ಪೊಲೀಸ್ ಇಲಾಖೆ ಹೆಸರು ಬಳಸಿಕೊಂಡು ಕಿಡ್ನಾಪ್​; ಐವರು ಆರೋಪಿಗಳು ಅಂದರ್​

ನಗರದ ಎಸ್ಪಿ ರೋಡ್​ನಲ್ಲಿ ಮೊಬೈಲ್ ಶಾಪ್ ಮಾಲೀಕನಾಗಿದ್ದ ಕಾಲು ಸಿಂಗ್​ನನ್ನು ಗಾಂಜಾ ಮಾರಾಟ ಮಾಡ್ತೀಯಾ ಎಂದು ಬೆದರಿಸಿ ‘ನಾವು ಪೊಲೀಸ್​ನವರು ಅಂತೇಳಿ ಎರಡು ದಿನದ ಹಿಂದೆ  ಆತನನ್ನು ಕಿಡ್ನಾಪ್ ಮಾಡಿದ್ದ ಮಹಮ್ಮದ್ ಖಾಸಿಂ ಅಲಿಯಾಸ್​ ಸೇಟ್ ಟೀಂ, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದರು.

ಪೊಲೀಸ್ ಇಲಾಖೆ ಹೆಸರು ಬಳಸಿಕೊಂಡು ಕಿಡ್ನಾಪ್​; ಐವರು ಆರೋಪಿಗಳು ಅಂದರ್​
ಬಂಧಿತ ಆರೋಪಿಗಳು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 22, 2023 | 8:13 AM

ಬೆಂಗಳೂರು, ಅ.22: ಮಹಾನಗರದಲ್ಲಿ ಕಳ್ಳರಿಗೆ ನಿಜಕ್ಕೂ ಪೊಲೀಸರೆಂದರೆ ಭಯವೇ ಇಲ್ಲವಾ ಎಂಬ ಪ್ರಶ್ನೆ ಮೂಡಿದೆ. ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ತಡೆಯಲು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ತಡೆಯಲಾಗುತ್ತಿಲ್ಲ. ಅದರಂತೆ ಇದೀಗ ಹಣಕ್ಕಾಗಿ ವ್ಯಕ್ತಿಯೋರ್ವನನ್ನು ಕಿಡ್ನಾಪ್(Kidnap) ಮಾಡಲು ಪೊಲೀಸ್ ಇಲಾಖೆಯ ಹೆಸರನ್ನೇ ಬಳಸಿಕೊಂಡ ಅಪಹರಣ ಮಾಡಿ 5 ಲಕ್ಷಕ್ಕೆ ಬೇಡಿಕೆಯಿಟ್ಟ ಘಟನೆ ನಡೆದಿದೆ. ಹೌದು, ಪೊಲೀಸ್ ಡಿಪಾರ್ಟ್ಮೆಂಟ್ ಎಂದು ಹೇಳಿ ಮೊಬೈಲ್ ಶಾಪ್(Mobile Shop) ಮಾಲೀಕನನ್ನು ಹೆದರಿಸಿ ಕಿಡ್ನಾಪ್ ಮಾಡಿ, ಹಣಕ್ಕೆ ಬೇಡಿಕೆ ಇಟ್ಟು, ಇದೀಗ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರ

ನಗರದ ಎಸ್ಪಿ ರೋಡ್​ನಲ್ಲಿ ಮೊಬೈಲ್ ಶಾಪ್ ಮಾಲೀಕನಾಗಿದ್ದ ಕಾಲು ಸಿಂಗ್​ನನ್ನು ಗಾಂಜಾ ಮಾರಾಟ ಮಾಡ್ತೀಯಾ ಎಂದು ಬೆದರಿಸಿ ‘ನಾವು ಪೊಲೀಸ್​ನವರು ಅಂತೇಳಿ ಎರಡು ದಿನದ ಹಿಂದೆ  ಆತನನ್ನು ಕಿಡ್ನಾಪ್ ಮಾಡಿದ್ದ ಮಹಮ್ಮದ್ ಖಾಸಿಂ ಅಲಿಯಾಸ್​ ಸೇಟ್ ಟೀಂ, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದರು. ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿಯಾ, ಪೊಲೀಸರಿಗೆ ಹೇಳುತ್ತೇನೆ ಎಂದು ಮನಸೋ ಇಚ್ಚೆ ಹಲ್ಲೆ ನಡೆಸಿ 5 ಲಕ್ಷಕ್ಕೆ ಡಿಮ್ಯಾಂಡ್ ಇಟ್ಟಿದ್ದರು.

ಇದನ್ನೂ ಓದಿ:ಮೈಸೂರು: ಜಮೀನಿನಲ್ಲಿದ್ದ ಕೇರಳ ಮೂಲದ ರೈತನ ಕೈಕಾಲು ಕಟ್ಟಿ ಹಣ ಕಳ್ಳತನಕ್ಕೆ ಯತ್ನ

ಸದ್ಯ ಐವರು ಆರೋಪಿಗಳನ್ನ ಬಂಧಿಸಿದ ಸಿಸಿಬಿ ಪೊಲೀಸರು

ಇನ್ನು ಕಾಲು ಸಿಂಗ್, ಹಣ ಕೊಡಲು ಒಪ್ಪದೇ ಇದ್ದಾಗ ವಾಸಿಂ, ಇನ್ಫಾರ್ಮೇಶನ್ ಇದೆ ಎಂದು ಪೊಲೀಸರಿಗೆ ಫೇಕ್ ಕಾಲ್ ಮಾಡಿದ್ದ. ಪೊಲೀಸರು ಬೈದು ಕಳುಹಿಸಿದಾಗ ಕಾಲುಸಿಂಗ್​ನನ್ನು ಬಿಟ್ಟು ಕಳುಹಿಸಿದ ತರ ಡ್ರಾಮಾ ಮಾಡಿದ್ದರು. ನಂತರ ಈ ಕುರಿತು ಕಾಲು ಸಿಂಗ್​​ನಿಂದ ವಿವಿ ಪುರಂ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಎನ್​ಸಿಆರ್ ದಾಖಲಿಸಿಕೊಂಡ ವಿವಿಪುರಂ ಪೊಲೀಸರು, ಸಿಸಿಬಿಗೆ ಮಾಹಿತಿ ನೀಡಿದ್ದರು. ಬಳಿಕ ಎಫ್ಐಆರ್ ದಾಖಲಿಸಿದ ಠಾಣಾಧಿಕಾರಿ, ಸದ್ಯ ವಾಸೀಂ, ಶಬ್ಬೀರ್, ಶೋಹಿಬ್, ಮುಜಾಫರ್ ಸೇರಿದಂತೆ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:10 am, Sun, 22 October 23

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ