AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇವಪುರ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾ. 8ಕ್ಕೆ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಜ್ಯೂನಿಯರ್ ಎನ್‌ಟಿಆರ್ ಭಾಗಿ

ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್ಸ್ ಬೆಂಗಳೂರಿನ ಮಹದೇವಪುರ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಿರ್ಮಿಸಿರುವ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಲೋಕಾರ್ಪಣೆ ಮಾರ್ಚ್ 8ರ ಭಾನುವಾರ ನಡೆಯಲಿದೆ. ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್​ಟಿಆರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಮಹದೇವಪುರ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾ. 8ಕ್ಕೆ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಜ್ಯೂನಿಯರ್ ಎನ್‌ಟಿಆರ್ ಭಾಗಿ
ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್ಸ್Image Credit source: KIMS Group of Hospitals
ಗಣಪತಿ ಶರ್ಮಾ
|

Updated on:Mar 07, 2026 | 11:04 AM

Share

ಬೆಂಗಳೂರು, ಮಾರ್ಚ್ 7: ಬೆಂಗಳೂರು ನಗರದಲ್ಲಿ ಆರೋಗ್ಯ ಸೇವೆಗಳ ವಿಸ್ತರಣೆ ನಿಟ್ಟಿನಲ್ಲಿ ಮತ್ತೊಂದು ದೊಡ್ಡ ಹೆಜ್ಜೆ ಇಡಲಾಗಿದ್ದು, ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್ಸ್ (KIMS Group of Hospitals) ವತಿಯಿಂದ ನಿರ್ಮಿಸಲಾಗಿರುವ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮಾರ್ಚ್ 8 ರಂದು ಲೋಕಾರ್ಪಣೆಯಾಗಲಿವೆ. ಮಹದೇವಪುರ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಿರ್ಮಾಣಗೊಂಡಿರುವ ಈ ಆಸ್ಪತ್ರೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್​ಟಿಆರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಆಸ್ಪತ್ರೆಗಳ ಉದ್ಘಾಟನಾ ಸಮಾರಂಭವು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ PES University ಕ್ಯಾಂಪಸ್‌ನ ಎಂಆರ್‌ಡಿ ಆಡಿಟೋರಿಯಂನಲ್ಲಿ ನಡೆಯಲಿದೆ. ಮಹದೇವಪುರದ ಆಸ್ಪತ್ರೆಯಲ್ಲಿ ಬೆಳಗ್ಗೆ 9 ಗಂಟೆಗೆ ಹಾಗೂ ಎಲೆಕ್ಟ್ರಾನಿಕ್ ಸಿಟಿಯ ಆಸ್ಪತ್ರೆಯಲ್ಲಿ ಬೆಳಗ್ಗೆ 11 ಗಂಟೆಗೆ ರಿಬ್ಬನ್ ಕಟ್ಟಿಂಗ್ ಮೂಲಕ ಲೋಕಾರ್ಪಣೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್​ನ ಎಂಡಿ ಡಾ. ಬಿ ಭಾಸ್ಕರ ರಾವ್, ಸಿಇಒ ಡಾ. ನಿತೀಶ್ ಶೆಟ್ಟಿ ಸೇರಿದಂತೆ ಸಂಸ್ಥೆಯ ಪ್ರಮುಖರು ಭಾಗವಹಿಸಲಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಈ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಆರಂಭವಾಗುತ್ತಿದ್ದು, ಆಧುನಿಕ ವೈದ್ಯಕೀಯ ಸೌಲಭ್ಯಗಳು ಮತ್ತು ತಜ್ಞ ವೈದ್ಯರ ಸೇವೆಗಳನ್ನು ಇಲ್ಲಿ ಒದಗಿಸಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.

ಈ ಕಾರ್ಯಕ್ರಮದಲ್ಲಿ ತೆಲುಗು ಚಿತ್ರರಂಗದ ಜನಪ್ರಿಯ ನಟ ಜ್ಯೂನಿಯರ್ ಎನ್​ಟಿಆರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿರುವುದು ವಿಶೇಷ ಆಕರ್ಷಣೆಯಾಗಿರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:02 am, Sat, 7 March 26

Follow Us
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ