AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇವಪುರ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾ. 8ಕ್ಕೆ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಜ್ಯೂನಿಯರ್ ಎನ್‌ಟಿಆರ್ ಭಾಗಿ

ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್ಸ್ ಬೆಂಗಳೂರಿನ ಮಹದೇವಪುರ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಿರ್ಮಿಸಿರುವ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಲೋಕಾರ್ಪಣೆ ಮಾರ್ಚ್ 8ರ ಭಾನುವಾರ ನಡೆಯಲಿದೆ. ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್​ಟಿಆರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಮಹದೇವಪುರ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾ. 8ಕ್ಕೆ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಜ್ಯೂನಿಯರ್ ಎನ್‌ಟಿಆರ್ ಭಾಗಿ
ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್ಸ್Image Credit source: KIMS Group of Hospitals
ಗಣಪತಿ ಶರ್ಮಾ
|

Updated on:Mar 07, 2026 | 11:04 AM

Share

ಬೆಂಗಳೂರು, ಮಾರ್ಚ್ 7: ಬೆಂಗಳೂರು ನಗರದಲ್ಲಿ ಆರೋಗ್ಯ ಸೇವೆಗಳ ವಿಸ್ತರಣೆ ನಿಟ್ಟಿನಲ್ಲಿ ಮತ್ತೊಂದು ದೊಡ್ಡ ಹೆಜ್ಜೆ ಇಡಲಾಗಿದ್ದು, ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್ಸ್ (KIMS Group of Hospitals) ವತಿಯಿಂದ ನಿರ್ಮಿಸಲಾಗಿರುವ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮಾರ್ಚ್ 8 ರಂದು ಲೋಕಾರ್ಪಣೆಯಾಗಲಿವೆ. ಮಹದೇವಪುರ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಿರ್ಮಾಣಗೊಂಡಿರುವ ಈ ಆಸ್ಪತ್ರೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್​ಟಿಆರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಆಸ್ಪತ್ರೆಗಳ ಉದ್ಘಾಟನಾ ಸಮಾರಂಭವು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ PES University ಕ್ಯಾಂಪಸ್‌ನ ಎಂಆರ್‌ಡಿ ಆಡಿಟೋರಿಯಂನಲ್ಲಿ ನಡೆಯಲಿದೆ. ಮಹದೇವಪುರದ ಆಸ್ಪತ್ರೆಯಲ್ಲಿ ಬೆಳಗ್ಗೆ 9 ಗಂಟೆಗೆ ಹಾಗೂ ಎಲೆಕ್ಟ್ರಾನಿಕ್ ಸಿಟಿಯ ಆಸ್ಪತ್ರೆಯಲ್ಲಿ ಬೆಳಗ್ಗೆ 11 ಗಂಟೆಗೆ ರಿಬ್ಬನ್ ಕಟ್ಟಿಂಗ್ ಮೂಲಕ ಲೋಕಾರ್ಪಣೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್​ನ ಎಂಡಿ ಡಾ. ಬಿ ಭಾಸ್ಕರ ರಾವ್, ಸಿಇಒ ಡಾ. ನಿತೀಶ್ ಶೆಟ್ಟಿ ಸೇರಿದಂತೆ ಸಂಸ್ಥೆಯ ಪ್ರಮುಖರು ಭಾಗವಹಿಸಲಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಈ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಆರಂಭವಾಗುತ್ತಿದ್ದು, ಆಧುನಿಕ ವೈದ್ಯಕೀಯ ಸೌಲಭ್ಯಗಳು ಮತ್ತು ತಜ್ಞ ವೈದ್ಯರ ಸೇವೆಗಳನ್ನು ಇಲ್ಲಿ ಒದಗಿಸಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.

ಈ ಕಾರ್ಯಕ್ರಮದಲ್ಲಿ ತೆಲುಗು ಚಿತ್ರರಂಗದ ಜನಪ್ರಿಯ ನಟ ಜ್ಯೂನಿಯರ್ ಎನ್​ಟಿಆರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿರುವುದು ವಿಶೇಷ ಆಕರ್ಷಣೆಯಾಗಿರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:02 am, Sat, 7 March 26

Follow Us
50ನೇ ವಯಸ್ಸಿನಲ್ಲೂ ಶಿಲ್ಪಾ ಶೆಟ್ಟಿ ಫಿಟ್ನೆಸ್; ಇದರ ಹಿಂದಿದೆ ಶಿಸ್ತು
50ನೇ ವಯಸ್ಸಿನಲ್ಲೂ ಶಿಲ್ಪಾ ಶೆಟ್ಟಿ ಫಿಟ್ನೆಸ್; ಇದರ ಹಿಂದಿದೆ ಶಿಸ್ತು
ಯೂಟ್ಯೂಬ್‌ನಲ್ಲಿ 10 ಲಕ್ಷ ಚಂದಾದಾರರು: ನಟಿ ಸೋನಾಕ್ಷಿ ಸಿನ್ಹಾ ಖುಷಿ ಹೇಗಿದೆ
ಯೂಟ್ಯೂಬ್‌ನಲ್ಲಿ 10 ಲಕ್ಷ ಚಂದಾದಾರರು: ನಟಿ ಸೋನಾಕ್ಷಿ ಸಿನ್ಹಾ ಖುಷಿ ಹೇಗಿದೆ
ರಾಮನವಮಿ ಮೆರವಣಿಗೆ ವೇಳೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಹಿಂಸಾಚಾರ
ರಾಮನವಮಿ ಮೆರವಣಿಗೆ ವೇಳೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಹಿಂಸಾಚಾರ
ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದ ವಕೀಲನಿಗ ಥಳಿಸಿದ ಅಂಗಡಿ ವ್ಯಾಪಾರಿ
ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದ ವಕೀಲನಿಗ ಥಳಿಸಿದ ಅಂಗಡಿ ವ್ಯಾಪಾರಿ
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಕಮಿಷನರ್​ ಹೇಳಿದ್ದಿಷ್ಟು
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಕಮಿಷನರ್​ ಹೇಳಿದ್ದಿಷ್ಟು
ಐಟಿ ಸೇವೆ, ಸ್ಟಾರ್ಟ್​​ ಅಪ್​​ ಹೂಡಿಕೆಯಲ್ಲಿ ದೇಶದ ಈ ನಗರವೇ ನಂ.1
ಐಟಿ ಸೇವೆ, ಸ್ಟಾರ್ಟ್​​ ಅಪ್​​ ಹೂಡಿಕೆಯಲ್ಲಿ ದೇಶದ ಈ ನಗರವೇ ನಂ.1
ಬೈ ಎಲೆಕ್ಷನ್​​: BJP ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರ್ತಾರಾ ಹೆಚ್​​ಡಿಕೆ?
ಬೈ ಎಲೆಕ್ಷನ್​​: BJP ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರ್ತಾರಾ ಹೆಚ್​​ಡಿಕೆ?
ಒಳ್ಳೆ ಹುಡ್ಗ ಪ್ರಥಮ್ ಬೆಂಗಳೂರು ಬಿಟ್ಟಿದ್ದೇಕೆ? ಅವರೇ ಕೊಟ್ಟರು ಕಾರಣ
ಒಳ್ಳೆ ಹುಡ್ಗ ಪ್ರಥಮ್ ಬೆಂಗಳೂರು ಬಿಟ್ಟಿದ್ದೇಕೆ? ಅವರೇ ಕೊಟ್ಟರು ಕಾರಣ
ಕಾಡಾನೆಯೂ ಹೆಜ್ಜೆ ಹಾಕಿದ ಅಪರೂಪದ ದೃಶ್ಯ
ಕಾಡಾನೆಯೂ ಹೆಜ್ಜೆ ಹಾಕಿದ ಅಪರೂಪದ ದೃಶ್ಯ
24 ಗಂಟೆಯಲ್ಲೇ ಬಗೆಹರಿದ ಶಾಸಕರ IPL ಟಿಕೆಟ್ ಜ್ವಲಂತ ಸಮಸ್ಯೆ!
24 ಗಂಟೆಯಲ್ಲೇ ಬಗೆಹರಿದ ಶಾಸಕರ IPL ಟಿಕೆಟ್ ಜ್ವಲಂತ ಸಮಸ್ಯೆ!