AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಟ್ರೋ ರವಿಗೆ ನೆರವು, H.S.ದೇವರಾಜ್ ತೆರವು: ಹೊಸ ಕುಮಾರಕೃಪಾ ಅತಿಥಿಗೃಹದ ವ್ಯವಸ್ಥಾಪಕರಾಗಿ ಕಿರಣ್ ಕುಮಾರ್ ನೇಮಕ

ಹೊಸ ಕುಮಾರಕೃಪಾ ಅತಿಥಿಗೃಹದ ವ್ಯವಸ್ಥಾಪಕರಾಗಿ ಕಿರಣ್ ಕುಮಾರ್ ಅವರನ್ನು ನಿಯೋಜಿಸಿ ಕೆಎಸ್​ಟಿಡಿಸಿ ಆದೇಶ ಹೊರಡಿಸಿದೆ.

ಸ್ಯಾಂಟ್ರೋ ರವಿಗೆ ನೆರವು, H.S.ದೇವರಾಜ್  ತೆರವು: ಹೊಸ ಕುಮಾರಕೃಪಾ ಅತಿಥಿಗೃಹದ ವ್ಯವಸ್ಥಾಪಕರಾಗಿ ಕಿರಣ್ ಕುಮಾರ್ ನೇಮಕ
ಹೊಸ ಕುಮಾರಕೃಪಾ ಅತಿಥಿಗೃಹ
TV9 Web
| Edited By: |

Updated on: Jan 07, 2023 | 4:07 PM

Share

ಬೆಂಗಳೂರು: ಹೊಸ ಕುಮಾರಕೃಪಾ ಅತಿಥಿಗೃಹದ (Kumara Krupa Guest House) ವ್ಯವಸ್ಥಾಪಕರಾಗಿ ಹೋಟೆಲ್ ಮಯೂರ ವ್ಯಾಲಿ ವ್ಯೂನಲ್ಲಿ ಕರ್ತವ್ಯದಲ್ಲಿದ್ದ ಕಿರಣ್ ಕುಮಾರ್ ಅವರನ್ನು ನಿಯೋಜಿಸಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಹೆಚ್​. ಎಸ್​ದೇವರಾಜ್ ಸ್ಯಾಂಟ್ರೋ ರವಿಯ ಅಪರಾಧಗಳಿಗೆ ನೆರವು ನೀಡಿದ ಹಿನ್ನೆಲೆ ಎತ್ತಂಗಡಿ ಮಾಡಲಾಗಿದೆ. ಹೀಗಾಗಿ ತೆರವಾದ ಸ್ಥಾನಕ್ಕೆ ಕಿರಣ್ ಕುಮಾರ್​​ನನ್ನು​ ನಿಯೋಜನೆ ಮಾಡಲಾಗಿದೆ.

ಯಾರು ಈ ಸ್ಯಾಂಟ್ರೋ ರವಿ, ಈತನ ದೃಷ್ಕೃತ್ಯಗಳ ಕರ್ಮಕಾಂಡ

ಸ್ಯಾಂಟ್ರೋ ರವಿ ಯುವತಿಯರನ್ನು ನಂಬಿಸಿ ಮೋಸ ಮಾಡುವುದು, ವೇಶ್ಯಾವಾಟಿಕೆ ದಂಧೆಗೆ ಇಳಿಸೋದೆ ಅವನ ಕಾಯಕವಾಗಿದೆ. ಆರೋಪಿ ಸ್ಯಾಂಟ್ರೋ ರವಿ (Santro Ravi) ಮೂಲತಃ ಮಂಡ್ಯದವನು. ವಯಸ್ಸು 52. ಮೈಸೂರಿನ ಇಟ್ಟಿಗೆಗೂಡು ಬಡಾವಣೆಯಲ್ಲಿ‌ ವಾಸವಾಗಿದ್ದನು. ಪಿಯುಸಿ ಡ್ರಾಪ್ ಔಟ್ ಆಗಿದ್ದ ಮಂಜುನಾಥ್​​​​ನ ತಂದೆ ಅಬಕಾರಿ ಇಲಾಖೆಯಲ್ಲಿ ಡಿವೈಎಸ್‌ಪಿ ಆಗಿದ್ದರು. ಈತನಿಗೆ ಮದುವೆಯಾಗಿ ಒಂದು ಹೆಣ್ಣು, ಒಂದು ಗಂಡು ಮಗು ಇದೆ.

ಇದನ್ನೂ ಓದಿ: ಸ್ಯಾಂಟ್ರೋ ರವಿಗೆ ಆ ಹೆಸರು ಬಂದಿದ್ದು ಹೇಗೆ? ಇಲ್ಲಿದೆ ಮಂಡ್ಯ ಡಿವೈಎಸ್‌ಪಿ ಪುತ್ರನ ಸಂಪೂರ್ಣ ಜಾತಕ

ಈತ 1995ರಿಂದ ಹಲವಾರು ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ. ಮೈಸೂರು ಬೆಂಗಳೂರು ಸೇರಿ ಹಲವು ಪೊಲೀಸ್ ಠಾಣೆಯಲ್ಲಿ ಈತನ ವಿರುದ್ದ ಪ್ರಕರಣ ದಾಖಲಾಗಿವೆ. ದ್ವಿಚಕ್ರ ವಾಹನ ಕಳ್ಳತನ, ಕಾರು ಕಳ್ಳತನ, ಅಪಹಣರಣ, ವೇಶ್ಯಾವಾಟಿಕೆ ದಂಧೆ ಪ್ರಕರಣದಲ್ಲಿ‌ ಈತ ಹಲವು ಬಾರಿ ಜೈಲಿಗೆ ಹೋಗಿ ಬಂದಿದ್ದಾನೆ. 1995ರಲ್ಲಿ ಮೊದಲ ಬಾರಿಗೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ಮಂಜುನಾಥ್ ಆ ಸ್ಯಾಂಟ್ರೋ ಕಾರಿನಲ್ಲಿ ವೇಶ್ಯಾವಾಟಿಕೆ ಹಿನ್ನೆಲೆ ಈತನಿಗೆ ಸ್ಯಾಂಟ್ರೋ ರವಿ ಅಂತಾ ಹೆಸರು ಬಂದಿತ್ತು. ಈತ ಸ್ಯಾಂಟ್ರೋ ಕಾರು ಸಮೇತ ಯುವತಿಯರನ್ನು ಸರಬರಾಜು‌ ಮಾಡುತ್ತಿದ್ದ.‌ ಅದರಲ್ಲೂ ರಷ್ಯಾ ಇರಾನ್ ದೆಹಲಿ ಮುಂಬೈ ಕೊಲ್ಕಾತ್ತಾದಿಂದ ದಂಧೆಗೆ ಯುವತಿಯರನ್ನು ಕಳುಹಿಸುತ್ತಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ