AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಟೀಕೆ ಬೆನ್ನಲ್ಲೇ ಸಿಎಂ, ಡಿಸಿಎಂ ಭೇಟಿಯಾದ ಕಿರಣ್ ಮಜುಂದಾರ್ ಶಾ!

ಇತ್ತೀಚಿಗೆ ಬೆಂಗಳೂರಿನ ರಸ್ತೆ ಗುಂಡಿಗಳ ಕುರಿತಾಗಿ ಉದ್ಯಮಿ, ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್ ಶಾ ಅವರು ಕಟುವಾಗಿ ಟೀಕೆ ಮಾಡಿದ್ದರು. ಈ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಸದ್ಯ ಉದ್ಯಮಿಯ ಈ ನಡೆ ಭಾರೀ ಕುತೂಹಲ ಮೂಡಿಸಿದೆ.

ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಟೀಕೆ ಬೆನ್ನಲ್ಲೇ ಸಿಎಂ, ಡಿಸಿಎಂ ಭೇಟಿಯಾದ ಕಿರಣ್ ಮಜುಂದಾರ್ ಶಾ!
ಸಿಎಂ ಸಿದ್ದರಾಮಯ್ಯ, ಉದ್ಯಮಿ ಕಿರಣ್ ಮಜುಂದಾರ್ ಶಾ, ಡಿಸಿಎಂ ಡಿಕೆ ಶಿವಕುಮಾರ್​​
ಪ್ರಸನ್ನ ಗಾಂವ್ಕರ್​
| Edited By: |

Updated on:Oct 21, 2025 | 12:43 PM

Share

ಬೆಂಗಳೂರು, ಅಕ್ಟೋಬರ್​ 21: ಸದ್ಯ ರಾಜ್ಯದಲ್ಲಿ ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ರಸ್ತೆ ಗುಂಡಿ ಸೇರಿದಂತೆ ಕಸದ ಬಗ್ಗೆ ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ (Kiran Mazumdar-Shaw) ಮತ್ತು ಮೋಹನ್‌ ದಾಸ್ ಪೈ ಸೇರಿ ಹಲವರು ಕಿಡಿಕಾರಿದ್ದರು. ರಾಜ್ಯ ಸರ್ಕಾರದ ವಿರುದ್ಧ ಉದ್ಯಮಿಗಳು ಟ್ವೀಟ್‌ನಲ್ಲೇ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಮಧ್ಯೆ ಇಂದು ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್​​ರನ್ನು ಭೇಟಿ ಮಾಡಿದ್ದಾರೆ. ಸಾಕಷ್ಟು ಟೀಕೆ, ಪ್ರತಿಟೀಕೆಗಳ ಬೆನ್ನಲ್ಲೇ  ಭೇಟಿ ಮಾಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿನ ರಸ್ತೆಗುಂಡಿಗಳ ಬಗ್ಗೆ ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್ ಶಾ ಟ್ವೀಟ್‌ ಮಾಡಿ ಆಕ್ರೋಶ ಹೊರಹಾಕಿದ್ದರು. ಇದರ ಬೆನ್ನಲ್ಲೇ ಮೋಹನ್‌ದಾಸ್‌ ಪೈ ಕೂಡ ರಸ್ತೆ ಗುಂಡಿ ಹಾಗೂ ಕಸದ ಸಮಸ್ಯೆ ಬಗ್ಗೆ ಪ್ರಶ್ನೆ ಮಾಡಿದ್ದರು. ಇದೇ ಟ್ವೀಟ್‌ಗಳ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​ ಕೂಡ ಕೆಂಡಕಾರಿದ್ದರು. ಇದೆಲ್ಲದರ ಮಧ್ಯೆ ಕಿರಣ್ ಮಜುಂದಾರ್ ಶಾ ಅವರು ಡಿಸಿಎಂ ಡಿಕೆ ಶಿವಕುಮಾರ್​​ರನ್ನು ಭೇಟಿ ಮಾಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್​​​​

ಈ ಬಗ್ಗೆ ಟ್ವೀಟ್​ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಇಂದು ನನ್ನ ನಿವಾಸದಲ್ಲಿ ಉದ್ಯಮಿ ಮತ್ತು ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್ ಶಾ ಅವರನ್ನು ಭೇಟಿ ಮಾಡಿ ಸಂತೋಷವಾಯಿತು. ಬೆಂಗಳೂರು ಸೇರಿದಮತೆ ಕರ್ನಾಟಕದ ಬೆಳವಣಿಗೆಯ ಮುಂದಿನ ಹಾದಿ ಬಗ್ಗೆ ಚರ್ಚಿಸಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​

ಇನ್ನು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿರುವ ಕಿರಣ್‌ ಮಜುಂದಾರ್ ಶಾ, ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:42 pm, Tue, 21 October 25

ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್
ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್
ಗಟ ಗಟನೆ ಚರಂಡಿ ನೀರು ಕುಡಿದ ಹಣ್ಣಿನ ವ್ಯಾಪಾರಿ
ಗಟ ಗಟನೆ ಚರಂಡಿ ನೀರು ಕುಡಿದ ಹಣ್ಣಿನ ವ್ಯಾಪಾರಿ
ಬೆಥೆಲ್ ಸ್ಪಿನ್​ಗೆ 'ತಿರುಗಿ' ಬಿದ್ದ ಶ್ರೀಲಂಕಾ
ಬೆಥೆಲ್ ಸ್ಪಿನ್​ಗೆ 'ತಿರುಗಿ' ಬಿದ್ದ ಶ್ರೀಲಂಕಾ