು ಕಾಲು ಸಿಂಗ್​​ನಿಂದ ವಿವಿ ಪುರಂ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಎನ್​ಸಿಆರ್ ದಾಖಲಿಸಿಕೊಂಡ ವಿವಿಪುರಂ ಪೊಲೀಸರು, ಸಿಸಿಬಿಗೆ ಮಾಹಿತಿ ನೀಡಿದ್ದರು. ಬಳಿಕ ಎಫ್ಐಆರ್ ದಾಖಲಿಸಿದ ಠಾಣಾಧಿಕಾರಿ, ಸದ್ಯ ವಾಸೀಂ, ಶಬ್ಬೀರ್, ಶೋಹಿಬ್, ಮುಜಾಫರ್ ಸೇರಿದಂತೆ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:10 am, Sun, 22 October 23

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು